ಮನೆ Latest News ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ; ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐಎಗೆ ಕೇಂದ್ರ ಸರ್ಕಾರಕ್ಕೆ...

ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ; ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐಎಗೆ ಕೇಂದ್ರ ಸರ್ಕಾರಕ್ಕೆ ವಹಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಬಿಜೆಪಿ ನಾಯಕರು

0

ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐಎಗೆ ವಹಿಸಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ 12 ಮಂದಿಯನ್ನು ಬಂಧಿಸಲಾಗಿದ್ದು, ಪ್ರಕರಣವನ್ನು ಎನ್ ಐಎ ವಹಿಸಿದ್ದಕ್ಕೆ ಬಿಜೆಪಿ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ  ಸಿ ಟಿ ರವಿ ಪ್ರತಿಕ್ರಿಯಿಸಿದ್ದು ಕೇಂದ್ರ ಸರ್ಕಾರದ ನಿರ್ಧಾರನವನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಗೆ ವಹಿಸಬೇಕು ಅನ್ನೋದು ನಮ್ಮೆಲ್ಲರ ಬೇಡಿಕೆಯಾಗಿತ್ತು. ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಪುರಸ್ಕರಿಸಿ ಎನ್‌ಐಎಗೆ ವಹಿಸಿದೆ. ಇವರಿಗೆ ಫಂಡ್ ಮಾಡಿದವರು ಯಾರು..? ದೇಶದ ಒಳ ಹಾಗೂ ಹೊರಗೆ ಪೂರ್ವಾನುಗ್ರಹಪೀಡಿತವಾಗಿ ಸಹಾಯವಾಗ್ತಿದೆ. ಆ್ಯಂಟಿ ಕಮ್ಯುನಲ್ ಫೋರ್ಸ್‌ನ ರಚನೆ ಮಾಡಿದ್ದಾರೆ. ರಾಜ್ಯ ಸರ್ಕಾರದ ತನಿಖೆ ಮೇಲೆ ನಂಬಿಕೆ ಇರಲಿಲ್ಲ. ಹಿಂದೂ ಕಾರ್ಯಕರ್ತರ ಮೇಲೆ ಇದ್ದ ಪೂರ್ವಾನುಗ್ರಹ ಪೀಡಿತ ಭಾವನೆ  ಬದಲಾಗಿಲ್ಲ.ಹೀಗಾಗಿ ಎನ್‌ಐಗೆ ನೀಡಿದ್ದು ಸ್ವಾಗತಿಸುತ್ತೇನೆ ಎಂದಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು ಬಿಜೆಪಿ ನಿಯೋಗ ಮಂಗಳೂರಿಗೆ ಹೋಗ್ತಾ ಇರೋದು. ಎನ್ ಐಎಗೆ ತನಿಖೆ ಕೊಟ್ಟಿದ್ದು ಎರಡು ಕಾಕತಾಳಿಯ. ಇವತ್ತಿನ ನಿರ್ಧಾರವನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ.

ಎಂ ಎಲ್ ಸಿ ಎನ್ ರವಿಕುಮಾರ್ ಅವರು ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಸುಹಾಸ್ ಶೆಟ್ಟಿ ಪ್ರಕರಣ ಎನ್‌ಐಗೆ ವರ್ಗಾವಣೆ ಮಾಡಿದ್ದಾರೆ. ಇದರಿಂದ ನ್ಯಾಯ ಸಿಗಬಹುದು ಎಂಬ ನಂಬಿಕೆ ರಾಜ್ಯದ ಜನರಿಗೆ ಹುಟ್ಟಿದೆ. ಪದೇ ಪದೇ ಈ ರೀತಿಯ ಹತ್ಯೆಗೆ ಕಾರಣ ಯಾರು. ಯಾವ ಶಕ್ತಿ ಇದೆ ಅನ್ನೋದರ ಸಂಪೂರ್ಣ ಎನ್‌ಕ್ವೈರಿ ಆಗಬೇಕು ಎಂದು ತಿಳಿಸಿದ್ದಾರೆ. ಪ್ರಕರಣ ಎನ್‌ಐಎಗೆ ವರ್ಗಾವಣೆ ಆಗಿರೋದು ಸ್ವಾಗತಾರ್ಹ. ಪ್ರವೀಣ್ ನೆಟ್ಟರೂ ಹತ್ಯೆ ಪ್ರಕರಣವನ್ನ ಎನ್ ಐಗೆ ಕೊಟ್ಟಾಗ. ಈ ಹತ್ಯೆಯಲ್ಲಿ ಯಾರು ಭಾಗಿಯಾಗಿದ್ರು ಅನ್ನೋದನ್ನ ಬೇಧಿಸಿದ್ದು ಎನ್ ಐಎ. ಹೀಗಾಗಿ ಸುಹಾಸ್ ಶೆಟ್ಟಿ ಪ್ರಕರಣವನ್ನ ಎನ್‌ಐಎಗೆ ವರ್ಗಾವಣೆ ಮಾಡಿದ್ದು ಸ್ವಾಗತಾರ್ಹ ಎಂದಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕೂಡ ಪ್ರತಿಕ್ರಿಯಿಸಿದ್ದು ಸುಹಾಸ್ ಶೆಟ್ಟಿ ಅವರ ಕೊಲೆಯಲ್ಲಿ ಭಾಗಿಯಾಗಿದ್ದ ಪಿ ಎಫ್ ಐ ಹಾಗೂ ಇನ್ನಿತರ ಜಿಹಾದಿ ಸಂಘಟನೆಗಳ ಬೇರುಗಳನ್ನು ಬುಡ ಸಮೇತ ಕಿತ್ತು ಹಾಕಲು ಮತ್ತು ಈ ಕೊಲೆಯ ಹಿಂದಿರುವ ಕಾಣದ ಕೈಗಳನ್ನು ಪತ್ತೆಹಚ್ಚಿ, ಈ ಸಂಚಿಗೆ ಬೇಕಾದ ಹಣಕಾಸಿನ ವ್ಯವಸ್ಥೆಯನ್ನು ಒದಗಿಸಿದ ದೇಶ ಹಾಗು ಪರದೇಶಗಳ ಹಣದ ಮೂಲಗಳನ್ನು ಪತ್ತೆಹಚ್ಚಲು NIA ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಲಿದೆ ಎನ್ನುವ ವಿಶ್ವಾಸ ನನಗಿದೆ ಎಂದಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬೇರು ಬಿಟ್ಟಿರುವ ಜಿಹಾದಿಗಳನ್ನು ಮೂಲಭೂತ ವಾದಿ ಸಂಘಟನೆಗಳನ್ನು ಮಟ್ಟ ಹಾಕಲು ರಾಷ್ಟ್ರೀಯ ತನಿಖಾ ದಳ ನಡೆಸುವ ತನಿಖೆ ಅತ್ಯಂತ ಸಹಕಾರಿಯಾಗಲಿದೆ ಎನ್ನುವ ವಿಶ್ವಾಸ ನಮಗಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ತನ್ನ ತುಷ್ಟಿಕರಣದ ರಾಜಕೀಯವನ್ನು ಮುಂದುವರಿಸಿ ಸುಹಾಸ್ ಶೆಟ್ಟಿಯವರ ಹತ್ಯೆಯ ತನಿಖೆಯನ್ನು NIA ಗೆ ವಹಿಸಲು ನಿರಾಕರಿಸಿದಾಗ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಮುಂದಾಳತ್ವವನ್ನು ವಹಿಸಿಕೊಂಡು ಈ ತನಿಖೆಯನ್ನು NIA ಗೆ ವಹಿಸಿದೆ . ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ,ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರಿಗೆ ಹಾಗೂ ದಕ್ಷಿಣ ಕನ್ನಡದ ಸಮಸ್ತ ಹಿಂದೂ ಸಂಘಟನೆಗಳ ಹಿರಿಯರಿಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.