ಮನೆ Latest News ಸುಹಾಸ್ ಹತ್ಯೆಗೆ ಪಾಕಿಸ್ತಾನ ಜಿಂದಾಬಾದ್ ಕಾರಣ: ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್ ಹೇಳಿಕೆ

ಸುಹಾಸ್ ಹತ್ಯೆಗೆ ಪಾಕಿಸ್ತಾನ ಜಿಂದಾಬಾದ್ ಕಾರಣ: ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್ ಹೇಳಿಕೆ

0

 

ಬೆಂಗಳೂರು; ಸುಹಾಸ್ ಹತ್ಯೆಗೆ ಪಾಕಿಸ್ತಾನ ಜಿಂದಾಬಾದ್ ಕಾರಣ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್ ಹೇಳಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಇಡೀ ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆಯಿಂದ ಬೆಚ್ಚಿಬಿದ್ದಿದೆ. ಇಂದು ಮಂಗಳೂರು ಬಂದ್ ಗೂ ಕರೆ ಕೊಡಲಾಗಿದೆ. ಈ ತರಹದ ಘಟನೆಗಳು ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಆಗಿವೆ. ಸಿದ್ದರಾಮಯ್ಯ ಸರ್ಕಾರದ ಮೊದಲ ಅವಧಿಯಲ್ಲಿ 56 ಹಿಂದೂ ಕಾರ್ಯಕರ್ತರ ಕೊಲೆ ಆಗಿದೆ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಪಾಕಿಸ್ತಾನ ಜಿಂದಾಬಾದ್ ಕೂಗುವವರು, ಪಾಕ್ ಬಾವುಟ ಪ್ರದರ್ಶನ ಹೆಚ್ಚು. ಸುಹಾಸ್ ಹತ್ಯೆಗೂ ಪಾಕಿಸ್ತಾನ ಜಿಂದಾಬಾದ್ ಕಾರಣ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.

ಪಾಕಿಸ್ತಾನ ಜಿಂದಾಬಾದ್ ಕೂಗುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ದೇಶದ್ರೋಹಿಗಳ ವಿರುದ್ಧ ಗುಂಡು ಹೊಡೆದು ಸಾಯಿಸುವ ಕಾನೂನು ಬರಬೇಕು. ಸುಹಾಸ್ ಕೊಲೆ ಹಿಂದೂ ಕಾರ್ಯಕರ್ತರಿಗೆ ಬಹಳ ನೋವುಂಟು ಮಾಡಿದೆ. ಇನ್ನೆಷ್ಟು ಹಿಂದೂಗಳ ಹತ್ಯೆ ಆಗಬೇಕು?. ಸುಹಾಸ್ ಶೆಟ್ಟಿ ಚಲನವಲನ ಬಗ್ಗೆ ಹತ್ಯೆಕೋರರಿಗೆ ಹೇಳಿದವರು ಯಾರು?. ಇದರಲ್ಲಿ ಪೊಲೀಸ್ ಇಲಾಖೆ ಕೈವಾಡ ಇದ್ಯಾ ಅಂತಲೂ ತನಿಖೆ ‌ನಡೆಯಬೇಕು. ಸಿದ್ದರಾಮಯ್ಯ ಸರ್ಕಾರ ಬಂದ ಬಳಿಕ ಕಾನೂನು ಮತ್ತು ಸುವ್ಯವಸ್ಥೆ ತೀರಾ ಹದಗೆಟ್ಟಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸುಹಾಸ್ ಶೆಟ್ಟಿ ಬಳಿ ಯಾವುದೇ ಆಯುಧ ಇಲ್ಲ ಅಂತ ಗೊತ್ತಾಗಿ ದಾಳಿ ನಡೆದಿದೆ. ಈ ಮಾಹಿತಿ ಹತ್ಯೆಕೋರರಿಗೆ ಕೊಟ್ಟವರು ಯಾರು? . ಈ ಮಾಹಿತಿ ಪಡೆದೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ನೇಹಾ ಹತ್ಯೆ ಆದಾಗ, ಲವ್ ಜಿಹಾದ್ ಆದಾಗ ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಆಗ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ತರಹ ಕೊಲೆಗಳಾಗುತ್ತಿವೆ. ಸಿದ್ದರಾಮಯ್ಯ ಸಿಎಂ ಆದ ನಂತರ ಅವರ ನಡೆ, ನುಡಿಯೇ ಬದಲಾಗಿದೆ. ಹಿಂದೂ ಕಾರ್ಯಕರ್ತರ ಕೊಲೆ, ಪಹಲ್ಗಾಮ್‌, ಹಸು ಕೆಚ್ಚಲು ಕೊಯ್ದ ಪ್ರಕರಣ ಆದಾಗಲೆಲ್ಲಾ ಸಿದ್ದರಾಮಯ್ಯ ಸಬೂಬು ಕೊಡುತ್ತಾರೆ ಎಂದರು.

ಬಿಜೆಪಿ ಬೆಂಕಿ ಸುರಿಯುವ ಕೆಲಸ ಮಾಡಬಾರದೆಂಬ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿ ದಿನೇಶ್ ಗುಂಡೂರಾವ್ ಆ ಸ್ಥಿತಿಯಲ್ಲಿ ಇದ್ದಾರೆ. ಅವರಿಗೆ ಪಾಕಿಸ್ತಾನ ನಮ್ಮನ್ನು ಬೈದರೂ ಏನೂ ಅನ್ನಿಸುವುದಿಲ್ಲ. ಪಾಕ್ ಪರ ಘೋಷಣೆ ಕೂಗಿದರೂ ಅವರಿಗೆ ಏನೂ ಅನ್ನಿಸುವುದಿಲ್ಲ. ಆ ತರಹದ ಎಮ್ಮೆ ಚರ್ಮದವರು ಅವರು. ಇಡೀ ಪೊಲೀಸ್ ಇಲಾಖೆಯೇ ಕಾಂಗ್ರೆಸ್ ಪಾರ್ಟಿ ತರಹ ಆಗಿದೆ. ಪೊಲೀಸರ ಕುಮ್ಮಕ್ಕಿನಿಂದಲೇ ಈ ತರಹದ ಘಟನೆಗಳಾಗುತ್ತಿವೆ. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆರೋಪಿಸಿದ್ರು.