ಮನೆ Latest News ಎಲ್ಲ ಅಭ್ಯರ್ಥಿಗಳಿಗೂ KAS ಮರು ಪರೀಕ್ಷೆ ಬರೆಯಲು ಸರ್ಕಾರ ಅವಕಾಶ ನೀಡಬೇಕು; ವಿಧಾನ ಪರಿಷತ್...

ಎಲ್ಲ ಅಭ್ಯರ್ಥಿಗಳಿಗೂ KAS ಮರು ಪರೀಕ್ಷೆ ಬರೆಯಲು ಸರ್ಕಾರ ಅವಕಾಶ ನೀಡಬೇಕು; ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್ ರವಿಕುಮಾರ್ ಆಗ್ರಹ

0

ಬೆಂಗಳೂರು; ಎಲ್ಲ ಅಭ್ಯರ್ಥಿಗಳಿಗೂ KAS ಮರು ಪರೀಕ್ಷೆ ಬರೆಯಲು ಸರ್ಕಾರ ಅವಕಾಶ ನೀಡಬೇಕು;  ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್ ರವಿಕುಮಾರ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು  ಈ ಹಿಂದೆ ರಾಜ್ಯಾದ0ತ 2 ಭಾರಿ ನಡೆದ ಕೆ.ಎ.ಎಸ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸುಮಾರು 79 ಕ್ಕಿಂತ ಹೆಚ್ಚು ತಪ್ಪುಗಳಿದ್ದರೂ KPSC  ಕೇವಲ 5 ಪ್ರಶ್ನೆಗಳಿಗೆ ಮಾತ್ರ ಕೃಪಾಂಕ ನೀಡಿದೆ. ಇದು ರಾಜ್ಯದ ಕನ್ನಡ ಮಾಧ್ಯಮದ ಅಭ್ಯರ್ಥಿ ಗಳಿಗೆ ಬಹುದೊಡ್ಡ ಅನ್ಯಾಯ KPSC ಮಾಡಿದೆ.

 

kPSC ಯ ಪ್ರಶ್ನೆ ಪತ್ರಿಕೆಗಳಲ್ಲಿ ದೋಷಗಳು ಸೇರಿದಂತೆ ಅನೇಕ ಅನ್ಯಾಯ ಹಾಗೂ KAS ಮರು ಪರೀಕ್ಷೆ ನಡೆಸಬೇಕೆಂದು ಪರೀಕ್ಷಾರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಕಳೆದ ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಎಲ್ಲ ಪಕ್ಷದ ಶಾಸಕರು KPSC ಯ ಕಾರ್ಯವೈಖರಿ ಹಾಗೂ ಅವಾಂತರ ಬಗ್ಗೆ ಸುದೀರ್ಘ ಚರ್ಚೆ ನಡೆದಿತ್ತು ಎಂದಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಉಭಯ ಸದನಗಳಲ್ಲಿ  ಹೇಳಿದಂತೆ ನ್ಯಾಯಾಲಯದ ತೀರ್ಪು ಬಂದಕೂಡಲೇ ಪರೀಕ್ಷಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವುದಾಗಿ ಆಶ್ವಾಸನೆ ನೀಡಿದ್ದರು. ಈಗ ಮಾನ್ಯ ಘನ ನ್ಯಾಯಾಲಯವು 32 ಅಭ್ಯರ್ಥಿಗಳಿಗೆ ಮಾತ್ರ ಮರು ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿದೆ. ರಾಜ್ಯದ ಸುಮಾರು 70 ಸಾವಿರಕ್ಕಿಂತ ಹೆಚ್ಚು ಅಭ್ಯರ್ಥಿಗಳು KAS ಪರೀಕ್ಷೆಗೆ ಅರ್ಜಿ ಸಲ್ಲಿಸಿ, ಪರೀಕ್ಷೆ ಬರೆದಿದ್ದರು. ಎಲ್ಲ ಅಭ್ಯರ್ಥಿಗಳು ಕೂಡ ಕೋರ್ಟ್ ಮೊರೆ ಹೋಗಿದ್ದರೆ ಎಲ್ಲರಿಗೂ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಿತ್ತೇನೋ.ಆದರೆ ರಾಜ್ಯದ ಬಡ, ಗ್ರಾಮೀಣ ಪ್ರದೇಶದ, ರೈತಾಪಿ ವರ್ಗದ ಮಕ್ಕಳ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗಲು ಆರ್ಥಿಕವಾಗಿ ಅವರಿಗೆ ಕಷ್ಟ. ಮತ್ತು ಎಲ್ಲ ಅಭ್ಯರ್ಥಿಗಳು ಮರು ಪರೀಕ್ಷೆ ನಡೆಸಬೇಕೆಂದು ಅವರ ಒತ್ತಾಯವಿತ್ತು.ಹೀಗಾಗಿ KAS ಆಗಬೇಕೆಂಬ ಆಕಾಂಕ್ಷೆ ಹೊಂದಿರುವ ಎಲ್ಲ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸಿ, ಎಲ್ಲಾ ಅಭ್ಯರ್ಥಿಗಳಿಗೂ ಮತ್ತೆ ಮರು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕೆಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ

ಸಿದ್ದರಾಮಯ್ಯ ಮನೆ ಮುರಿಯುವ ಮಾತಾಡಿದ್ದಾರೆ : ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯ ಮನೆ ಮುರಿಯುವ ಮಾತಾಡಿದ್ದಾರೆ : ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಪಹಲ್ಗಾಮ್ ಉಗ್ರರ ದಾಳಿ ಪ್ರಕರಣದಲ್ಲಿ ಯುದ್ಧ ಅನಿವಾರ್ಯತೆ ಅಲ್ಲ ಸಿಎಂ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು  ಸಿದ್ದರಾಮಯ್ಯ ಮಾನಸಿಕ ಸ್ಥಿತಿ ಪೂರ್ತಿ ಮುಸ್ಲಿಮರ ಮತದ ಬಗ್ಗೆಯೇ ಯೋಚಿಸುವ ರೀತಿ ಆಗಿರುವುದು ದುರದೃಷ್ಟಕರ. ಹಾಗಾದರೆ ಸತ್ತಿರುವವರ ಪ್ರಾಣಕ್ಕೆ ಬೆಲೆಯೇ ಇಲ್ಲವೇ?. ಹಮಾಸ್ ಉಗ್ರರು ಬಂದು ತರಬೇತಿ ನೀಡಿ ಕಳುಹಿಸಿದ್ದರು ಎಂಬುದು ಮಾಹಿತಿಗಳ ಮೂಲಕ ಹೊಂದಾಣಿಕೆ ಆಗುತ್ತಿದೆ. ಇದನ್ನು ಸಿದ್ದರಾಮಯ್ಯ ಅವರು ಮಾತ್ರ ಕ್ಷಮಿಸಬಹುದಷ್ಟೇ. ದೇಶಕ್ಕೆ ಏನು ಆದರೂ ಪರವಾಗಿಲ್ಲ, ಮತ ಬಿದ್ದರೆ ಸಾಕು ಎಂಬ ಮನಸ್ಥಿತಿಗೆ ಬಂದಿದ್ದಾರೆ. ಸಿದ್ದಾಂತವೇ ಇಲ್ಲದ ಸಿದ್ದರಾಮಯ್ಯ ಇಂದು ನಮ್ಮ ಮುಂದೆ ಇದ್ದಾರೆ ಎಂದರು.

ನಿಮ್ಮ ಮನೆಯಲ್ಲಿ ಈ ರೀತಿ ಉಗ್ರರು ಬಂದು ಹೊಡೆದು ಹಾಕಿರುತ್ತಿದ್ದರೆ ಈ ರೀತಿ ಹೇಳುತ್ತಿದ್ದರಾ?. ಹಾಗಾದರೆ ಸತ್ತವರ ಮನೆ ಬಾಗಿಲಿಗೆ ಹಾರ ಹಾಕಲು ಯಾಕೆ ಹೋಗಿದ್ರಿ?. ಇಲ್ಲಿ ಬಂದು ಸತ್ತವರು ಸತ್ತರು ಅನ್ನೋದು ನಾಚಿಕೆಗೇಡಿನ ಸಂಗತಿ. ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಒಟ್ಟಾಗಿ ಹೋರಾಡೋಣ ಎಂದಿದ್ದಾರೆ. ಇಲ್ಲಿ ಸಿದ್ದರಾಮಯ್ಯ ಮನೆ ಮುರಿಯುವ ಮಾತಾಡಿದ್ದಾರೆ. ಯಾವುದೇ ಪಾಕಿಸ್ತಾನಿ ಭಾರತದಲ್ಲಿ ಇರಬಾರದು ಅಂತಾ ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. ಪಾಕಿಸ್ತಾನದಲ್ಲಿರುವ ಹಿಂದುಗಳನ್ನು ಹೊರ ಹಾಕಿದ್ದಾರೆ. ಇದರ ಬಗ್ಗೆ ಸಿದ್ದರಾಮಯ್ಯ ಒಂದು ಮಾತಾಡಿದ್ದಾರಾ? ಎಂದು ಪ್ರಶ್ನಿಸಿದ್ರು.

ಕಲ್ಬುರ್ಗಿಯಲ್ಲಿ ರಸ್ತೆಯಲ್ಲಿ ಪಾಕಿಸ್ತಾನದ ಧ್ವಜ ರಸ್ತೆಯಲ್ಲಿ ಹಾಕಿದ್ದರೆ ಮುಸ್ಲಿಂ ಮಹಿಳೆಯರು ಅದಕ್ಕೆ ಗೌರವ ತೋರಿಸಿದ್ದಾರೆ. ದೇಶದ ಒಳಗೇ ಇರುವ ದೇಶ ದ್ರೋಹಿಗಳನ್ನು ಮಟ್ಟ ಹಾಕಬೇಕು. ಸಿದ್ದರಾಮಯ್ಯ ಹೇಳಿಕೆ ಮೃತಪಟ್ಟವರಿಗೆ ಅವಮಾನ. ಕೂಡಲೇ ಸಿದ್ದರಾಮಯ್ಯ ಜನರ ಮುಂದೆ ಕ್ಷಮೆ ಕೇಳಬೇಕು ಎಂದರು.

ಕೇಂದ್ರ ಗುಪ್ತಚರ ವ್ಯವಸ್ಥೆ ವೈಫಲ್ಯ ಎಂಬ ಸಚಿವ ಸಂತೋಷ್ ಲಾಡ್ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು ಸಂತೋಷ್ ಲಾಡ್ ಇನ್ನಷ್ಟು ಮೆಚ್ಯೂರ್ ಆಗಬೇಕು. ಸೈನ್ಯದ ಬಗ್ಗೆಯೇ ಅನುಮಾನ ಪಡುತ್ತಾರಲ್ಲಾ?. ಸೈನಿಕರು ಅಲ್ಲಿ ಪ್ರಾಣದ ಹಂಗು ತೊರೆದು ಇರುವುದರಿಂದ ಇಲ್ಲಿ ಸಂತೋಷ್ ಲಾಡ್ ಆರಾಮಾಗಿ ಮಜಾ ಹೊಡೆದುಕೊಂಡು ಇದ್ದಾರೆ. ಇದೇ ರೀತಿ ಪಕ್ಷಗಳು ಪಾಕಿಸ್ತಾನದಲ್ಲೂ ಮಾಡುತ್ತಿದ್ದಾರಾ?. ದೇಶಕ್ಕೆ ಸಂಕಷ್ಟ ಬಂದಾಗ ಹೇಗೆ ನಡೆದುಕೊಳ್ಳಬೇಕು ಅಂತಾ ಕಾಂಗ್ರೆಸ್ ಕಲಿಯಬೇಕು. ಸಿದ್ದರಾಮಯ್ಯ, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಇವರೆಲ್ಲರ ಹೇಳಿಕೆಗೆ ಜನ ಪಾಠ ಕಲಿಸಿಯೇ ಕಲಿಸುತ್ತಾರ ಎಂದರು.

ಕಾಶ್ಮೀರದಲ್ಲಿ ಇರುವುದು ಐಎನ್ ಡಿಐ ಮೈತ್ರಿ ಸರ್ಕಾರ. ಯಾವುದೇ ಸೆಕ್ಯುರಿಟಿ ಬಗ್ಗೆ ಅಲ್ಲಿನ ರಾಜ್ಯ ಸರ್ಕಾರ ಕೊಡುವ ಸಲಹೆ ಮೇರೆಗೆ ಆಗುತ್ತದೆ. ರಾಮೇಶ್ವರಂ ಕೆಫೆ, ಕುಕ್ಕರ್ ಬಾಂಬ್ ಸ್ಫೋಟ ಆದಾಗ ಏನು ಮಣ್ಣು ತಿನ್ನುತ್ತಿದ್ರಾ?. ದೇಶದ ಪ್ರಶ್ನೆ ಬಂದಾಗ ಎಲ್ಲರೂ ಒಂದೇ ವಾಯ್ಸ್ ನಲ್ಲಿ ಮಾತಾಡಬೇಕು. ಆದರೆ ಸಿದ್ದರಾಮಯ್ಯ ವೋಟ್ ವಾಯ್ಸ್ ನಲ್ಲಿ ಮಾತಾಡುತ್ತಾರೆ ಎಂದು ಗರಂ ಆದ್ರು.

ಬೆಸ್ಕಾಂ ಸ್ಮಾರ್ಟ್ ಮೀಟರ್ ವಿಚಾರದಲ್ಲಿ ಹೈಕೋರ್ಟ್ ತಡೆ ವಿಚಾರದ ಬಗ್ಗೆ ಮಾತನಾಡಿ ಕೋರ್ಟ್ ಆದೇಶವನ್ನು ಸ್ವಾಗತ ಮಾಡುತ್ತೇವೆ. ಸ್ಮಾರ್ಟ್ ಮೀಟರ್ ಎನ್ನುವುದೇ ಒಂದು ದೊಡ್ಡ ಕರ್ಮಕಾಂಡ. ದೊಡ್ಡಬಳ್ಳಾಪುರದಲ್ಲಿ ಬಲವಂತವಾಗಿ ನೋಟೀಸ್ ಕೊಟ್ಟಿದ್ದಾರೆ. ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಅಂತಾ ನೋಟೀಸ್ ಕೊಟ್ಟಿದ್ದಾರೆ ಎಂದರು.

ಕಿಡಿಗೇಡಿ ಮುಸಲ್ಮಾನ ಮಹಿಳೆಯರು ಪಾಕಿಸ್ತಾನ ಧ್ವಜ ತೆರವು ಮಾಡಿ ಅವರ ಪ್ರೇಮ ಯಾರ ಕಡೆ ಇದೆ ಅಂತಾ ತೋರಿಸಿದ್ದಾರೆ. ಆದರೆ ಸಿದ್ದರಾಮಯ್ಯ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಈಗ ಹೇಳಪ್ಪ ನೀನು ಯಾರ ಪರ ಅಂತಾ ಎಂದ್ರು. ಇದೇ ವೇಳೆ  ಶಾಸಕ ವಿನಯ್ ಕುಲಕರ್ಣಿ ಮೇಲೆ ಇಡಿ ದಾಳಿ ಪ್ರಕರಣ ರಾಜಕೀಯ ಪ್ರೇರಿತ ಎಂಬ ಸಿಎಂ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿ  ಚಿನ್ನ ಖರೀದಿಗೆ ಅಕ್ರಮ ಹಣ ವರ್ಗಾವಣೆ ಮಾಡಿರುವ ಬಗ್ಗೆ ತನಿಖೆ ಮಾಡಿದ್ದು ಪೊಲೀಸರು. ಪ್ರಕರಣ ದಾಖಲಿಸಿಕೊಂಡಿದ್ದು, ಐಶ್ವರ್ಯ ಗೌಡ ಬಂಧಿಸಿದ್ದು ಇಲ್ಲಿನ ಪೊಲೀಸರು. ಅಕ್ರಮ ಹಣ ವರ್ಗಾವಣೆ ಮಾಡಿದ್ದು ಅಂತ ಯಾರೋ ಮಾಹಿತಿ ನೀಡಿದ್ದಾರೆ. ಅದಕ್ಕಾಗಿ ಇಡಿ ಈಗ ವಿಚಾರಣೆ ಮಾಡುತ್ತಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ರಾಜಕೀಯ ಪ್ರೇರಿತ ಅಂತ‌ ಹೇಳುವುದು ಎಷ್ಟರ ಮಟ್ಟಿಗೆ ಸರಿ ಎಂದಿದ್ದಾರೆ.