ಬೆಂಗಳೂರು: ನಿಮ್ಮ ಎಲ್ಲಾ ಪ್ರಶ್ನೆಗಳಿಗೂ ನಾಳೆಯೇ ಉತ್ತರ ಕೊಡುತ್ತೇನೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಅನ್ನಭಾಗ್ಯ ಹಣ ಮತ್ತು ಗೃಹ ಲಕ್ಷ್ಮಿ ಹಣ ಪಾವತಿ ವಿಳಂಬ ವಿಚಾರ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈ ಬಗ್ಗೆ ನಾಳೆ ಸುದ್ದಿ ಗೋಷ್ಠಿ ನಡೆಸುತ್ತೇನೆ. ಕಾಂಗ್ರೆಸ್ ನ ಗ್ಯಾರಂಟಿ, ರಾಜಕೀಯ ವಿಚಾರಗಳ ಬಗ್ಗೆ ನಾಳೆ ಮಾತಾಡುತ್ತೇನೆ.ನಿಮ್ಮ ಎಲ್ಲಾ ಪ್ರಶ್ನೆಗಳಿಗೂ ನಾಳೆಯೇ ಉತ್ತರ ಕೊಡುತ್ತೇನೆ ಎಂದಿದ್ದಾರೆ.ರಾಜಕೀಯ ವಿಚಾರವೂ ನಾಳೆಯೇ ಮಾತಾಡುತ್ತೇನೆ ಎಂದರು.
ಫೆ. 20ರಂದು ಯತ್ನಾಳ್ ತಂಡದಿಂದ ಮತ್ತೆ ಸಭೆ ವಿಚಾರದ ಬಗ್ಗೆ ಮಾತನಾಡಿದ ಅವರು ಅವರು ಹಿರಿಯರು ಇದ್ದಾರೆ. ಸಭೆ ಕರೆದು ಪಕ್ಷ ಬಲಪಡಿಸುವ ಚರ್ಚೆ ಮಾಡುತ್ತಾರೆ. ಅದಕ್ಕೆ ನಾನು ಯಾಕೆ ಬೇಡ ಎನ್ನಲಿ?. ನಾನು ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.ಯಾರು ಏನೇ ಮಾಡಿದರೂ ಪಕ್ಷಕ್ಕೆ ಪೂರಕವಾಗಿ ಮಾಡುತ್ತಾರೆ ಅನ್ನೋದು ನನ್ನ ಅಭಿಲಾಷೆ ಎಂದು ತಿಳಿಸಿದ್ರು.