ಮನೆ Latest News ಕಾನೂನು ಎಲ್ಲರಿಗೂ ಒಂದೇ ಪೊನ್ನಣ್ಣವರಿಗೂ ಒಂದೇ ಮಂಥರ್ ಅವರಿಗೂ ಒಂದೇ; ಗೃಹ ಸಚಿವ ಪರಮೇಶ್ವರ್ ಹೇಳಿಕೆ

ಕಾನೂನು ಎಲ್ಲರಿಗೂ ಒಂದೇ ಪೊನ್ನಣ್ಣವರಿಗೂ ಒಂದೇ ಮಂಥರ್ ಅವರಿಗೂ ಒಂದೇ; ಗೃಹ ಸಚಿವ ಪರಮೇಶ್ವರ್ ಹೇಳಿಕೆ

0

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಕಾನೂನು ಎಲ್ಲರಿಗೂ ಒಂದೇ ಪೊನ್ನಣ್ಣವರಿಗೂ ಒಂದೇ ಮಂಥರ್ ಅವರಿಗೂ ಒಂದೇ  ಎಂದಿದ್ದಾರೆ.

ಕಾನೂನಿನಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕು ಪೊಲೀಸ್ ಇಲಾಖೆಯವರು ತೆಗೆದುಕೊಳ್ಳುತ್ತಾರೆ. ಇದು ಫೆಬ್ರವರಿಯಲ್ಲಿ ಆಗಿರುವ ಘಟನೆ . ಈಗಾಗಲೇ ಇಲಾಖೆಯಿಂದ ತನಿಖೆ ಮಾಡ್ತಿದ್ದಾರೆ. ಫೆಬ್ರವರಿಯಲ್ಲಿ ಆಗಿರುವ ಘಟನೆ ಬಗ್ಗೆ ಏನು ಮಾಹಿತಿ ಸಿಗುತ್ತೋ ನೋಡೋಣ ಎಂದಿದ್ದಾರೆ.

ಅವರು ಈಗ ಸೂಸೈಡ್ ಮಾಡಿಕೊಂಡಿದ್ದಾರೆ. ಆದರೆ ಘಟನೆಗಳು ಆಗಿರೋದು ಫೆಬ್ರವರಿಯಲ್ಲಿ. ಜೊತೆಗೆ ವಾಟ್ಸಾಪ್ ನಲ್ಲಿ ಸುದೀರ್ಘವಾದ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಅಗತ್ಯ ಬಿದ್ರೆ ಸಿಐಡಿ ಗೆ ವಹಿಸಬಹುದು ಈಗ ಸದ್ಯಕ್ಕೆ ಆ ರೀತಿ ಏನು ಕಾಣ್ತಾ ಇಲ್ಲ. ಯಾರು ದೂರು ಕೊಟ್ಟಿದ್ದಾರೆ ಅದರಲ್ಲಿ ಏನಿದೆ ಅದೆಲ್ಲವನ್ನು ನೋಡ್ತಾರೆ ಎಂದಿದ್ದಾರೆ.

ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಸಾವಿನ ಬಗ್ಗೆ ಸಮಗ್ರ ತನಿಖೆಯಾಗ್ಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ನಾಯಕರು ಆಗ್ರಹ

ಬೆಂಗಳೂರು; ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಸಾವಿನ ಬಗ್ಗೆ ಸಮಗ್ರ ತನಿಖೆಯಾಗ್ಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಈ ಬಗ್ಗೆ ಎಕ್ಸ್  ನಲ್ಲಿ ಪೋಸ್ಟ್ ಮಾಡಿದ್ದು ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ. ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿದೆ .ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ  ಪಾರದರ್ಶಕವಾಗಿ ನಡೆಯಬೇಕೆಂದು ಬಿಜೆಪಿ  ಆಗ್ರಹಪಡಿಸುತ್ತದೆ ಎಂದಿದ್ದಾರೆ.

ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಒತ್ತಡ ಉಂಟಾಗಲು ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು  ಒತ್ತಾಯಿಸುವೆ ಎಂದಿದ್ದಾರೆ.

ಮಾಜಿ ಸಚಿವ ಮತ್ತು ಶಾಸಕ ಸುರೇಶ್ ಕುಮಾರ್ ಫೇಸ್ ಬುಕ್ ಪೋಸ್ಟ್ ಹಾಕಿದ್ದು ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಹಾಗೂ ಶಾಸಕ  ಮಂಥರ್ ಗೌಡ ರವರ ಒತ್ತಡದ ಮೇರೆಗೆ ತನ್ನ ಮೇಲೆ ಪೊಲೀಸರು ದೂರು ದಾಖಲಿಸಿ ಕೊಂಡು ಎಫ್ ಐಆರ್ ದಾಖಲಿಸಿದ್ದರಿಂದ ನೊಂದಿದ್ದ ವಿನಯ್ ಸೋಮಯ್ಯ ಈ ಕ್ರಮಕ್ಕೆ ಶರಣಾಗಿದ್ದಾರೆ.ಕೊಡಗು ಜಿಲ್ಲೆಯ ವಿವಿಧ ಸಮಸ್ಯೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಈ ಕಾರ್ಯಕರ್ತ ಬೆಳಕಿಗೆ ತರುತ್ತಿದ್ದ ಕ್ರಮ, ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ಅಪರಾಧವಾಗಿ ಪರಿಗಣಿಸಲ್ಪಟ್ಟಿದೆ. ಅನ್ಯಾಯದ ವಿರುದ್ಧ ಸದಾ ದನಿ ಎತ್ತಿ ಹೋರಾಡುತ್ತಿದ್ದ ದಿ. ಎ.ಕೆ. ಸುಬ್ಬಯ್ಯನವರ ಆತ್ಮ,  ತನ್ನ ಮಗನ ರಾಜಕೀಯ ಒತ್ತಡದ ಈ ಘನಂದಾರಿ ಶೌರ್ಯ  ಕಂಡು ಇವತ್ತು ವಿಲಿ ವಿಲಿ ಒದ್ದಾಡಿರಬೇಕು.ಮಾಜಿ ಸಚಿವ ಈಶ್ವರಪ್ಪನವರ ಕಣ್ಣಿಗೆ ಸುಣ್ಣ, ಕಾನೂನು ಸಲಹೆಗಾರರ ಕಣ್ಣಿಗೆ ಬೆಣ್ಣೆ,  ಇದು ಕಾಂಗ್ರೆಸ್ ನೀತಿ ಎಂದಿದ್ದಾರೆ.