ಮಂಡ್ಯ : ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರೆಸ್ಟ್ ಆಗಿದ್ದ 55 ಆರೋಪಿಗಳು ಜೈಲಿನಿಂದ ರಿಲೀಸ್ ಆಗಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಉಂಟಾದ ಕೋಮು ಗಲಭೆ ಪ್ರಕರಣ ಸಂಬಂಧ ಪೊಲೀಸರು 55 ಆರೋಪಿಗಳನ್ನು ಬಂಧಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮಂಡ್ಯದ ಜಿಲ್ಲಾ ಸತ್ರ ನ್ಯಾಯಾಲಯವು ಕಳೆದ ಶುಕ್ರವಾರ ಎಲ್ಲಾ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು.ಆದರೆ ಶನಿವಾರ ಮತ್ತು ಭಾನುವಾರ ರಜೆ ಇದ್ದಿದ್ದರಿಂದ ಇಂದು ಎಲ್ಲಾ 55 ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಪ್ರಕರಣದ ಎಲ್ಲಾ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರಾಗಿತ್ತು. ತಲಾ ಒಂದು ಲಕ್ಷ ಬಾಂಡ್ ಹಾಗೂ ಪ್ರತಿ ಭಾನುವಾರ ಠಾಣೆಗೆ ಬಂದು ಸಹಿ ಹಾಕುವಂತೆ ಕೋರ್ಟ್ ಆದೇಶ ನೀಡಿತ್ತು. ಅದರಂತೆ ಇಂದು 55 ಆರೋಪಿಗಳು ಮಂಡ್ಯ ಜಿಲ್ಲಾ ಕಾರಾಗೃಹದಿಂದ ರಿಲೀಸ್ ಆಗಿದ್ದಾರೆ.
ನಾಗಮಂಗಲದಲ್ಲಿ ನಡೆದ ಗಣೇಶೋತ್ಸವದ ಮೆರವಣಿಗೆ ವೇಳೆ ಕೋಮುಗಲಭೆ ಪ್ರಕರಣ: 55 ಆರೋಪಿಗಳಿಗೆ ಜಾಮೀನು
ಮಂಡ್ಯ : ನಾಗಮಂಗಲದಲ್ಲಿ ನಡೆದ ಗಣೇಶೋತ್ಸವದ ಮೆರವಣಿಗೆ ವೇಳೆ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೆ ಒಳಗಾಗಿದ್ದ 55 ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಎಲ್ಲಾ 55 ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೇಲ್ ನೀಡಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡೂ ಕೋಮಿನ 55 ಆರೋಪಿಗಳು ಅರೆಸ್ಟ್ ಆಗಿದ್ದರು.ಅವರೆಲ್ಲರಿಗೂ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಇನ್ನು ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಧಪಟ್ಟಂತೆ ಸೆಪ್ಟಂಬರ್ 11 ರಂದು ಎರಡೂ ಕೋಮಿನ 55 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿತ್ತು. ಅದರಂತೆ ಸೆಪ್ಟಂಬರ್ 12 ರಿಂದ ಎಲ್ಲಾ 55 ಆರೋಪಿಗಳು ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದರು. ಅವರೆಲ್ಲರಿಗೂ ಇದೀಗ ಜಾಮೀನು ಮಂಜೂರಾಗಿದೆ.
ಆರೋಪಿಗಳಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದ್ದು ತಲಾ ಒಂದು ಲಕ್ಷ ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ತೆರಳಿ ಸಹಿ ಮಾಡಬೇಕು ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ ಜೊತೆಗೆ ಅಪರಾಧಿ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ ಎಂದು ಷರತ್ತು ವಿಧಿಸಿದೆ. ನಾಳೆ ಭಾನುವಾರ ರಜೆ ಹಿನ್ನೆಲೆ ಸೋಮವಾರ ಜೈಲಿನಿಂದ ಎಲ್ಲಾ 55 ಆರೋಪಿಗಳು ಬಿಡುಗಡೆ ಆಗುವ ಸಾಧ್ಯತೆ ಇದೆ.