ಬಳ್ಳಾರಿ; ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ರೆ ರಾಜ ಮರ್ಯಾದೆ ನೀಡಲಾಗುತ್ತಿದೆ ಎಂಬ ವಿಚಾರ ಬಯಲಾಗುತ್ತಿದ್ದಂತೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಿದ್ದಂತೆ ನಟ ದರ್ಶನ್ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟ ಪಡುತ್ತಿದ್ದಾರೆ ಎನ್ನಲಾಗಿದೆ.ಅಲ್ಲದೇ ಸೆಲ್ ನಲ್ಲಿ ಒಬ್ಬರೇ ಇರೋದರಿಂದ ನಟ ದರ್ಶನ್ ಗೆ ಮಾತನಾಡೋದಕ್ಕೆ ಯಾರ್ ಸಿಗ್ತಾರೆ ಅಂತಾ ಕಾಯೋ ಹಾಗಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜನಂತಿದ್ದ ದರ್ಶನ್ ಗೆ ಬಳ್ಳಾರಿ ಜೈಲಿನಲ್ಲಿ ಕಟ್ಟಿ ಹಾಕಿದಂತಾಗಿದೆ. ಹೊರಗಡೆ ಜಗತ್ತಿನಲ್ಲಿ ಏನಾಗುತ್ತಿದೆ ಅನ್ನೋದೇ ಗೊತ್ತಾಗುತ್ತಿಲ್ಲ. ಹಾಗಾಗಿ ಜೈಲಿನ ಸಿಬ್ಬಂದಿ ಬಳಿ ಎಲ್ಲವನ್ನು ಕೇಳಿ ದರ್ಶನ್ ತಿಳಿದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ನಿರ್ಧರಿಸಿದ್ದು ಅದರ ಅಪ್ ಡೇಟ್ ಪಡೆಯಲು ದರ್ಶನ್ ಗೆ ಟಿವಿ ಬೇಕೇ ಬೇಕು. ಹಾಗಾಗಿ ಜೈಲಿನ ಸಿಬ್ಬಂದಿ ಬಳಿ ದರ್ಶನ್ ನನಗೆ ಟಿವಿ ಬೇಕು ಅಂತಾ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ಬೆನ್ನು ನೋವಿನ ಹಿನ್ನೆಲೆ ದರ್ಶನ್ ಗೆ ಸರ್ಜಿಕಲ್ ಚಯರ್ ನೀಡಲು ಅನುಮತಿ ಕೊಡಲಾಗಿದೆ. ಅದರ ಬೆನ್ನಲ್ಲೇ ಇದೀಗ ಟಿವಿಗೆ ಜೈಲಿನ ಸಿಬ್ಬಂದಿ ಬಳಿ ಬೇಡಿಕೆ ಇಟ್ಟಿದ್ದು ನಿಮಗೆ ಟಿವಿ ಬೇಕು ಅಂದ್ರೆ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಎಂದು ಜೈಲಿನ ಸಿಬ್ಬಂದಿ ತಿಳಿಸಿದ್ದಾರೆ ಎನ್ನಲಾಗಿದೆ. ಸದ್ಯ ಹೊರಗಡೆ ಏನ್ ಬೆಳವಣಿಗೆಗಳು ಆಗ್ತಿವೆ ಎಂದು ನಟ ದರ್ಶನ್ ಗೆ ಗೊತ್ತಾಗದೇ ಇರೋದರಿಂದ ಜೈಲಿನ ಸಿಬ್ಬಂದಿ ಬಳಿ ಹೊರಗೇನಾಗ್ತಿದೆ ಎಂದು ಕೇಳಿ ತಿಳಿದುಕೊಳ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಜೈಲಿನ ಬಳಿ ಯಾರು ಅಭಿಮಾನಿಗಳು ಬರುವುದು ಬೇಡ ಎಂದು ಜೈಲು ಸಿಬ್ಬಂದಿ ಮೂಲಕ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ; ಇಂದು ಅಥವಾ ನಾಳೆ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಬಳ್ಳಾರಿ ಜೈಲು ಸೇರಿದ್ದಾರೆ. ಇತ್ತ ಪೊಲೀಸರು ಪ್ರಕರಣಕ್ಕ ಸಂಬಂಧಪಟ್ಟಂತೆ ಎಲ್ಲಾ ರೀತಿಯ ತನಿಖೆ ಮುಕ್ತಾಯಗೊಳಿಸಿದ್ದು ಚಾರ್ಜ್ ಶೀಟ್ ಸಲ್ಲಿಕೆಗೆ ಮುಂದಾಗಿದ್ದಾರೆ.
ಎರಡು ದಿನಗಳ ಹಿಂದೆ ಪ್ರಕರಣ ತನಿಖಾಧಿಕಾರಿ ಎಸಿಪಿ ಚಂದನ್ ಅವರು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದರ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ 17 ಆರೋಪಿಗಳ ವಿರುದ್ಧ ಪೊಲೀಸರು 4500 ಪುಟಗಳಷ್ಟು ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು ಇಂದು ದೋಷಾರೋಪಣೆ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಪರಮೇಶ್ರ್ ಅವರು ಹೇಳಿದ್ದರು. ಆದರೆ ಇದುವರೆಗೂ ಚಾರ್ಜ್ ಶೀಟ್ ಸಲ್ಲಿಕೆಯಾಗಿಲ್ಲ.
ಅಂದ್ಹಾಗೆ ಯಾವುದೇ ಪ್ರಕರಣವಾಗಲಿ ಅದು ದಾಖಲಾದ 90 ದಿನಗಳ ಒಳಗಾಗಿ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಬೇಕು. ಇಂದು ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ದಾಖಲಾಗಿ ಸೆಪ್ಟಂಬ್ರ 9 ಕ್ಕೆ 90 ದಿನಗಳಾಗುತ್ತವೆ. ಅದರ ಮೊದಲು ಚಾರ್ಜ್ ಶೀಟ್ ಸಲ್ಲಿಸಬೇಕು. ಅಲ್ಲದೇ ಪ್ರಕರಣದಲ್ಲಿ ದರ್ಶನ್ ರನ್ನು ಎ 1 ಆರೋಪಿ ಮಾಡುವ ವಿಚಾರ ತನಿಖಾಧಿಕಾರಿಗಳಿಗೆ ಬಿಟ್ಟಿದ್ದು ಎಂದು ಪರಮೇಶ್ವರ್ ಹೇಳಿದ್ದಾರೆ. ,ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ನಂಬಿಕೆಯಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮಧ್ಯ ಪ್ರವೇಶ ಮಾಡಲ್ಲ ಎಂದು ಅವರು ಹೇಳಿದ್ದಾರೆ.
ಅಂದ್ಹಾಗೆ ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲಾಗಿದ್ದು ಅವುಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.ಇನ್ನು ಆರೋಪಿಗಳು ಕೂಡ ಪೊಲೀಸರು ಯಾವಾಗ ಚಾರ್ಜ್ ಶೀಟ್ ಸಲ್ಲಿಸ್ತಾರೆ ಅಂತಾ ಕಾಯುತ್ತಿದ್ದು ಆ ಬಳಿಕ ಜಾಮೀನಿಗೆ ಅರ್ಜಿಯನ್ನು ಸಲ್ಲಿಸಲಿದ್ದಾರೆ. ಈಗಾಗಲೇ ಎ1 ಆರೋಪಿ ಪವಿತ್ರ ಗೌಡ ಹಾಗೂ ಎ7 ಅನುಕುಮಾರ್ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಅವರಿಬ್ಬರ ಅರ್ಜಿ ಕೂಡ ವಜಾಗೊಂಡಿದೆ. ಇದೀಗ ಆರೋಪ ಪಟ್ಟಿ ಸಲ್ಲಿಕೆಯಾಗುತ್ತಲೇ ಅದರಲ್ಲಿರುವ ವಿಚಾರಗಳ ಆಧಾರದಲ್ಲಿ ಆರೋಪಿಗಳ ಪರವಾದ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ.