ಬೆಂಗಳೂರು : ಬಿಎಸ್ವೈ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಅವರಿಗೆ ಜಾಮೀನು ರಹಿತ ವಾರೆಂಟ್ ನ್ನು ಜಾರಿ ಮಾಡಲಾಗಿತ್ತು. ಹಾಗಾಗಿ ಅವರಿಗೆ ಬಂಧನ ಭೀತಿ ಎದುರಾಗಿದೆ. ಇದೀಗ ಅವರು ಇದರ ಬೆನ್ನಲ್ಲೇ ನಿರೀಕ್ಷಣಾ ಜಾಮೀನು ಕೋರಿ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.ಈಗಾಗಲೇ ಪ್ರಕರಣವನ್ನು ರದ್ದು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆಯ. ಇದರ ನಡುವೆ ನಿನ್ನೆ ಜಾಮೀನು ರಹಿತ ವಾರೆಂಟ್ ನ್ನು ಜಾರಿಯಾದ ಹಿನ್ನೆಲೆ ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಬಿಎಸ್ ವೈ ಅವರಿಗೆ ನೋಟಿಸ್ ನೀಡಿತ್ತು. ಈ ವೇಳೆ ನೋಟಿಸ್ ಗೆ ಉತ್ತರಿಸಿದ ಅವು ಜೂನ್ 17 ರಂದು ವಿಚಾರೆ ಹಾಜರಾಗೋದಾಗಿ ತಿಳಿಸಿದ್ದರು. ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಕುರಿತು ಕೃಷ್ಣ ಎಸ್ ದೀಕ್ಷಿತರ ಪೀಠವು ವಿಚಾರಣೆ ನಡೆಸಲಿದೆ.
ಏನಿದು ಪ್ರಕರಣ?
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದಡಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಮಾರ್ಚ್ ತಿಂಗಳಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಬಾಲಕಿಯ ತಾಯಿ ಈ ದೂರನ್ನು ದಾಖಲಿಸಿದ್ದರು. ಕೇವಲ ಬಿಎಸ್ವೈ ಮಾತ್ರವಲ್ಲದೇ ಸಂತ್ರಸ್ತೆಯ ತಾಯಿ ಒಟ್ಟು 53 ಮಂದಿ ವಿರುದ್ಧ ದೂರು ದಾಖಲಿಸಿದ್ದರು. ಅದರಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್ಗಳು ಸೇರಿದ್ದರು..ಇದೀಗ ಇದೇ ಪ್ರಕರಣ ಬಿಎಸ್ವೈ ಪಾಲಿಗೆ ಕಂಟಕವಾಗಿದೆ.
ಇನ್ನು ಬೆಂಗಳೂರನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಲ್ಲಿ ಯಡಿಯೂರಪ್ಪ ಭೇಟಿಗೆ ತೆರಳಿದ್ದ ಸಂದರ್ಭದಲ್ಲಿ ತಮ್ಮ ಪುತ್ರಿಯೊಂದಿಗೆ ಯಡಿಯೂರಪ್ಪ ಅನುಚಿತವಾಗಿ ನಡೆದುಕೊಂಡಿದ್ದರು ಎಂದು ಸಂತ್ರಸ್ಥೆಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದಡಿ ಎಫ್ ಐಆರ್ ದಾಖಲಾಗಿತ್ತಲ್ಲದೇ ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು
ಇದರ ಜೊತೆಯಲ್ಲೇ, ಯಡಿಯೂರಪ್ಪ ಅವರನ್ನು ಪ್ರಕರಣದಲ್ಲಿ ಬಂಧಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಘಟನೆ ನಡೆದು ಕೆಲವು ತಿಂಗಳುಗಳು ಕಳೆದರೂ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ, ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ ಮತ್ತು ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ವೈ ಮನೆಯ ಸಿಸಿ ಟಿವಿ ದೃಶ್ಯಾವಳಿಯನ್ನೂ ಈವರೆಗೆ ವಶಕ್ಕೆ ಪಡೆದಿಲ್ಲ ಎಂದು ಅರ್ಜಿ ಸಲ್ಲಿಸಿರುವ ಸಂತ್ರಸ್ಥೆಯ ಸಹೋದರ, ದೂರು ನೀಡಿದ್ದ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದು, ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲವಾದ್ದರಿಂದ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.