ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಂವಿಧಾನಕ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಳಗಾವಿಯ ಸುವರ್ ಸೌಧದಲ್ಲೇ ಅರೆಸ್ಟ್ ಆಗಿದ್ದ ಎಂಎಲ್ ಸಿ ಸಿ ಟಿ ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಬಗ್ಗೆ ಸಿ ಟಿ ರವಿ ವಿರುದ್ಧ ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ನಿನ್ನೆ ಸುವರ್ಣ ಸೌಧದಿಂದಲೇ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಇದರ ಬೆನ್ನಲ್ಲೇ ಈ ಪ್ರಕರಣವನ್ನು ರದ್ದು ಕೋರಿ ಸಿ.ಟಿ. ರವಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅದರಂತೆ ನ್ಯಾಯಮೂರ್ತಿ ಎಂ ಜಿ ಉಮಾ ಅವರಿದ್ದ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಸಿ ಟಿ ರವಿ ಅವರ ಪರವಾಗಿ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಮೂರ್ತಿ ಎಂ ಜಿ ಉಮಾ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಸಿ ಟಿ ರವಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ಈ ಮಧ್ಯೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿ.ಟಿ. ರವಿ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು ನಾಳೆಗೆ ಮುಂದೂಡಿದ್ದಾರೆ.
ಇನ್ನು ಹೈಕೋರ್ಟ್ ನಿಂದ ಬೇಲ್ ಸಿಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಎಂಎಲ್ಸಿ ಸಿ ಟಿ ರವಿ ಸತ್ಯಮೇವ ಜಯತೆ ಅಂತ ಬೆಳಗಾವಿಯಲ್ಲಿ ಹೇಳಿದ್ದೆ . ಸತ್ಯಕ್ಕೆ ಜಯ ಸಿಕ್ಕಿದೆ . ಬೆನ್ನೆಲುಬಾಗಿ ನಿಂತ ರಾಜ್ಯ ಮತ್ತು ರಾಷ್ಟ್ರ ನಾಯಕರಿಗೆ ಧನ್ಯವಾದ ಎಂದಿದ್ದಾರೆ.
ಕಷ್ಟ ಬಂದಾಗ ಕುಗ್ಗುವುದಿಲ್ಲ. ಈ ರೀತಿ ಕೆಟ್ಟ ಸಂದರ್ಭ ಬಂದಾಗು ಕುಗ್ಗುವುದಿಲ್ಲ . ಹಲ್ಲೆ ಮಾಡಿದವರ ಮೇಲೆ ದೂರು ನೀಡಿದ್ದೇನೆ. ಆದರೆ ದೂರು ದಾಖಲಾಗಿಲ್ಲ. ನ್ಯಾಯ ಎಲ್ಲಿದೆ ಮುಖ್ಯಮಂತ್ರಿಗಳೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಿ ಟಿ ರವಿ ಪ್ರಶ್ನೆ ಮಾಡಿದ್ದಾರೆ.
ಹೈಕೋರ್ಟ್ ತೀರ್ಪು ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದೆ: ಬಿ ಜೆ ಪಿ ರಾಜ್ಯಾಧ್ಯಕ ಬಿ ವೈ ವಿಜಯೇಂದ್ರ ಹೇಳಿಕೆ
ದಾವಣಗೆರೆ; ಬಿ ಜೆ ಪಿ ರಾಜ್ಯಾಧ್ಯಕ ಬಿ ವೈ ವಿಜಯೇಂದ್ರ ಸಿ ಟಿ ರವಿ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಬೇಲ್ ನೀಡಿದ ಬೆನ್ನಲ್ಲೇ ದಾವಣಗೆರೆಯಲ್ಲಿ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಕಾನೂನು ಬಾಹಿರವಾಗಿ ಸಿ ಟಿ ರವಿ ಅವರನ್ನು ಬಂಧಿಸಿ ಪೊಲೀಸರು ರಾತ್ರಿ ಇಡೀ 5೦೦ ಕಿಮೀ ಸುತ್ತಾಡಿಸಿದ್ದಾರೆ. ಪೊಲೀಸರೇ ಕಾನೂನು ಬಾಹಿರವಾಗಿ ಸುತ್ತಾಡಿಸಿ ಕರೆದುಕೊಂಡು ಬಂದಿದ್ದಾರೆ ಎಂದಿದ್ದಾರೆ.
ಹೈಕೋರ್ಟ್ ತೀರ್ಪು ನಾನು ಸ್ವಾಗತಿಸುವೆ. ಹೈಕೋರ್ಟ್ ತೀರ್ಪು ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದೆ. ರಾಜಕೀಯ ಪಿತೂರಿ ಮಾಡಿ ಪೊಲೀಸನ್ನ ಉಪಯೋಗಿಸಿಕೊಂಡು ಕಾನೂನು ಬಾಹಿರ ಕ್ರಮ ಕೈಗೊಳ್ಳಲಾಗಿದೆ. ಹೇಳಿಕೆ ಉಲ್ಲೇಖಿಸಿದ ವಿಜಯೇಂದ್ರ ಬಿಜೆಪಿ ಕಾರ್ಯಕರ್ತರು ಬಳೆ ಹಾಕಿಕೊಂಡು ಕುಳಿತಿಲ್ಲ. ಮುಂದಿನ ಹೋರಾಟದ ಬಗ್ಗೆ ನಾಳೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಇನ್ನು ಆರ್ ಅಶೋಕ್ ಮಾತನಾಡಿ ಪಾಕಿಸ್ತಾನ ಹಿಂದಾಬಾದ್ ಹೇಳಿದವರನ್ನು ಬಂಧಿಸಿಲ್ಲ. ಸದನಕ್ಕೆ ವಿಶೇಷ ಸ್ಥಾನವಿದೆ. ಇದು ಅಲ್ಲಿ ನಡೆದ ಘಟನೆ. ಈ ಘಟನೆ ಬಗ್ಗೆ ನಾವು ಕ್ಷಮೆ ಕೇಳಲ್ಲ. ನಾವು ತಪ್ಪು ಮಾಡಿಲ್ಲ ಎಂದಿದ್ದಾರೆ. ಸಿ ಟಿ ರವಿ ಅವರನ್ನು ಕೊಲೆ ಮಾಡುವ ಉದ್ದೇಶದಿಂದ 40 ಜನ ಬಂದಿದ್ದರು. ಚಿಕ್ಕಮಗಳೂರಿಗೆ ರವಿ ಶವ ಸಾಗುತ್ತೇವೆ ಎಂದಿದ್ದರು. ಬೆಳಗಾವಿ ಆಯುಕ್ತ ಖಾನಾಪುರ ಪೊಲೀಸ್ ಠಾಣೆಗೆ ಬಂದು ಕುಳಿತಿದ್ದಾನೆ. ಅರಣ್ಯದ ಒಳಗೆ ಕರೆದುಕೊಂಡು ಹೋಗಿದ್ದರು. ಇಂದು ಕೋರ್ಟ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದ್ದು ನೋಡಿದ್ರೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ರೆ ರಾಜೀನಾಮೆ ನೀಡಿ ಹೋಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ರವಿ ಅವರನ್ನ ಹತ್ತು ಪೊಲೀಸ್ ಠಾಣೆಗೆ ಕರೆದುಕೊಂಡು ಮೂರು ಜಿಲ್ಲೆಯ ಸುತ್ತಾಡಿಸಿದ್ದಾರೆ. ಮುಸ್ಲಿಂ ಓಲೈಕೆ ಮಾಡುವ ಸರ್ಕಾರ ಇದು ಈಗ ರಾಜ್ಯದಲ್ಲಿಯೂ ಜನ ಓಡಿಸುತ್ತಾರೆ. ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ ಎಂದಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಕೇಸ್ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.