ಮನೆ Latest News ಪತಿಯನ್ನು ಭೇಟಿಯಾದ ಬೆನ್ನಲ್ಲೇ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದ ವಿಜಯಲಕ್ಷ್ಮೀ ದರ್ಶನ್

ಪತಿಯನ್ನು ಭೇಟಿಯಾದ ಬೆನ್ನಲ್ಲೇ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದ ವಿಜಯಲಕ್ಷ್ಮೀ ದರ್ಶನ್

0

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರನ್ನು ನೋಡೋದಕ್ಕೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಅಭಿಮಾನಿಗಳು ಪರಪ್ಪನ ಅಗ್ರಹಾರ ಜೈಲಿನತ್ತ ಬರುತ್ತಲೇ ಇದ್ದಾರೆ. ಭೇಟಿ ಮಾಡಲು ಸಾಧ್ಯವಿಲ್ಲ ಅಂತಾ ಗೊತ್ತಿದ್ರು ಅಭಿಮಾನಿಗಳು ಬಾಸ್ ಹೀಗಿದ್ದಾರೋ ಏನೋ ಅಂತಾ ಅಂದ್ಕೊಂಡು ಜೈಲು ಬಳಿ ಬಂದು ಕಾಯುತ್ತಲೇ ಇದ್ದಾರೆ. ಹೀಗಿರುವಾಗ ಎರಡು ದಿನಗಳ ಹಿಂದೆ ಡಿ ಬಾಸ್ ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀಶ್ ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿಯಾಗಿದ್ದರು. ಸುಮಾರು 15 ರಿಂದ 20 ನಿಮಿಷಗಳ ಕಾಲ ಪತ್ನಿ ಹಾಗೂ ಪುತ್ರನ ಜೊತೆ ದರ್ಶನ್ ಮಾತನಾಡಿದ್ದರು. ಈ ವೇಳೆ  ಪುತ್ರನನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದರು. ಅಲ್ಲದೇ ಪತ್ನಿ ಜೊತೆ ಮಾತನಾಡುತ್ತಲೂ ಭಾವುಕರಾಗಿದ್ದರು. ಇದೆಲ್ಲಾ ಆದ ಬೆನ್ನಲ್ಲೇ ಇದೀಗ ವಿಜಯಲಕ್ಷ್ಮೀ ದರ್ಶನ್ ಅವರು ತಮ್ಮ ಪತಿ ದರ್ಶನ್ ಅವರ ಪರವಾಗಿ ಅವರ ಕೋಟ್ಯಂತರ ಅಭಿಮಾನಿಗಳಿಗೆ ಭಾವುಕ ಪತ್ರವೊಂದನ್ನು ಬರೆದಿದ್ದಾರೆ.

ಆ ಪತ್ರದ ಸಾರಾಂಶ ಹೀಗಿದೆ…

ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.

 

ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ.

ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ.ಸತ್ಯಮೇವ ಜಯತೆ! ಹೀಗಂಥಾ ತುಂಬಾನೇ ಭಾವುಕವಾಗಿ ಪತ್ರ ಬರೆದಿದ್ದಾರೆ ವಿಜಯಲಕ್ಷ್ಮೀ. ಅಲ್ಲದೇ ದರ್ಶನ್ ಅವರು ಜೈಲು ಸೇರುತ್ತಿದ್ದಂತೆ ಅವರ ವಿರುದ್ಧವಾಗಿ ಹೇಳಿಕೆಗಳನ್ನು ನೀಡುತ್ತಿರುವವರಿಗೂ ವಿಜಯಲಕ್ಷ್ಮೀ ಅಕ್ಷರಗಳ ಮೂಲಕವೇ ಛಾಟಿ ಬೀಸಿದ್ದಾರೆ.

ಇನ್ನು ದರ್ಶನ್ ಅರೆಸ್ಟ್ ಆದ ಆರಂಭದ ಕೆಲವು ದಿನಗಳಲ್ಲಿ ದರ್ಶನ್ ಅವರನ್ನು ಪೊಲೀಸ್ ಭೇಟಿಯಾಗೋದಕ್ಕೆ ವಿಜಿ ಅವರು ಪೊಲೀಸ್ ಠಾಣೆಗೆ ಬಂದಿರಲಿಲ್ಲ. ಅಲ್ಲದೇ ಇನ್ಸ್ಟಾಗ್ರಾಂನಲ್ಲೂ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ರು. ಡಿಪಿ ತೆಗೆದು ಹಾಕಿದ್ರು. ಎಲ್ಲಾ ಪೋಸ್ಟ್ ಗಳನ್ನು ಕೂಡ ಡಿಲೀಟ್ ಮಾಡಿದ್ರು. ಆಗ ವಿಜಯಲಕ್ಷ್ಮೀ ದರ್ಶನ್ ಅವರಿಂದ ಅಂತರವನ್ನು ಕಾಯ್ದುಕೊಳ್ಳೋಕೆ ಈ ರೀತಿ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದಾದ ಬೆನ್ನಲ್ಲೇ ವಿಜಯಲಕ್ಷ್ಮೀ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ್ ಅವರು ದರ್ಶನ್ ಪರವಾಗಿ ವಾದ ಮಂಡಿಸಲು ಖ್ಯಾತ ಕ್ರಿಮಿನಲ್ ಲಾಯರ್ ಸಿ ವಿ ನಾಗೇಶ್ ಅವರನ್ನು ಭೇಟಿ ಮಾಡಲು ಯತ್ನಿಸುತ್ತಿರುವ ವೀಡಿಯೋಗಳು ವೈರಲ್ ಆಗಿತ್ತು. ಇದಾದ ಬಳಿಕ ವಿಜಯಲಕ್ಷ್ಮೀ ಅವರ ಬಗ್ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದರು. ಪತಿ ಇಷ್ಟೆಲ್ಲಾ ವಿವಾದಗಳನ್ನು ಮಾಡುತ್ತಲೇ ಇದ್ರೂ ಆಕೆ ಮಾತ್ರ ಎಲ್ಲವನ್ನೂ ಕ್ಷಮಿಸಿ ಅವರ ರಕ್ಷಣೆಗೆ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ನಿಜಕ್ಕೂ ಪತ್ನಿ ಅಂದ್ರೆ ಹಾಗಿರಬೇಕು ಎನ್ನುತ್ತಿದ್ದರು. ಇದೀಗ ಪತಿ ಪರವಾಗಿ ಅಭಿಮಾನಿಗಳಿಗೂ ವಿಜಿ ಅವರು ಪತ್ರ ಬರೆದಿರೋದು ಅವರ ಅಭಿಮಾನಿಗಳಲ್ಲಿ ಖುಶಿ ಮೂಡಿಸಿದೆ.