ಮನೆ Latest News ಅಬಕಾರಿ ಅಧಿಕಾರಿಗಳ ವಿರುದ್ದ ಲಂಚದ ಆರೋಪ ವಿಚಾರ, ಅಂಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಸೂಚನೆ...

ಅಬಕಾರಿ ಅಧಿಕಾರಿಗಳ ವಿರುದ್ದ ಲಂಚದ ಆರೋಪ ವಿಚಾರ, ಅಂಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ; ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಹೇಳಿಕೆ

0

ಬೆಂಗಳೂರು; ಅಬಕಾರಿ ಅಧಿಕಾರಿಗಳ ವಿರುದ್ದ ಲಂಚದ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳ ಆಡಿಯೋ ಕೇಳಿಸಿಕೊಂಡಿದ್ದೇನೆ. ಅಂಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಅಧಿಕಾರಿಗಳನ್ನು ಅಮಾನತು ಮಾಡುತ್ತೇನೆ ಎಂದಿದ್ದಾರೆ.

ಹಿಂದಿನ ಸಚಿವರ ಮೇಲೆಯೂ ಹಲವು ಆರೋಪಗಳಿದ್ದವು. ಅಧಿಕಾರಿಗಳು ತಪ್ಪು ಮಾಡಿಯೇ ಮಾಡ್ತಿದ್ದಾರೆ.ಅಂಥ ಅಧಿಕಾರಿಗಳ ವಿರುದ್ಧ ಕ್ರಮ ಆಗುತ್ತದೆ.ಇಂಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ.ಆನ್ ಲೈನ್ ಅಪ್ಲಿಕೇಷನ್ ರಿಜೆಕ್ಟ್ ಮಾಡಿದ್ದು ಗಮನಕ್ಕೆ ಬಂದಿದೆ. ತಕ್ಷಣ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ತನಿಖೆ ಮಾಡುತ್ತೇವೆ ಎಂದಿದ್ದಾರೆ.

ಸಣ್ಣ ಸಣ್ಣ ವಿಷಯಗಳನ್ನು ಇಟ್ಟುಕೊಂಡು ಅಧಿಕಾರಿಗಳು ಅರ್ಜಿ ರಿಜೆಕ್ಟ್ ಮಾಡ್ತಿದ್ದಾರೆ.ಇದನ್ನು ಹೇಗೆ ಪರಿಹರಿಸಬೇಕು ಎಂದು ಗಮನಿಸುತ್ತೇವೆ. ತಪ್ಪು ಮಾಡಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು. ಮೋದಿಯಂಥ ಪ್ರಧಾನಿ ಆರೋಪ ಮಾಡುವ ವಿಷಯಗಳಲ್ಲ ಅದು. ಪ್ರಧಾನಿಯನ್ನೂ ಕೂಡ ಹಾದಿ ತಪ್ಪಿಸಲಾಗುತ್ತಿದೆ.ಆನ್ ಲೈನ್ ಅರ್ಜಿ ಸಲ್ಲಿಕೆ ವೇಳೆ ಸರಳೀಕರಣ ಹೇಗೆ ಮಾಡಬೇಕು ಎಂಬುದನ್ನು ಯೋಚಿಸುತ್ತಿದ್ದೇವೆ. ಆರೋಪ ಬರುತ್ತದೆ ಎಂದು ನಾನು ಈ ಬಾರಿ ಅಬಕಾರಿ ಅಧಿಕಾರಿಗಳನ್ನೂ ಕೂಡ ವರ್ಗಾವಣೆ ಮಾಡಿಲ್ಲ.ಮದ್ಯ ಮಾರಾಟಗಾರರು ಸಿಎಂ ಮುಂದೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅವರು ಅನುಭವ ಇರುವವರು, ಸ್ವತಂತ್ರರು ಎಂದಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪರಮೇಶ್ವರ್ ಪೊಲೀಸ್ ಇಲಾಖೆಗೆ ದೂರು ಬಂದರೆ ತಕ್ಷಣ ತನಿಖೆ‌ ಮಾಡಿ ಕ್ರಮ ತಗೋತೇವೆ. ಅವರು ಲೋಕಾಯುಕ್ತಕ್ಕೆ ಕೊಟ್ಟಿರೋದ್ರಿಂದ ಲೋಕಾಯುಕ್ತದವರೇ ಅದನ್ನು ನೋಡ್ತಾರೆ. ಆದರೆ ನಮ್ಮ ಇಲಾಖೆಗೆ ದೂರು ಬಂದಿಲ್ಲ. ನಮ್ಮ ಇಲಾಖೆಗೆ ದೂರು ಬಂದರೆ ತನಿಖೆ ಮಾಡ್ತೇವೆ ಎಂದಿದ್ದಾರೆ.