ಹಾಸನ; ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಜೆಡಿಎಸ್ ಎಂಎಲ್ಸಿ ಡಾ. ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ನೀಡಿದ ದೂರಿನಂತೆ ಎಫ್ ಐಆರ್ ದಾಖಲಾಗಿದೆ.ಸದ್ಯ ಸೂರಜ್ ರೇವಣ್ಣ ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದು ಪೊಲೀಸರು ಯಾವುದೇ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆಯಿದೆ.ಈಗಾಗಲೇ ಹಾಸನದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಇನ್ನು ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿರುವ ಸೂರಜ್ ರೇವಣ್ಣ ಇದು ನನ್ನ ವಿರುದ್ಧ ಮಾಡಿರುವ ಷಡ್ಯಂತ್ರ. ಈ ಬಗ್ಗೆ ಕಾನೂನು ಪ್ರಕಾರ ತನಿಖೆಯಾಗಲಿ. ಈಗಾಗಲೇ ದೂರು ನೀಡಿರುವ ಯುವಕನ ವಿರುದ್ಧ ನಾನು ಕೂಡ ದೂರು ನೀಡಿದ್ದೇನೆ. ತನಿಖೆಯ ಬಳಿಕ ಸತ್ಯಾಂಶ ಹೊರಗೆ ಬರಲಿದೆ ಎಂದಿದ್ದಾರೆ.
ಏನಿದು ಪ್ರಕರಣ?
ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಎಫ್ ಐ ಆರ್ ದಾಖಲಿಸಿದ್ದರು. ಪೊಲೀಸ್ ಮಹಾ ನಿರ್ದೇಶಕರು, ಗೃಹಸಚಿವರಿಗೂ ದೂರು ಸಲ್ಲಿಸಿದ್ದಾರೆ.ಇದರ ಬೆನ್ನಲ್ಲೇ ಸೂರಜ್ ಆಪ್ತ ದೂರದಾರನೇ ವಿರುದ್ಧವೇ ದೂರು ದಾಖಲಿಸಿದ್ದರು.
ಡಾ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ರಿಂದ ಪೊಲೀಸರಿಗೆ ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಮಾಡಿರೊದಾಗಿ ಸುಳ್ಳು ಹೇಳೋದಾಗಿ ಬೆದರಿಸಿ ಐದು ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ದೂರಿನಲ್ಲಿ ಘಟನೆ ಬಗ್ಗೆ ವಿವರಿಸಿದ್ದಾರೆ. ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ.ನೀನೇ ಹೋಗಿ ಬಾಸ್ ಅನ್ನು ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ . ಹಾಗೇ ಹೋದವನು ವಾಪಾಸ್ ಬಂದು ಬಳಿಕ ಬ್ಲಾಕ್ ಮೇಲ್ ಮಾಡಿರೋದಾಗಿ ಶಿವಕುಮಾರ್ ದೂರು ಕೊಟ್ಟಿದ್ದಾರೆ.
ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ.ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು.ನೀನು ನಿಮ್ಮ ಬಾಸ್ ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ದ ಲೈಂಗಿಕ ದೌರ್ಜನ್ಯ ಕೇಸ್ ಕೊಡ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ವಿಚಾರವನ್ನು ನಾನು ನಮ್ಮ ಬಾಸ್ ಗೆ ತಿಳಿಸಿದೆ.ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸ್ ಸೇರಿ ಹಲವಾರು ಜನರು ಇದ್ದರು.ನಾನೇನು ತಪ್ಪು ಮಾಡಿಲ್ಲ,ಯಾಕೆ ಹಣ ಕೊಡಬೇಕು ಎಂದು ಬಾಸ್ ಹೇಳಿದ್ರು ಎಂದು ದೂರಿನಲ್ಲಿ ಪ್ರಸ್ತಾಪ ಮಾಡಿದ್ದಾರೆ.
ನಂತರ ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್ ಸಿ ಸೀಲ್ ಹಾಕಿಸಿ ಫೋಟೊ ಹಾಕಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ. ಮೆಡಿಕೊ ಲೀಗಲ್ ಕೇಸ್ ಸೀಲ್ ಇರೊ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾನೆ.ಐದು ಕೋಟಿ ಬಳಿಕ ಮೂರು ಕೋಟಿ ,ಅಥವಾ ಕಡೆಗೆ ಎರಡೂವರೆ ಕೋಟಿಯಾದ್ರು ಹಣ ಕೊಡಿಸು ಎಂದು ಡಿಮ್ಯಾಂಡ್ ಮಾಡಿದ್ದಾನೆ ಎಂದಿದ್ದಾರೆ.ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬವಾದ ಅವರ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ ಬಗ್ಗೆ ದೂರು ನೀಡಿದ್ದಾರೆ.
ಇನ್ನು ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡೋರು ಹಣ ಕೊಡಲು ರೆಡಿ ಇದಾರೆ.ನಾನು ಬೆಂಗಳೂರಿಗೆ ಹೋಗಿ ಮಾದ್ಯಮ ದ ಮುಂದೆ ಹೋಗ್ತೇನೆ.ಸೂರಜ್ ರೇವಣ್ಣ ಗೌರವ ಹಾಳು ಮಾಡೊದಾಗಿ ಬೆದರಿಕೆ ಹಾಕಿದ್ರು ಎಂದು ಆರೋಪಿಸಿದ್ದಾರೆ.ಹೀಗೆಸುದೀರ್ಘವಾಗಿ ದೂರಿನಲ್ಲಿ ವಿವರಿಸಿದ್ದಾರೆ. ಶಿವಕುಮಾರ್ ದೂರಿನಂತೆ ಹೊಳೆನರಸೀಪುರ ನಗರಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅದರಂತೆ ಇಂದು ಸೂರಜ್ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸದ್ಯ ಬಂಧನ ಭೀತಿಯಲ್ಲಿದ್ದಾರೆ.