ಮನೆ Latest News ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಭಾಗಿಯಾಗಿರೋದಕ್ಕೆ ಪೊಲೀಸರಿಗೆ ಸಿಕ್ತು ಮಹತ್ತರ ಸಾಕ್ಷಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಭಾಗಿಯಾಗಿರೋದಕ್ಕೆ ಪೊಲೀಸರಿಗೆ ಸಿಕ್ತು ಮಹತ್ತರ ಸಾಕ್ಷಿ

0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ಇಂದಿಗೂ ಪರದಾಡುತ್ತಲೇ ಇದ್ದಾರೆ. ಮತ್ತೊಂದು ಕಡೆ ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೂಡ ಮುಂದೂಡಿಕೆಯಾಗಿದೆ. ಇನ್ನು ಮೊನ್ನೆ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ದರ್ಶನ್ ರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಹಾಗಾಗಿ ಸದ್ಯಕ್ಕಂತೂ ದರ್ಸನ್ ಗೆ ಜೈಲೂಟವೇ ಗ್ಯಾರಂಟಿ ಅನ್ನೋ ಹಾಗಾಗಿದೆ.

ಇನ್ನು ಸೆಪ್ಟಂಬರ್ 8 ರ ಒಳಗಾಗಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಬೇಕು. ಹಾಗಾಗಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಎಲ್ಲಾ ತಯಾರಿಗಳನ್ನು ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನು ಕೆಲವು ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರ.ಹೀಗಿರುವಾಗ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಅನ್ನೋದಕ್ಕೆ ಸಂಬಂಧಪಟ್ಟಂತೆ ಪೊಲೀಸರಿಗೆ ಇದೀಗ ಮಹತ್ವದ ಸಾಕ್ಷ್ಯವೊಂದು ಲಭ್ಯವಾಗಿದೆ ಎನ್ನಲಾಗಿದೆ.

ಅದೇನಪ್ಪಾ ಅಂದ್ರೆ ನಟ ದರ್ಶನ್ ಅವರ ರಾಜರಾಜೇಶ್ವರಿ ನಗರದ ಮನೆಯಲ್ಲಿ ಘಟನೆಯ ಬಳಿಕ ಸಿಸಿಟಿವಿ ದೃಶ್ಯಾವಳಿಗಳನ್ನು ಡಿಲೀಟ್ ಮಾಡಲಾಗಿತ್ತು ಅಂತಾ ಹೇಳಲಾಗಿತ್ತು. ಇದೀಗ ಆ ದೃಶ್ಯವಳಿಗಳನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ ಎನ್ನಲಾಗಿದೆ.

ಘಟನೆ ನಡೆದ ಸಂದರ್ಭ ಅಂದರೆ ಜೂನ್.8,  ಜೂನ್ 9 ಹಾಗೂ ಜೂನ್ 10ರಂದು ನಟ ದರ್ಶನ್ ಮನೆಯಲ್ಲಿನ ಸಿಸಿಟಿವಿ ಡಿವಿಆರ್ ನಲ್ಲಿದ್ದ ದೃಶ್ಯಾವಳಿಯನ್ನು ಡಿಲೀಟ್ ಮಾಡಲಾಗಿತ್ತು. ಸಿಸಿಟಿವಿ ಡಿವಿಆರ್ ಕೊಂಡೊಯ್ತಿದ್ದಂತ ಪೊಲೀಸರು ಅದರಲ್ಲಿನ ವೀಡಿಯೋ ರಿಟ್ರೀವ್ ಮಾಡಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಮನೆಗೆ ಪ್ರಕರಣದ ಆರೋಪಿಗಳು ಬಂದು ಹೋಗಿರೋದು ಸಿಸಿಟಿವಿ ರಿಟ್ರೀವ್ ದೃಶ್ಯಾವಳಿಯಲ್ಲಿ ಇದೆ ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೇ  ಮೃತದೇಹ ಸಾಗಿಸುತ್ತಿದ್ದರ ಬಗ್ಗೆ ಸಿಕ್ಕ ಸಾಕ್ಷ್ಯಾಧಾರಗಳಲ್ಲಿ ನಟ ದರ್ಶನ್ ಫಿಂಗರ್ ಪ್ರಿಂಟ್ ಕೂಡ ದೊರೆತಿದೆ ಎನ್ನಲಾಗುತ್ತಿದೆ.

 

ಮತ್ತೊಂದು ಕಡೆ ಪವಿತ್ರಾ ಗೌಡಗೂ ರೇಣುಕಾಸ್ವಾಮಿ ಕಳುಹಿಸಿದ್ದ ಎಲ್ಲಾ ಮೆಸೇಜ್ ಗಳನ್ನು  ಪೊಲೀಸರು ರಿಟ್ರೀವ್ ಮಾಡಿದ್ದಾರೆ. ವಾಟ್ಸ್ ಅಪ್, ಫೇಸ್ ಬುಕ್, ಇನ್ಸ್ಟಾಗ್ರಾಂನ ಎಲ್ಲಾ ಸಂದೇಶಗಳನ್ನು ರಿಟ್ರೀವ್ ಮಾಡಿರೋದಾಗಿ ಹೇಳಲಾಗುತ್ತಿದೆ. ಹಾಗಾಗಿ ಬಲವಾದ ಸಾಕ್ಷ್ಯಗಳು ಸಿಕ್ಕಿರೋದರಿಂದ ಸದ್ಯಕ್ಕೆ ದರ್ಶನ್ ಅವರಿಗೆ ಪ್ರಕರಣದಿಂದ ಪಾರಾಗೋದು ಕಷ್ಟ ಎನ್ನಲಾಗುತ್ತಿದೆ.

 

ಗಸ್ಟ್ 14ರವರೆಗೆ ಡಿ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ 13 ಆರೋಪಿಗಳು ಹಾಗೂ ತುಮಕೂರಿನ ಕೇಂದ್ರ ಕಾರಾಗೃಹದಲ್ಲಿರುವ 4 ಆರೋಪಿಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ  ಜೈಲಾಧಿಕಾರಿಗಳು 24ನೇ ಎಸಿಎಂಎಂ ಕೋರ್ಟ್‌ಗೆ  ಹಾಜರುಪಡಿಸಿದರು.

ಈ ವೇಳೆ ಪೊಲೀಸರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯ ವಿಸ್ತರಣೆ ಕೋರಿ ನ್ಯಾಯಾಧೀಶರ ಮುಂದೆ ರಿಮ್ಯಾಂಡ್‌ ಕಾಪಿಯನ್ನು ಸಲ್ಲಿಸಿ ಮನವಿ ಮಾಡಿದರು. ಈ ವೇಳೆ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್‌ ಆಗಸ್ಟ್‌ 14 ರವರೆಗೆ ವಿಸ್ತರಣೆ ಮಾಡಿ ಆದೇಶ ನೀಡಿದೆ.

ಸದ್ಯಕ್ಕಂತೂ ನಟ ದರ್ಶನ್ ಗಿಲ್ಲ ಮನೆಯೂಟ; ದರ್ಶನ್ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

ಯಾಕೋ ನಟ ದರ್ಶನ್ ಅವರ ಟೈಮೇ ಸರಿಯಿಲ್ಲ ಅನ್ಸುತ್ತೆ. ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದ ನಟ ದರ್ಶನ್ ಮನೆಯೂಟ ಬೇಕು ಜೈಲೂಟ ಸೆಟ್ ಆಗ್ತಿಲ್ಲ, ಆರೋಗ್ಯ ಕೈ ಕೊಡುತ್ತಿದೆ ಅಂತಾ ಕೋರ್ಟ್ ಅರ್ಜಿ ಸಲ್ಲಿಸುತ್ತಲೇ ಇದ್ದಾರೆ. ಮೊದಲಿಗೆ ಹೈಕೋರ್ಟ್ ಗೆ ಅರ್ಜಿ ಹಾಕಿದ್ರು. ಅಲ್ಲಿಂದ ಮತ್ತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಜುಲೈ 25 ರಂದು ದರ್ಶನ್ ಅರ್ಜಿ ವಜಾಗೊಂಡಿತ್ತು. ಹಾಗಾಗಿ ಮತ್ತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ತಾಂತ್ರಿಕ ಕಾರಣಗಳಿಂದ ವಾಪಾಸ್ ಪಡೆದಿದ್ದರು. ಮತ್ತೆ ನಿನ್ನೆ ಹೈಕೋರ್ಟ್ ಗೆ ಮನೆಯೂಟ, ಮಲಗಲು ಹಾಸಿಗೆ, ಓದಲು ಪುಸ್ತಕ ಪಡೆಯಲು ಅನುಮತಿ ನೀಡುವಂತೆ ಜೈಲಿನ ಅಧೀಕ್ಷಕರಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು.

ಇನ್ನು ಈ ಅರ್ಜಿಯಲ್ಲಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರು ಮತ್ತು ಕಾಮಾಕ್ಷಿಪಾಳ್ಯದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ , ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿತ್ತು. ಇಂದು ಆ ಅರ್ಜಿಯ ವಿಚಾರಣೆ ನಡೆಯಿತು. ಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕ ಸದಸ್ಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು.ಎರಡೂ ಕಡೆಯ ವಾದ ವಿವಾದವನ್ನು ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು ವಿಚಾರಣೆಯನ್ನು ಆಗಸ್ಟ್ 20 ಕ್ಕೆ ಮುಂದೂಡಿದೆ.ಹಾಗಾಗಿ ಸದ್ಯಕ್ಕಂತೂ ಡಿ ಬಾಸ್ ಗೆ ಜೈಲೂಟವೇ ಫಿಕ್ಸ್ ಎಂಬಂತಾಗಿದೆ.