ಹಾಸನ: ಶಿರಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ. ಮಣ್ಣಿನಡಿ ಮೂರ್ನಾಕು ವಾಹನಗಳು ಸಿಲುಕಿ ಹಾಕಿಕೊಂಡಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಗುಡ್ಡ ಕುಸಿದಿದ್ದು, ಮೂರ್ನಾಲ್ಕು ವಾಹನಗಳು ಮಣ್ಣಿನಲ್ಲಿ ಸಿಲುಕಿಕೊಂಡಿವೆ.
ಗುಡ್ಡ ಕುಸಿಯುತ್ತಿದ್ದಂತೆ ಒಂದು ಕಂಟೈನರ್ ಪಲ್ಟಿಯಾಗಿದ್ದು, ಮತ್ತೊಂದು ಬೃಹತ್ ಕಂಟೈನರ್ ಹಾಗೂ ಇತರ ವಾಹನಗಳು ಸಿಲುಕಿದ್ದು, ಪಲ್ಟಿಯಾಗಿರುವ ಕಂಟೈನರ್ನಲ್ಲಿ ಚಾಲಕ ಸಿಲುಕಿಕೊಂಡಿದ್ದರು. ಈ ವೇಳೆ ಮತ್ತೊಂದು ಕಂಟೈನರ್ ಮತ್ತು ಟ್ಯಾಂಕರ್ ನಲ್ಲಿ ಸಿಲುಕಿದ್ದ ಚಾಲಕರು ಸೇರಿ ಮೂವರು ಚಾಲಕರನ್ನು ಹೆದ್ದಾರಿ ನಿರ್ಮಾಣ ಕಂಪನಿಯ ಸಿಬ್ಬಂದಿ ರಕ್ಷಿಸಿದ್ದಾರೆ.
ಇನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿರೋದರಿಂದ ಶಿರಾಡಿ ಘಾಟ್ ನಲ್ಲಿ ರಸ್ತೆ ಸಂಚಾರವನ್ನು ಪೂರ್ಣ ಬಂದ್ ಮಾಡಲಾಗಿದೆ. ಸಂಚಾರ ನಿರ್ಬಂಧಿಸಲಾಗಿದ್ದು ಬದಲಿ ಮಾರ್ಗದಲ್ಲಿ ಸಂಚಾರ ಮಾಡುವಂತೆ ಹಾಸನ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.
ಅಲ್ಲದೇ ತುರ್ತು ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿ ದೂರವಾಣಿ ಸಂಖ್ಯೆ 08172-261111 ಅಥವಾ ಉಚಿತ ಸಹಾಯವಾಣಿ 1077 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಶಿರಾಡಿಘಾಟ್ ನ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಪ್ರಕರಣ; ಸ್ಥಳ ಪರಿಶೀಲನೆ ನಡೆಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ
ಹಾಸನ ; ಶಿರಾಡಿಘಾಟ್ ನ ದೊಡ್ಡತಪ್ಲು ಬಳಿ ಗುಡ್ಡ ಕುಸಿತವಾದ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಡಿಸಿ, ಎಸ್ಪಿ ಹಾಗು ಅದಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್ ನಲ್ಲಿ ನಿನ್ನೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಸಂಚಾರ ಸ್ಥಗಿತವಾಗಿತ್ತು.ಇಂದು ಸ್ಥಳಕ್ಕೆ ಆಗಮಿಸಿದ ಸಚಿವರು ಪರಿಶೀಲನೆ ನಡೆಸಿದ್ದಾರೆ.ಬಳಿಕ ಮಾತನಾಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಸನ ನೆನ್ನೆ ಗುಡ್ಸ ಕುಸಿತ ಆಗಿದೆ.ನಮ್ಮ ಅದೃಷ್ಟ ಯಾರಿಗೆ ಏನೂ ತೊಂದರೆ ಆಗಿಲ್ಲ.ಗುಡ್ಡ ಕುಸಿದು ಮಣ್ಣಿನ ಅಡಿ ಸಿಲುಕಿದ್ದ ವಾಹನಗಳನ್ನ ನಮ್ಮ ಸಿಬ್ಬಂದಿ ಹೊರ ತೆಗೆದಿದ್ದಾರೆ.ಶಿರಾಡಿಘಾಟ್ ಸಮಸ್ಯೆ ಇಂದು ನಿನ್ನೆಯದಲ್ಲ.ಇದು ಹಲವು ವರ್ಷಗಳಿಂದ ಸಮಸ್ಯೆ ಇದೆ.ಗುಡ್ಡಗಳನ್ನು ನೇರವಾಗಿ ಕಡಿದಿದ್ದರಿಂದ ಸಮಸ್ಯೆ ಆಗಿದೆ.ಇಲ್ಲಿನ ಸಮಸ್ಯೆ ಬಗ್ಗೆ ನಾವು ಸಿಎಂ ಇಂದನು ಕೂಡ ಪತ್ರ ಬರೆಸುತ್ತೇವೆ.ಸೂಕ್ತ ಬಂದೊ ಬಸ್ತ್ ಮಾಡದೆ ರಸ್ತೆ ಮಾಡಿ ಸಮಸ್ಯೆ ಆಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಜಿಯೊಲಜಿಕಲ್ ಸರ್ವೆ ಆಫ್ ಇಂಡಿಯಾ ದಿಂದ ವರದಿ ಪಡೆಯುತ್ತೇವೆ ಈಗ ಏನಾಗಿದೆ, ಯಾವ ರೀತಿ ಆಗಬೇಕು ಎಂದು ವರದಿ ಪಡೆಯುತ್ತೇವೆ ಎಂದರು.
ಸಿಎಂ ಮೂಲಕ ಎನ್ ಎಚ್ ಎ ಗೆ ಪತ್ರ ಬರೆದು ಸಮಸ್ಯೆ ಬಗೆಹರಿಸಲು ತಾಕೀತು ಮಾಡುತ್ತೇವೆ.ನಮ್ಮ ರಾಜ್ಯದ ಹಲವು ಕಡೆ ಗುಡ್ಡ ಕುಸಿತ ಆಗಿದೆ.ಒಟ್ಟು 300 ಕೋಟಿ ವೆಚ್ಚದಲ್ಲಿ ಭೂ ಕುಸಿತ ಆಗೋ ಸಾದ್ಯತೆ ಕಡೆಗಳಲ್ಲಿ ಕಾಮಗಾರಿ ಮಾಡುತ್ತೇವೆ.ಈ ಬಗ್ಗೆ ಶೀಘ್ರವಾಗಿ ಡಿಸಿಗಳಿಂದ ಪ್ರಸ್ತಾವನೆ ಪಡೆದು ತಡೆ ಕ್ರಮಗಳ ನ್ನು ಕೈಗೊಳ್ಳುತ್ತೇವೆ.ನಿನ್ನೆ ವಯನಾಡಿನಲ್ಲಿ ನಡೆದ ಘಟನೆ ನಮಗೆ ಎಚ್ಚರಿಕೆ ಗಂಟೆ.ನಮಗೆ ಇಷ್ಟ ಬಂದ ಹಾಗೆ ಕೆಲಸ ಮಾಡಿದ್ರೆ ಏನಾಗುತ್ತೆ ಎಂದು ಅದು ತೋರಿಸಿದೆ.ಅಲ್ಲಿಗೆ ನಮ್ಮ ಸರ್ಕಾರದಿಂದ ಇಬ್ಬರು ಅಧಿಕಾರಿಗಳನ್ನು ಕಳಿಸಲಾಗಿದೆ ಎಂದರು.
ಇನ್ನು ಕೇರಳ ಸರ್ಕಾರ ಕ್ಕೆ ಬೇಕಾದ ನೆರವು ಕೂಡ ನೀಡ್ತೇವೆ.ಇಂದು ಕೇರಳದಲ್ಲಿ ಆಗಿದೆ ನಾಳೆ ಎಲ್ಲಿ ಬೇಕಿದ್ದರು ಆಗಬಹುದು.ಜನರು, ಸರ್ಕಾರ ಎಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದರು.