ಮನೆ Latest News ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ; 2 ನೇ ಎಸಿಎಂಎಂ ಕೋರ್ಟ್ ಗೆ...

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ; 2 ನೇ ಎಸಿಎಂಎಂ ಕೋರ್ಟ್ ಗೆ 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಇಡಿ ಅಧಿಕಾರಿಗಳು

0

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು 2 ನೇ ಎಸಿಎಂಎಂ ಕೋರ್ಟ್ ಗೆ 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಈಗಾಗಲೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಿಲಾಗಿದೆ.

ಮಾಜಿ ಸಚಿವ ಬಿ ನಾಗೇಂದ್ರ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗವಣೆ ಪ್ರಕರಣಕ್ಕೆಸಂಬಂಧಪಟ್ಟಂತೆ ಜುಲೈ 12ರಂದು ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.ಬಳಿಕ ಅವರನ್ನು ಕೋರ್ಟ್ ಗೆ ಹಾಜರುವಡಿಸಿದಾಗ ಅವರಿಗೆ ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧ ವಿಧಿಸಲಾಗಿತ್ತು.

ಇಂದು ಮತ್ತೆ ಅವರನ್ನು ಅರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆ ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಮತ್ತೆ 14 ದಿನಗಳ ಕಾಲ  ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ. ಹಾಗಾಗಿ ಮತ್ತೆ ನಾಗೇಂದ್ರ ಅವರಿಗೆ ಜೈಲೇ ಫಿಕ್ಸ್ ಎಂಬಂತಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿ ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಇಡಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಪಟ್ಟಂತೆ  ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ಇಂದು ವಶಕ್ಕೆ ಪಡೆದಿದ್ದಾರೆ.ಇನ್ನು ಮೊನ್ನೆ ನಾಗೇಂದ್ರ ಅವರ ಕಚೇರಿ, ನಿವಾಸ ಅವರ ಆಪ್ತರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದರು. ಅಲ್ಲದೇ ಅವರ ಆಪ್ತ ಹರೀಶ್ ಅವರನ್ನು ವಶಕ್ಕೆ ಪಡೆದಿದ್ದರು. ಇಂದು ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಾಗೇಂದ್ರ ಈ ಬಗ್ಗೆ ನನಗೇನು ಗೊತ್ತಿಲ್ಲ. ನಿನ್ನೆ ನನ್ನ ಮನೆಯಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ರು. ಇವತ್ತು ಇಲ್ಲಿಗೆ ಕರೆ ತಂದಿದ್ದಾರೆ ಎಂದು ಹೇಳಿದ್ದಾರೆ.

ಮಾಜಿ ಸಚಿವ ಬಿ ನಾಗೇಂದ್ರ ಅವರ ಮನೆ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ

ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ನಾಗೇಂದ್ರ ಅವರ ನಿವಾಸ,  ವಾಲ್ಮೀಕಿ ಕಚೇರಿ ಸೇರಿದಂತೆ 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು ಮತ್ತು ಬಳ್ಳಾರಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಮನೆ, ಬೆಂಗಳೂರಿನ ವಸಂತ ನಗರದಲ್ಲಿರುವ ವಾಲ್ಮಿಕಿ ಕಚೇರಿ, ಬೆಂಗಳೂರು, ಬಳ್ಳಾರಿ,  ಹೈದ್ರಬಾದ್‌ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಾಜಿ ಸಚಿವ ಬಿ. ನಾಗೇಂದ್ರ ಅವರ  ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ನಿವಾಸದ ಮೇಲೆ  ದಾಳಿ ಮಾಡಿರುವ ಇ ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಡಾಲರ್ಸ್​ ಕಾಲೋನಿಯ ನಾಗೇಂದ್ರ ಫ್ಲ್ಯಾಟ್​ ಮೇಲೂ ದಾಳಿಯಾಗಿದ್ದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಇದರ ನಡುವೆ ಬೆಂಗಳೂರು ಹಾಗೂ ರಾಯಚೂರಿನಲ್ಲಿರುವ  ವಾಲ್ಮೀಕಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ ಅವರ ಮನೆ ಮೇಲೆ ಕೂಡ ಕೂಡ ಇಡಿ ಅಧಿಕಾರಿಗಳು ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಗೆ ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ಅವರ ನಿವಾಸಕ್ಕೆ ದಾಳಿ ಮಾಡಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ದದ್ದಲ್ ಅವರ ಬೆಂಗಳೂರಿನ ಯಲಹಂಕದಲ್ಲಿರುವ ನಿವಾಸದ ಮೇಲೂ ಕೂಡ ದಾಳಿ ನಡೆದಿದೆ.

ಇನ್ನು ನಿನ್ನೆಯಷ್ಟೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣಕ್ಕೆ ಸಂಬಂಧಪಟ್ಟಂತೆ  ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ ಅವರು ನಿನ್ನೆ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಅಧಿಕಾರಿಗಳು ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಈ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ, ಪರಮೇಶ್ವರ್  ಇಡಿ ಅಧಿಕಾರಿಗಳು ದಾಳಇ ನಡೆಸುವ ವೇಳೆ ರಾಜ್ಯ ಸರ್ಕಾರಕ್ಕೆ ತಿಳಿಸುವುದಿಲ್ಲ.ಹಾಗಾಗಿ ಅದರ ಮಾಹಿತಿ ನಮಗಿಲ್ಲ.ಅವರು ಯಾವ ಕಾರಣಕ್ಕೆ ದಾಳಿ ನಡೆಸಿದ್ದಾರೆ ಅನ್ನೋದು ಗೊತ್ತಿಲ್ಲ.ಈ ಬಗ್ಗೆ ಇನ್ನಷ್ಟೇ ಮಾಹಿತಿ ಗೊತ್ತಾಗಬೇಕಿದೆ ಎಂದಿದ್ದಾರೆ.