ಮನೆ ಪ್ರಸ್ತುತ ವಿದ್ಯಮಾನ ಹಿಂದೂ ಕಾರ್ಯಕರ್ತ ಶರಣ್ ಪಂಪ್ವೆಲ್ ಅವರನ್ನು ಬಂಧಿಸಿರುವುದು ಓಲೈಕೆ ರಾಜಕಾರಣ; ವಿಧಾನ ಪರಿಷತ್ ವಿಪಕ್ಷ ನಾಯಕ...

ಹಿಂದೂ ಕಾರ್ಯಕರ್ತ ಶರಣ್ ಪಂಪ್ವೆಲ್ ಅವರನ್ನು ಬಂಧಿಸಿರುವುದು ಓಲೈಕೆ ರಾಜಕಾರಣ; ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟ್ವೀಟ್

0

ಬೆಂಗಳೂರು; ಕಾರ್ಯಕರ್ತ ಶರಣ್ ಪಂಪ್ವೆಲ್ ಅವರನ್ನು ಬಂಧಿಸಿರುವುದು ಓಲೈಕೆ ರಾಜಕಾರಣ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕಾಲಕ್ಕೆ ತಕ್ಕಂತೆ ನಡಿಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು ಎಂಬ ಗಾದೆಯನ್ನು ಸ್ಮರಿಸುವಂತೆ ಕಾಣಿಸುತ್ತಿದೆ ಕಾಂಗ್ರೆಸ್ ಸರ್ಕಾರ ಹಾಗೂ ಗೃಹ ಇಲಾಖೆಯ ನಡೆ.ಬಂಟ್ವಾಳದಲ್ಲಿ ವೈಯಕ್ತಿಕ ಕಾರಣಕ್ಕೆ ನಡೆದ ಅನ್ಯಕೋಮಿನ ಯುವಕನ ಹತ್ಯೆ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಬಂಧಿಸುವ ಬದಲು, ಪೊಲೀಸ್ ಇಲಾಖೆ ಹಿಂದೂ ಕಾರ್ಯಕರ್ತ ಶರಣ್ ಪಂಪ್ವೆಲ್ ಅವರನ್ನು ಬಂಧಿಸಿರುವುದು ಓಲೈಕೆ ರಾಜಕಾರಣದ ಭಾಗವಾಗಿದೆ ಎಂದಿದ್ದಾರೆ.

ನಿಷ್ಠುರ ಪ್ರಕರಣವೊಂದರಲ್ಲಿ ನಿಜವಾದ ಆರೋಪಿಗಳನ್ನು ಪತ್ತೆಹಚ್ಚುವ ಬದಲು, ಪೊಲೀಸ್ ಇಲಾಖೆ ರಾಜಕೀಯ ಒತ್ತಡಕ್ಕೆ ಶರಣಾಗುತ್ತಿರುವುದು ಇದರಿಂದ ಸ್ಪಷ್ಟವಾಗಿದೆ .ಇಂತಹ ತಾರತಮ್ಯ ಹಾಗೂ ದಮನಾತ್ಮಕ ರಾಜಕಾರಣದ ವಿರುದ್ಧ ಪ್ರತಿಯೊಬ್ಬ ನಾಗರಿಕನು ಧೈರ್ಯದಿಂದ ನಿಲ್ಲಬೇಕು ಎಂದಿದ್ದಾರೆ.