ಮನೆ Latest News ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಸೆಷನ್ಸ್ ಕೋರ್ಟ್ ಗೆ ವರ್ಗಾಯಿಸಿದ ಮ್ಯಾಜಿಸ್ಟ್ರೇಟ್ ಕೋರ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಸೆಷನ್ಸ್ ಕೋರ್ಟ್ ಗೆ ವರ್ಗಾಯಿಸಿದ ಮ್ಯಾಜಿಸ್ಟ್ರೇಟ್ ಕೋರ್ಟ್

0

ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳು ಈಗಾಗಲೇ ಜಾಮೀನು ಪಡೆದಿದ್ದಾರೆ. ಎ 15 ಕಾರ್ತಿಕ್, ಎ16 ಕೇಶವ್, ಎ 17 ನಿಖಿಲ್ ನಾಯಕ್  ಈ ಮೂವರು ಆರೋಪಿಗಳು ಜಾಮೀನು ಪಡೆದಿದ್ದಾರೆ. ಪ್ರಕರಣದ ಎ1 ಆರೋಪಿ ಪವಿತ್ರಗೌಡ ಹಾಗೂ ಎ2 ಆರೋಪಿ ದರ್ಶನ್ ಕೂಡ ಜಾಮೀನಿಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಇಬ್ಬರ ಜಾಮೀನು ಅರ್ಜಿಯ ವಿಚಾರಣೆ ಕೂಡ ಮುಂದೂಡಿಕೆಯಾಗಿದೆ.  ಹೀಗಿರುವಾಗಲೇ ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್,  ಸೆಷನ್ಸ್ (24ನೇ ಎಸಿಎಂಎಂ) ಕೋರ್ಟ್ ಗೆ ವರ್ಗಾಯಿಸಿದೆ.

ಪ್ರಕರಣ ಮ್ಯಾಜಿಸ್ಟ್ರೇಟ್ ಕೋರ್ಟ್ ೃ ಸೆಷನ್ಸ್ (24ನೇ ಎಸಿಎಂಎಂ) ಕೋರ್ಟ್ ಗೆ ವರ್ಗಾಯಿಸಿರುವ ಹಿನ್ನೆಲೆ ಇನ್ನು ಮುಂದೆ ಪ್ರಕರಣದ ಎಲ್ಲಾ ಸಾಕ್ಷಿಗಳ ವಿಚಾರಣೆ ಸೆಷನ್ಸ್ ಕೋರ್ಟ್ ನಲ್ಲೇ ನಡೆಯಲಿದೆ.

ಸದ್ಯಕ್ಕಿಲ್ಲ ನಟ ಡಿ ಬಾಸ್ ದರ್ಶನ್ ಗೆ ಬಿಡುಗಡೆ ಭಾಗ್ಯದರ್ಶನ್ ಹಾಗೂ ಪವಿತ್ರ ಗೌಡ ಇಬ್ಬರ  ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಜಾಮೀನು ಕೋರಿ ಸೆಪ್ಟಂಬರ್ 21 ರಂದು ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಅಂದು ಆ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು ಸೆಪ್ಟಂಬರ್ 23ಕ್ಕೆ ವಿಚಾರಣೆಯನ್ನು ಮುಂದೂಡಿದ್ದರು. ಸೆಪ್ಟಂಬರ್ 23 ರಂದು ಮತ್ತೆ ವಿಚಾರಣೆ ಸೆಪ್ಟಂಬರ್ 27ಕ್ಕೆ ಮುಂದೂಡಿಕೆಯಾಗಿತ್ತು. ಅದರಂತೆ ಸೆಪ್ಟಂಬರ್ 27 ರಂದು ಬೆಂಗಳೂರಿನ ಸೇಷನ್ಸ್ ಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದಂತಹ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶರು ಕೈಗೆತ್ತಿಕೊಂಡರು. ಈ ವೇಳೆ  ಸರ್ಕಾರದ ಪರವಾದ ವಕೀಲರಾದ ಪ್ರಸನ್ನಕುಮಾರ್ ಅವರು ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದರು. ಹೀಗಾಗಿ ದರ್ಶನ್ ಪರ ವಾದ ಮಂಡನೆಗೆ ದರ್ಶನ್ ಪರ ವಕೀಲರಾದ ಸುನಿಲ್ ಕಾಲಾವಕಾಶ ಕೋರಿದರು. ಮನವಿಯನ್ನು ಪುರಸ್ಕರಿಸಿ ಕೋರ್ಟ್ ಸೆಪ್ಟೆಂಬರ್ 30 ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿತ್ತು.

ಅದರಂತೆ ಇಂದು  ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು.ಈ ವೇಳೆಯಲ್ಲಿ ಕೋರ್ಟ್ ಗೆ ನಟ ದರ್ಶನ್ ಪರ ವಕೀಲರು ದರ್ಶನ್ ಪರವಾಗಿ ವಾದ ಮಂಡಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದು ಮನವಿ ಮಾಡಿದ್ರು. ಹೀಗಾಗಿ ವಿಚಾರಣೆಯನ್ನು ಅಕ್ಟೋಬರ್.4ಕ್ಕೆ ಮುಂದೂಡಲಾಯಿತು. ಇನ್ನು ಬಾಲ್ ಯಾವಾಗ ಹೊರಗೆ ಬರ್ತಾರೆ ಅಂತಾ ದರ್ಶನ್ ಅವರ ಅಭಿಮಾನಿಗಳು ಕಾಯುತ್ತಲೇ ಇದ್ದಾರೆ. ಮತ್ತೆ ಮತ್ತೆ ಡಿ ಬಾಸ್ ಜಾಮೀನು ಅರ್ಜಿ ಮುಂದೂಡಿಕೆಯಾಗುತ್ತಿರೋದು ದರ್ಶನ್ ಅವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಇನ್ನು ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ  ನಡೆಯಿತು. ಇವಳೇ ಪವಿತ್ರ ಗೌಡ ಪರ ವಕೀಲರು ವಾದ ಮಂಡಿಸಿದರು. ವಾದ ಆಲಿಸಿದ ಬಳಿಕ ನ್ಯಾಯಾಧೀಶರು ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಮತ್ತೊಂದು ಕಡೆ ಪ್ರಕರಣದ ಮತ್ತೋರ್ವ ಆರೋಪಿವ ರವಿಶಂಕರ್ ಜಾಮೀನು ಅರ್ಜಿಯ ವಿಚಾರಣೆಯನ್ನು ಕೂಡ ಕೋರ್ಟ್ ಮಂದೂಡಿದೆ.