ಮನೆ Latest News ಹೈಕಮಾಂಡ್ ನಾಯಕರನ್ನ ಸಚಿವರು ಭೇಟಿಯಾಗುವುದರಲ್ಲಿ ತಪ್ಪು ಏನ್ ಇದೆ: ವಿಕಾಸಸೌಧದಲ್ಲಿ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಹೈಕಮಾಂಡ್ ನಾಯಕರನ್ನ ಸಚಿವರು ಭೇಟಿಯಾಗುವುದರಲ್ಲಿ ತಪ್ಪು ಏನ್ ಇದೆ: ವಿಕಾಸಸೌಧದಲ್ಲಿ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

0

ಬೆಂಗಳೂರು; ಹೈಕಮಾಂಡ್ ನಾಯಕರನ್ನ ಸಚಿವರು ಭೇಟಿಯಾಗುವುದರಲ್ಲಿ ತಪ್ಪು ಏನ್ ಇದೆ ಎಂದು ವಿಕಾಸಸೌಧದಲ್ಲಿ ಸಚಿವ ಈಶ್ವರ್ ಖಂಡ್ರೆ ಹೇಳಿಕೆ ನೀಡಿದ್ದಾರೆ.

ಮುಸಲ್ಮಾನರಿಗೆ ಗುತ್ತಿಗೆಯಲ್ಲಿ 4% ಮೀಸಲಾತಿಗೆ ಕ್ಯಾಬಿನೆಟ್ ಸಮ್ಮತಿ ವಿಚಾರದ ಬಗ್ಗೆ ಮಾತನಾಡಿದ ಅವರು ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾಗಿದೆ.70-80% ರಾಜ್ಯದ ಎಲ್ಲಾ ಸಮುದಾಯಗಳಿಗೂ ಮೀಸಲಾತಿ ಇದೆ.ಮೀಸಲಾತಿ ಸಂವಿಧಾನಾತ್ಮಕವಾಗಿ ಹಕ್ಕು ಇದೆ. ಬಿಜೆಪಿ ರಾಜಕೀಯ ಮಾಡುತ್ತಿದೆ. ಜಾತಿ, ಧರ್ಮಗಳಲ್ಲಿ‌ ಹೊಡೆದಾಡುವ ನೀತಿ‌ ಅನುಸರಿಸುತ್ತಿದ್ದಾರೆ.ನಾವು ಎಲ್ಲರಿಗೂ ನ್ಯಾಯ ಕೊಡ್ತಿರುವುದು ನುಂಗರಾರದ ಬಿಸಿತುಪ್ಪವಾಗಿದೆ ಎಂದಿದ್ದಾರೆ.

ಜಾತಿಗಣತಿ ವರದಿ ಜಾರಿ ವಿಳಂಬ ವಿಚಾರದ ಬಗ್ಗೆ ಮಾತನಾಡಿದ ಅವರು ಸಮಯೋಚಿತವಾಗಿ ಒಂದು ತೀರ್ಮಾನ ಆಗುತ್ತೆ. ಯಾವುದೇ ಸಮುದಾಯಕ್ಕೂ ಅನ್ಯಾಯ ಆಗಲು ಬಿಡಲ್ಲ ಅಂತ ಹೇಳಿದ್ದಾರೆ. ಅವರು ಹೇಳಿದ ಮೇಲೆ ಮುಗಿತು, ಅದರ ಬಗ್ಗೆ ಚರ್ಚೆ ಬೇಡ. ಸಿಎಂ ಸಿದ್ದರಾಮಯ್ಯ ಅವರು ಸೂಕ್ತ ತೀರ್ಮಾನ ಕೈಗೊಳ್ತಾರೆ ಎಂದಿದ್ದಾರೆ.

ಜೆಡಿಎಸ್‌ ಪ್ರತಿಭಟನೆ ವಿಚಾರದ ಬಗ್ಗೆ ಮಾತನಾಡಿ ಅವರು ಜೆಡಿಎಸ್‌ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಂಡಿದೆ, ಇನ್ನೇನು ಇದೆ. ಅಸ್ತಿತ್ವಕ್ಕಾಗಿ ಜೆಡಿಎಸ್‌ ಹೋರಾಟ ನಡೆಸ್ತಿದೆ ಎಂದ್ರು. ಸಚಿವರು ಹೈಕಮಾಂಡ್ ಭೇಟಿ ವಿಚಾರದ ಬಗ್ಗೆ ಮಾತನಾಡಿದ ಅವರು ಹೈಕಮಾಂಡ್ ನಾಯಕರನ್ನ ಸಚಿವರು ಭೇಟಿಯಾಗುವುದರಲ್ಲಿ ತಪ್ಪು ಏನ್ ಇದೆ. ನಮ್ಮ ಕಾರ್ಯಕ್ರಮಗಳ ಬಗ್ಗೆ ಅವರಿಗೆ ತಿಳಿಸುತ್ತೇವೆ ಅಷ್ಟೇ ಎಂದ್ರು. ಕೆಪಿಸಿಸಿ ಅಧ್ಯಕ್ಷರ ಮುಂದುವರೆಯುವ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು  ನಮ್ಮ ಹೈಕಮಾಂಡ್ ಹೇಳಿದೆ ಯಾರು ಇದರ ಬಗ್ಗೆ ಚರ್ಚೆ ಮಾಡಬೇಡಿ ಅಂತ. ಏನೇ ತೀರ್ಮಾನ ಇದ್ರೂ ಅವರೇ ತೆಗೆದುಕೊಳ್ತಾರೆ. ನಾವೇನು ಇದರ ಬಗ್ಗೆ ಮಾತನಾಡಲ್ಲ ಎಂದ್ರು.

ಕಾಡಾನೆ ದಾಳಿಗೆ ಮಹಿಳೆ ಸಾವು ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿದ ಸಚಿವ ಈಶ್ವರ ಖಂಡ್ರೆ; ಬೇಲೂರು 3 ಆನೆ ಸೆರೆ ಕಾರ್ಯಾಚರಣೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ; ಮೊದಲ ದಿನವೇ ಒಂದು ಪುಂಡಾನೆ ಸೆರೆ

ಬೆಂಗಳೂರು; ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ತುರ್ತು ಸಭೆ ನಡೆಸಿದರು. ಈ ವೇಳೆ ಬೇಲೂರು ಭಾಗದಲ್ಲಿರುವ 3 ಆನೆ ಸೆರೆ ಕಾರ್ಯಾಚರಣೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ರು. ಅದರಂತೆ ಇಂದು ಮೊದಲ ದಿನವೇ ಪುಂಡಾನೆಯೊಂದು ಸೆರೆಯಾಗಿದೆ.

ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ  ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತು ಮಾಡಲಾಗಿತ್ತು. ಅದರಂತೆ ಆನೆಗಳನ್ನು ಸೆರೆ ಹಿಡಿದು, ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪನೆಗೆ ಸಚಿವರು ಸೂಚನೆ ನೀಡಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದರು. ಹಾಸನ ವಲಯಕ್ಕೆ 2 ಥರ್ಮಲ್ ಕ್ಯಾಮರಾ ಸಹಿತ ಡ್ರೋನ್ ಖರೀದಿಸಿ ರಾತ್ರಿಯ ವೇಳೆ ಕೂಡ ಆನೆಗಳ ಸಂಚಾರ ನಿಗಾ ಇಡಬೇಕು .ಸ್ಥಳೀಯರಿಗೆ ಸಕಾಲದಲ್ಲಿ ಮಾಹಿತಿ ನೀಡಬೇಕು ಎಂದಿದ್ದರು.ಅಲ್ಲದೇ  ಆನೆಗಳ ಸಮಸ್ಯೆ ಹೆಚ್ಚಿರುವ ಪ್ರದೇಶದಲ್ಲಿ ತುರ್ತು ಸ್ಪಂದನೆಗಳಾಗಿ 2 ಹೆಚ್ಚುವರಿ ಜೀಪುಗಳು ಮತ್ತು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದಿದ್ದರು. ಆನೆಗಳ ಸಂಚಾರದ ಮಾಹಿತಿ ಬಂದ ಕೂಡಲೇ ಸ್ಪಂದಿಸುವಂತೆ ಈಶ್ವರ್ ಖಂಡ್ರೆ ಸೂಚನೆ ಕೊಟ್ಟಿದ್ದರು.

ಅದರಂತೆ ಇಂದು ಒಂದು ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ಹಾಸನ ಜಿಲ್ಲೆಯ  ಬೇಲೂರು ತಾಲೂಕಿನ ಬಿಕ್ಕೋಡು ಬಳಿಯ ಎಸ್ಟೇಟ್ ನಲ್ಲಿ 4 ಗಂಟೆಗಳ ಕಾರ್ಯಾಚರಣೆ ನಡೆಸಿ ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ.  ಬೇಲೂರು ತಾಲ್ಲೂಕಿನ ಬಿಟ್ಟೋಡು ಕ್ಯಾಂಪಿಗೆ ಮಾ.15ರಂದು ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಿಂದ ಏಳು ಸಾಕಾನೆಗಳು ಆಗಮಿಸಿದ್ದವು. ಈ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಭೀಮ, ಕಂಜನ್, ಪ್ರಶಾಂತ, ಹರ್ಷ, ಧನಂಜಯ, ಮಹೇಂದ್ರ ಮತ್ತು ಏಕಲವ್ಯ ಭಾಗವಹಿಸಿದ್ದವು. ಕಾರ್ಯಾಚರಣೆಗೂ ಮುನ್ನ, ಸ್ಥಳೀಯ ಶಾಸಕ ಎಚ್.ಕ. ಸುರೇಶ್, ತಹಸೀಲ್ದಾರ್ ಮಮತಾ, ಮತ್ತು ಅರಣ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ಪೂಜೆ ಸಲ್ಲಿಸಲಾಯಿತು.

ಅರಣ್ಯ ಇಲಾಖೆ ವಿಶೇಷ ಕಾರ್ಯತಂಡ ಪುಂಡಾನೆಗಳನ್ನು ಗುರುತಿಸಲು ಕಾಡಿಗೆ ತೆರಳಿದ್ದು, ಸತತ ನಾಲ್ಕು ಗಂಟೆಯ ನಂತರ ಕೊನೆಗೂ ಪುಂಡಾನೆಯೊಂದನ್ನು ಸೆರೆಯಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವರ್ಷದ ಮೊದಲ ವಾರವೇ ಒರ್ವನನ್ನು ಬಲಿಪಡೆದಿದ್ದ, ಕಾಡಾನೆ, ನಂತರ 2 ತಿಂಗಳ ಅವಧಿಯಲ್ಲಿ ಸಕಲೇಶಪುರ ಮತ್ತು ಬೇಲೂರು ಭಾಗದಲ್ಲಿ ನಾಲ್ವರು ಕಾಡಾನೆ ದಾಳಿಗೆ ಬಲಿಯಾದ ಹಿನ್ನಲೆಯಲ್ಲಿ, ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಮಾನವ ಮತ್ತು ಕಾಡಾನೆ ಸಂಘರ್ಷವನ್ನು ತಡೆಯಲು ಕ್ರಮಗಳನ್ನು ಕೈಗೊಂಡಿದ್ದು, ಇಂದಿನಿಂದ ಕಾಡಾನೆಯನ್ನು ಹಿಡಿಯಲು ಸರ್ಕಾರದ ಅನುಮತಿಯೊಂದಿಗೆ ಅರಣ್ಯ ಇಲಾಖೆ ಮುಂದಾಗಿತ್ತು. ಮೊದಲ ದಿನವೇ ಅರಣ್ಯ ಇಲಾಖೆಯ ಶ್ರಮಕ್ಕೆ ಫಲ ಸಿಕ್ಕಿದ್ದು, ಪುಂಡಾನೆಯೊಂದು ಸೆರೆಯಾಗಿರುವುದು ಸ್ಥಳೀಯರ ಆತಂಕವನ್ನು ಸ್ವಲ್ಪ ಕಡಿಮೆ ಮಾಡಿದೆ.