ಬೆಂಗಳೂರು; ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ. ತಂದನ್ ನಿವೇದಿತಾ ಗೌಡ, ಯುವ ರಾಜ್ ಕುಮಾರ್ ಶ್ರೀದೇವಿ, ದರ್ಶನ್ ಪ್ರಕರಣಗಳ ಮಧ್ಯೆ ಪ್ರಜ್ವಲ್ ರೇವಣ್ಣ ಅವ್ರು ಅಂತಾ ಟ್ರೋಲ್ ಗಳು ಜೋರಾದ ಬೆನ್ನಲ್ಲೇ ಇದೀಗ ಪ್ರಜ್ವಲ್ ಗೆ ಸಂಕಷ್ಟ ಎದುರಾಗಿದೆ.
ಈಗಾಗಲೇ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ಗೆ ಮತ್ತೊಂದು ಶಾಕ್ ಎದುರಾಗಿದೆ . ಮೈಸೂರಿನ ಕೆ ಆರ್ ನಗರದ ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ನಿರೀಕ್ಷಣಾ ಜಾಮೀನಿಗಾಗಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.
ಈಗಾಗಲೇ ಎರಡು ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಜೂನ್ 6 ರಂದು ಪ್ರಜ್ವಲ್ ಅವರ ಎಸ್ ಐಟಿ ಕಸ್ಟಡಿ ಅಂತ್ಯವಾಗ ಹಿನ್ನೆಲೆ ಅವರನ್ನು 42ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಅವರಿಗೆ 14 ದಿನಗಳ ಅಂದರೆ ಜೂನ್ 24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿತ್ತು. ಅದರಂತೆ ಸದ್ಯ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು.
ಇನ್ನು ಇಂದು ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಗಾಗಿ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಪ್ರಜ್ವಲ್ ರೇವಣ್ಣ ಅವರನ್ನೂ ಇನ್ನೂ ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕು. ಹಾಗಾಗಿ ನಮ್ಮ ನಮ್ಮ ಕಸ್ಟಡಿಗೆ ನೀಡಿ ಎಂದು ನ್ಯಾಯಾಧೀಶರ ಮುಂದೆ ಮನವಿಯನ್ನು ಸಲ್ಲಿಸಿದರು. ಈ ವೇಳೆ ಪ್ರಜ್ವಲ್ ರನ್ನು 6 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಅದರಂತೆ ಸದ್ಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಎಸ್ ಐ ಟಿ ಅಧಿಕಾರಿಗಳ ವಶದಲ್ಲಿ ಇದ್ದು ಮೂರೂ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಅವರನ್ನು ವಿಚಾರಣೆ ನಡೆಸಲಿದ್ದಾರೆ.