ಬೆಂಗಳೂರು; ಮಾಜಿ ಮುಖ್ಯಮಂತ್ರಿ ಎಸ್.ಎಸ್. ಕೃಷ್ಣ ಅವರ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚನಾ ಕಲಾಪ ನಡೆಯಿತು. ಸಂತಾಪ ಸೂಚನಾ ಕಲಾಪ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಎಸ್.ಎಂ.ಕೃಷ್ಣ ಅವರು ಮುತ್ಸದ್ದಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘ ಕಾಲ ರಾಜಕಾರಣ ಮಾಡಿದ್ದರು. ನಾನು ವಿದ್ಯಾರ್ಥಿ ಆಗಿದ್ದಾಗ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ. ಎಸ್.ಎಂ. ಕೃಷ್ಣ 1962 ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು ಎಂದರು.
ವಿಧಾನಸಭೆ, ವಿಧಾನ ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿಯಾಗಿದ್ದರು. ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು . ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದ್ದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು ಎಂದು ಆ ದಿನಗಳನ್ನು ನೆನಪಿಸಿಕೊಂಡ್ರು.
ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು.ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ .ಅವರ ಕಾಲದಲ್ಲೇ ಡಾ. ರಾಜ್ ಕುಮಾರ್ ಅವರ ಅಪಹರಣ ಆಗಿ ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಆ ಸನ್ನಿವೇಶವನ್ನು ಅವರು ನಿಭಾಯಿಸಿದ್ದರು. ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಕೃಷ್ಣ ಅವರ ಕೊಡುಗೆ ಅಪಾರ. ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದರು. ಕೃಷ್ಣ ಅವರು ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು ಎಂದರು,
ಸಂಸದೀಯ ವ್ಯವಹಾರಗಳ ಇಲಾಖೆ ಸಚಿವ ಹೆಚ್.ಕೆ. ಪಾಟೀಲ್ ಮಾತನಾಡಿ ವಿಧಾನಸೌಧದ ಆವರಣದಲ್ಲಿ ಎಸ್.ಎಂ. ಕೃಷ್ಣ ಅವರ ಪುತ್ಥಳಿ ಆಗಬೇಕು. ಆಲಮಟ್ಟಿ ಕೃಷ್ಣಾ ನೀರಾವರಿ ಯೋಜನೆ ಪ್ರದೇಶದಲ್ಲಿ ವಿಶೇಷ ಸ್ಮಾರಕ ಆಗಬೇಕು ಎಂದರು.
ಎಸ್ ಎಂ ಕೃಷ್ಣ ರಾಜ್ಯದಲ್ಲಿ ಹಲವು ಮೂಲಭೂತ ಸೌಕರ್ಯಗಳ ತರಲು ಕೆಲಸ ಮಾಡಿದ್ದಾರೆ; ಕೃಷ್ಣ ನಿಧನಕ್ಕೆ ಕೇಂದ್ರ ಸಚಿವ ಎಚ್ ಡಿಕೆ ಸಂತಾಪ
ಬೆಂಗಳೂರು; ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಪ್ರತಿಕ್ರಿಯಿಸಿರುವ ಅವರು, ಎಸ್ ಎಂ ಕೃಷ್ಣ ಅವರು ನಾಡಿಗೆ ಸಲ್ಲಿಸಿರುವ ಸೇವೆ ನಾವು ಮರೆಯಲು ಸಾಧ್ಯವಿಲ್ಲ. ದೇಶಕ್ಕೆ, ರಾಜ್ಯಕ್ಕೆ ದೊಡ್ಡ ಮಟ್ಟದ ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ ಹಲವು ಮೂಲಭೂತ ಸೌಕರ್ಯಗಳ ತರಲು ಅವರು ಕೆಲಸ ಮಾಡಿದ್ದಾರೆ. ಇತ್ತೀಚಿನ ರಾಜಕಾರಣಿಗಳಿಗೆ ಮಾದರಿ. ಅವರು ಅಜಾತ ಶತ್ರುವಾಗಿದ್ದ ರಾಜಕಾರಣಿ ಎಂದಿದ್ದಾರೆ.
ಎಸ್ ಎಂ ಕೃಷ್ಣ ಅವರ ಅಗಲಿಗೆ ನಮಗೆ ನೋವು ತಂದಿದೆ. ಅವರ ರಾಜಕೀಯದ ಸುದೀರ್ಘ ಪಯಣ ಮಾಡಿದ್ದಾರೆ. ನಾನು ಎರಡು ಬಾರಿ ಸಿಎಂ ಆಗಿದ್ದಾಗ ಅವರ ಅರ್ಶೀವಾದ ಪಡೆದಿದ್ದೇನೆ.ಅವರಿಂದ ಹಲವು ರೀತಿಯಲ್ಲಿ ಮಾರ್ಗದರ್ಶನ ಪಡೆದಿದ್ದೇನೆ. .ಬೆಂಗಳೂರು ನಗರ ಅಭಿವೃದ್ಧಿ, ಐಟಿ ಬಿಟಿ ಕೊಡುಗೆ ಅಪಾರ. ದೇವೇಗೌಡರ, ಕೃಷ್ಣ ಅವರು ಬೇರೆ ಬೇರೆ ರಾಜಕೀಯ ಹಾದಿಯಿಂದ ಬಂದವರು. ಇಬ್ಬರಲ್ಲೂ ಮುಕ್ತವಾಗಿ ಚರ್ಚೆ ಮಾಡುವ ದಿನಗಳನ್ನು ನಾನು ಕಂಡಿದ್ದೇನೆ. ಇಬ್ಬರು ವಿಶ್ವಾಸದಿಂದ ಇದ್ರು. ನಾನು ಅಂತ್ಯಕ್ರಿಯೆ ಯಲ್ಲಿ ಭಾಗಿಯಾಗಲಿದ್ದೇನೆ. ಮದ್ದೂರಿನ ಸೋಮನಹಳ್ಳಿಗೆ ನಾನೇ ಹೋಗುವೆ ಎಂದಿದ್ದಾರೆ.