ಮನೆ ಪ್ರಸ್ತುತ ವಿದ್ಯಮಾನ ಇನ್ನೆರಡು ಮೂರು ದಿನಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸುಗ್ರೀವಾಜ್ಞೆ ಬಗ್ಗೆ ಅಂತಿಮ ತೀರ್ಮಾನವನ್ನು ಸಿಎಂ...

ಇನ್ನೆರಡು ಮೂರು ದಿನಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸುಗ್ರೀವಾಜ್ಞೆ ಬಗ್ಗೆ ಅಂತಿಮ ತೀರ್ಮಾನವನ್ನು ಸಿಎಂ ತಗೋತಾರೆ; ಗೃಹ ಸಚಿವ ಪರಮೇಶ್ವರ್ ಹೇಳಿಕೆ

0

 

ಬೆಂಗಳೂರು; ಇನ್ನೆರಡು ಮೂರು ದಿನಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸುಗ್ರೀವಾಜ್ಞೆ ಬಗ್ಗೆ ಸಿಎಂ ಅಂತಿಮ ತೀರ್ಮಾನವನ್ನು ತಗೋತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣ ಕ್ಕೆ ಸುಗ್ರೀವಾಜ್ಞೆ ವಿಳಂಬ ವಿಚಾರದ ಬಗ್ಗೆ ಮಾತನಾಡಿದ ಅವರು ಇನ್ನೆರಡು ಮೂರು ದಿನಗಳಲ್ಲಿ ಸುಗ್ರೀವಾಜ್ಞೆ ಬಗ್ಗೆ ಅಂತಿಮ ತಿರ್ಮಾನವನ್ನು ಸಿಎಂ ತಗೋತಾರೆ.ಸಿಎಂ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ.ಕಾನೂನು, ಸಂಸದೀಯ ವ್ಯವಹಾರ, ಆರ್ಥಿಕ‌ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ ಎಂದರು.

ಈಗಾಗಲೇ ಹಲವು ಕಾನೂನುಗಳಿವೆ, ಈ ಕಾನೂನುಗಳ ಅಧ್ಯಯನ ನಡೆಸಿ ಹೊಸ ಕಾನೂನು ಮಾಡಲಾಗುತ್ತೆ. ಮಹಾದೇವಪ್ಪ ಅಣ್ಣನ ಮಗನ ಹೆಸರು ಇಡಿ ರಿಪೋರ್ಟ್ ನಲ್ಲಿ ಉಲ್ಲೇಖ ವಿಚಾರದ ಬಗ್ಗೆ ಮಾತನಾಡಿದ ಅವರು ಇದರ ಬಗ್ಗೆ ತಮಗೆ ಗೊತ್ತಿಲ್ಲ ಅಂದಿದ್ದಾರೆ.ಮಾಧ್ಯಮಗಳಲ್ಲಿ ಇದರ ಬಗ್ಗೆ ಬಂದಿರೋದನ್ನು ಅಷ್ಟೇ ನಾನು ನೋಡಿದ್ದೇನೆ.ಇದರ ಹೊರತು ಬೇರೇನೂ ನನಗೆ ಗೊತ್ತಿಲ್ಲ ಎಂದಿದ್ದಾರೆ.

ಮೈಕ್ರೋಫೈನಾನ್ಸ್ ಕುರಿತ ಸುಗ್ರೀವಾಜ್ಞೆ ಸ್ವರೂಪ ಬಗ್ಗೆ ಇನ್ನೆರಡು ಮೂರು ದಿನಗಳಲ್ಲಿ ಅಂತಿಮಗೊಳಿಸಿ ನಂತರ ಸುಗ್ರೀವಾಜ್ಞೆ ಹೊರಡಿಸಲಾಗುತ್ತದೆ.ಯಾವಾಗ ಸುಗ್ರೀವಾಜ್ಞೆ ಹೊರಡಿಸಬೇಕು ಅಂತ ಸಮಯ ನಿಗದಿಗೊಳಿಸಿಲ್ಲ. ಜನರಿಗೆ ಕಿರುಕುಳ ಮಾಡ್ತಿರುವ ಘಟನೆಗಳು ನಡೀತಿವೆ, ಆತ್ಮಹತ್ಯೆ, ಊರು ಬಿಡುವ ಘಟನೆಗಳು ಆಗ್ತಿವೆ.ಇದು ನಿಲ್ಲಬೇಕು, ನೋಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೂ ಕಡಿವಾಣ ಹಾಕಬೇಕು.ನಮ್ಮ ಊರಿನಲ್ಲಿ ಎರಡೂವರೆ ಲಕ್ಷ ಕೊಟ್ಟು ನಾಲ್ಕೂವರೆ ಲಕ್ಷ ವಸೂಲು ಮಾಡಿದ್ದಾರೆ, ಆ ಮನೆಯವರು ಮನೆ ಬಿಟ್ಟು ಹೋಗಿದ್ದಾರೆ.ಇದು ನನ್ನ ಗಮನಕ್ಕೆ ಬಂದು ಸ್ಥಳಕ್ಕೆ ಅಧಿಕಾರಿಗಳನ್ನು ಕಳಿಸಿದ್ದೆ.ಈಗ ಆ‌ಮನೆಯವ್ರು ಬಂದಿದ್ದಾರೆ, ನಾನೀಗ ಅಲ್ಲಿಗೇ ಹೋಗ್ತಿದ್ದೇನೆ.ಕಾನೂನು ಮೂಲಕ ಕಿರುಕುಳ ನಿಯಂತ್ರಣ ಮಾಡೋದು ನಮ್ಮ ಉದ್ದೇಶ.ನಾವು ತರುವ ಕಾನೂನನ್ನು ಕೋರ್ಟಿನಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು ಪ್ರಶ್ನೆ ಮಾಡದಂತೆ ರೂಪಿಸ್ತೇವೆ.ಬೇರೆ ರಾಜ್ಯಗಳ ಕಾನೂನು ಅಧ್ಯಯನ ಮಾಡಿ ಹೊಸ ಕಾನೂನು ತರ್ತೇವೆ ಎಂದಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ಅವರ ಪಾತ್ರ ಇದೆ ಅನ್ನೋದು ಬಿಜೆಪಿ ಆರೋಪ.ಬೇರೆಯವ್ರು ಇದ್ದಿದ್ರೆ ಇಷ್ಟೆಲ್ಲ ದೊಡ್ಡದಾಗ್ತಿರಲಿಲ್ಲ.ಬೇರೆಯವರ ಹೆಸರು ಕೇಳಿಬರ್ತಿರೋ ಬಗ್ಗೆ ನನಗೆ ಗೊತ್ತಿಲ್ಲ. ಯತೀಂದ್ರ ಹೇಳಿಕೆ ಬಗ್ಗೆ ನಾನೇನೂ ಮಾತಾಡಲ್ಲ.ನಿನ್ನೆ ಸಂಪುಟ ಸಭೆ ನಂತರ ನಾನು ಯಾವ ದಲಿತ ಸಚಿವರ ಸಭೆಯನ್ನೂ ಮಾಡಲಿಲ್ಲ.ಎಸ್ಟಿ ಸಮುದಾಯದ ರಾಜನಹಳ್ಳಿ ಸ್ವಾಮೀಜಿಗಳು ಜಾತ್ರೆಗೆ ಕರೆಯಲು ನನ್ನ ಕೊಠಡಿಗೆ ಬಂದಿದ್ರು.ಸ್ವಾಮೀಜಿಯವ್ರು ಬಂದಿದ್ದಾರೆ ಅಂತ ತಿಳಿದು ರಾಜಣ್ಣ, ಸತೀಶ್ ಜಾರಕಿಹೊಳಿ ಸಹ ಬಂದಿದ್ರು.ನಾವೆಲ್ರೂ ಸ್ವಾಮೀಜಿಗಳ ಆಶೀರ್ವಾದ ಪಡೆದೆವು ಎಂದು ತಿಳಿಸಿದ್ದಾರೆ.

ಎಂಎಲ್‌ಸಿ ನೇಮಕದಲ್ಲಿ ಕೆಪಿಸಿಸಿ ಅಧ್ಯಕ್ಷರು, ಸಿಎಂ ಸಂಪ್ರದಾಯದಂತೆ ಕುಳಿತು ಚರ್ಚೆ ಮಾಡ್ತಾರೆ.ನಿಗಮ ಮಂಡಳಿಗಳಿಗೆ ಕಾರ್ಯಕರ್ತರ ನೇಮಕ ವಿಚಾರದ ಬಗ್ಗೆ ಮಾತನಾಡಿ ನಾವು ಪಟ್ಟಿ ಸಿದ್ಧಪಡಿಸಿ ಸಿಎಂಗೆ ಕೊಟ್ಟಿದ್ದೇವೆ.ಸಿಎಂ ಬಳಿ ಪಟ್ಟಿ ಇದೆ, ಅವ್ರೇ ತೀರ್ಮಾನ ತಗೋತಾರೆ ಎಂದರು.