ಬೆಂಗಳೂರು; ಚನ್ನಪಟ್ಟಣ ಉಪಚುನಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ನಿನ್ನೆ ಐತಿಹಾಸಿಕ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ನಡೆದಿದೆ.ಸರ್ಕಾರ ಈ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ನೊಟೀಸ್ ಕೊಟ್ಟಿದ್ದಾರೆ.ಮೊನ್ನೆ ಸಿಎಂ ಆದಿಯಾಗಿ ಅವರ ಕಡೆಯಿಂದ ಎಲ್ರೂ ಹೋಗಿದ್ದಾರಲ್ಲ, ಹಾಗಿದ್ರೆ ಅವರಿಗೆ ವಾಹನದ ವ್ಯವಸ್ಥೆ ಮಾಡೇ ಇರ್ಲಿಲ್ಲವಾ?ನಿನ್ನೆ ನಮ್ಮ ಕಾರ್ಯಕ್ರಮಕ್ಕೆ ಬಂದವರ ವಿಡಿಯೋ ಮಾಡಿಕೊಂಡು, ಅಧಿಕಾರಿಗಳಿಗೆ ಹೇಳಿ ಕೇಸ್ ಹಾಕಿಸಿ ಯಾವ ಚುನಾವಣೆ ನಡೆಸಲು ಹೋಗ್ತಿದ್ದಾರೆ ಇವರು.ನಮ್ಮ ಪಕ್ಷದ ಅಧ್ಯಕ್ಷರಿಗೆ ಇದರ ಬಗ್ಗೆ ನಿನ್ನೆ ಒಂದು ನೊಟೀಸ್ ಕೊಟ್ಟಿದ್ದಾರೆ ಎಂದಿದ್ದಾರೆ.
ದಬ್ಬಾಳಿಕೆ ಮೂಲಕ ಇವರು ಚುನಾವಣೆ ನಡೆಸಲು ಹೋಗ್ತಿದ್ದಾರೆ.ಅಧಿಕಾರ ದುರುಪಯೋಗ ಪಡಿಸಿಕೊಳ್ತಿದೆ ಸರ್ಕಾರ.ಇದೆಲ್ಲವನ್ನೂ ನಾವು ಮೊದಲೇ ನಿರೀಕ್ಷೆ ಮಾಡಿದ್ದೆವು.ಇವತ್ತು ಬಿಜೆಪಿ ಕಚೇರಿಯಲ್ಲೂ ಒಂದು ಸಭೆ ಕರೆದಿದ್ದಾರೆ ವಿಜಯೇಂದ್ರ ನೇತೃತ್ವದಲ್ಲಿ.ಚನ್ನಪಟ್ಟಣದ ಕಾರ್ಯಕರ್ತರ ಜತೆಗೂ ಚರ್ಚೆ ಮಾಡಲಾಗುತ್ತೆ ಎಂದರು.
ಇನ್ನು ಸಿಎಂಗೆ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.ನಾವು ಮೂರೂ ಕ್ಷೇತ್ರ ಗೆದ್ದಾಗಿದೆ ಅಂತಾರೆ ಸಿಎಂ.ಕುಮಾರಸ್ವಾಮಿಯವರ ಭಾವನಾತ್ಮಕ ಮಾತು ಮತ್ತು ಕಣ್ಣೀರು ಜನರಿಗೆ ಬೇಸರವಾಗಿ ಹೋಗಿದೆ ಅಂದಿದ್ದಾರೆ.ಪಾಪ ಇವರು ಎಂದೂ ಜನರ ಮುಂದೆ ಕಣ್ಣೀರೇ ಹಾಕಿಲ್ವಾ?ಹೌದು, ನಾನು ಜನರ ಕಷ್ಟ ನೋಡಿ ಬಹಳ ಕಣ್ಣೀರು ಹಾಕ್ತಿದ್ದೆ.ಇವತ್ತು ಇವರ ನಡವಳಿಕೆ ಕಣ್ಣಲ್ಲೂ ನೀರು ಬರದಂಥ ಪರಿಸ್ಥಿತಿ ತಂದಿಟ್ಟಿದೆ ಎಂದರು.
ಇವರು ಈ ಚುನಾವಣೆ ಅಧಿಕಾರ, ಹಣದ ದುರ್ಬಳಕೆಯಿಂದ ಗೆದ್ದಾಗಿದೆ ಅಂತ ಹೊರಟಿದ್ದಾರಲ್ಲ, ಇವರಿಗೆ ಕಾಂಗ್ರೆಸ್ ನಿಂದ ಒಬ್ಬ ಅಭ್ಯರ್ಥಿ ಆಯ್ಕೆ ಮಾಡಲು ಆಗಲಿಲ್ಲ.ಬಿಜೆಪಿಯಿಂದ ಅಭ್ಯರ್ಥಿ ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ, ಇಷ್ಟಾದರೂ ಕುತಂತ್ರ ಬೇರೆ ಮಾಡ್ತಿದ್ದಾರೆ.ಇದನ್ನೆಲ್ಲ ಜನ ಗಮನಿಸ್ತಾರೆ.ನಾನು ಯಾರ ಬಗ್ಗೆಯೂ ಟೀಕೆ ಮಾಡಲ್ಲ ಎಂದರು.
ನನ್ನ ಕೆಲಸ ಆಧಾರದಲ್ಲಿ ಮತ ಕೇಳ್ತೇವೆಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಎನ್ ಡಿಎ ಚುನಾವಣಾ ಸಿದ್ಧತಾ ಸಭೆ
ಬೆಂಗಳೂರು; ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಎನ್ ಡಿಎ ಚುನಾವಣಾ ಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಡಾ. ಅಶ್ವಥ್ ನಾರಾಯಣ, ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕ ಎ. ಮಂಜು ಭಾಗಿಯಾಗಿದ್ದರು.ರಾಮನಗರ ಜಿಲ್ಲೆಯ ಬಿಜೆಪಿ-ಜೆಡಿಎಸ್ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಎನ್ ಡಿಎ ಮೈತ್ರಿ ಬಳಿಕ ಮೊದಲ ಬಾರಿಗೆ ಬಿಜೆಪಿ ರಾಜ್ಯ ಕಚೇರಿಗೆ ಜೆಡಿಎಸ್ ಪ್ರಮುಖ ನಾಯಕರು ಭೇಟಿ ನೀಡಿದ್ದು ವಿಶೇಷ.
ಇನ್ನು ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೂರೂ ಉಪಚುನಾವಣಾ ಕ್ಷೇತ್ರಗಳಿಗೆ ರಾಜ್ಯದ ರಾಜಕೀಯ ದಿಕ್ಕು ಬದಲಿಸುವ ಶಕ್ತಿ ಇದೆ. ಈಗಾಗಲೇ ಶಿಗ್ಗಾಂವ್ ಗೆದ್ದಾಗಿದೆ ಎಂಬ ವಾತಾವರಣ ಇದೆ.ಚನ್ನಪಟ್ಟಣ ಕ್ಷೇತ್ರ ಗಂಭೀರ ತೆಗೆದುಕೊಳ್ಳಬೇಕು. ಬಿಜೆಪಿ-ಜೆಡಿಎಸ್ ಕಾರ್ಯಕರ್ತರಲ್ಲಿ ರಣೋತ್ಸಾಹ ಇದೆ. ಇದು ನಿಖಿಲ್ ಕುಮಾರಸ್ವಾಮಿ ಗೆಲುವು ಅಲ್ಲ, ಎನ್ ಡಿಎ ಗೆಲುವು. ಬಿಜೆಪಿ ಕಾರ್ಯಕರ್ತರು ಗೆಲುವಿಗೆ ಶ್ರಮ ಹಾಕುತ್ತೇವೆ ಅಂತಾ ನಿಖಿಲ್ ಕುಮಾರಸ್ವಾಮಿಗೆ ಇಂದು ಭರವಸೆ ಕೊಟ್ಟಿದ್ದೇವೆ ಎಂದರು.
ಸಭೆ ಬಳಿಕ ಮಾತನಾಡಿದ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣಾ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಯಡಿಯೂರಪ್ಪ, ಕುಮಾರಸ್ವಾಮಿ, ದೇವೇಗೌಡರು ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡಿದ್ದಾರೆ. ಸ್ಪರ್ಧೆಗೆ ನನ್ನಲ್ಲಿ ಯಾವುದೇ ಆಕಾಂಕ್ಷೆ ಇರಲಿಲ್ಲ.ಬದಲಾದ ಸ್ಥಿತಿಯಲ್ಲಿ ತಳಮಟ್ಟದ ಕಾರ್ಯಕರ್ತರು ತೀರ್ಮಾನ ಮಾಡಿದ್ದಾರೆ.ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ರಾಜ್ಯ ಮುಖಂಡರು, ಸ್ಥಳೀಯ ಮುಖಂಡರು ಇಂದು ಸಭೆಯಲ್ಲಿ ಭಾಗಿಯಾಗಿದ್ದರು. ವಿಜಯೇಂದ್ರ ಕಾರ್ಯಕರ್ತರನ್ನು ಹುರಿದುಂಬಿಸಿ ಮೂರೂ ಕ್ಷೇತ್ರಗಳ ಗೆಲುವಿಗೆ ಕಾರ್ಯಕರ್ತರಿಗೆ ಸಂದೇಶ ಕೊಟ್ಟಿದ್ದಾರೆ ಎಂದರು.