ಮನೆ Latest News ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ; ದರ್ಶನ್ ವಿರುದ್ಧವಾಗಿ ಪೊಲೀಸರಿಗೆ ಬರೋಬ್ಬರಿ 30 ಸಾಕ್ಷಿಗಳು ಲಭ್ಯ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ; ದರ್ಶನ್ ವಿರುದ್ಧವಾಗಿ ಪೊಲೀಸರಿಗೆ ಬರೋಬ್ಬರಿ 30 ಸಾಕ್ಷಿಗಳು ಲಭ್ಯ

0

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 17 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅದರಲ್ಲಿ 4 ಆರೋಪಿಗಳಾದ ರವಿಶಂಕರ್, ನಂದೀಶ್, ನಿಖಿಲ್ ನಾಯಕ್, ಕೇಶವಮೂರ್ತಿಯನ್ನು ತುಮಕೂರು ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.ಎಲ್ಲಾ 17 ಆರೋಪಿಗಳಿಗೂ ಜುಲೈ 4ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿ ಕೋರ್ಟ್ ಆದೇಶ ನೀಡಿದೆ.

ಇನ್ನು ಪ್ರಕರಣದಲ್ಲಿ ನಟ ದರ್ಶನ್ ಅವರು ಭಾಗಿಯಾಗಿದ್ದಾರೆ ಅನ್ನೋದಕ್ಕೆ ಪೊಲೀಸರಿಗೆ ಬರೋಬ್ಬರಿ 30 ಸಾಕ್ಷಿಗಳು ಲಭ್ಯವಾಗಿವೆ ಎನ್ನಲಾಗಿದೆ. ಪವಿತ್ರ ಗೌಡ ಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಗಳನ್ನು ಮಾಡುತ್ತಿದ್ದ ಅನ್ನೋದು ಗೊತ್ತಾಗುತ್ತಿದ್ದಂತೆ ಆತನನ್ನು  ಚಿತ್ರದುರ್ಗದಿಂದ ದರ್ಶನ್ ನಿದರ್ಶನದಂತೆ ಬೆಂಗಳೂರಿನ ಆರ್ ಆರ್ ನಗರದ ಪಟ್ಟಣಗೆರೆಯಲ್ಲಿರುವ ದರ್ಶನ್ ಆಪ್ತ ವಿನಯ್ ಕಾರ್ ಶೆಡ್ ಗೆ ಕರೆದುಕೊಂಡು ಬರಲಾಗಿತ್ತು. ಅಲ್ಲಿ ಆತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಇನ್ನು ಪ್ರಕರಣದಲ್ಲಿ ಡಿ ಬಾಸ್ ಭಾಗಿಯಾಗಿದ್ದಾರೆ ಎನ್ನೋದಕ್ಕೆ ರೇಣುಕಾಸ್ವಾಮಿಯನ್ನು ಕರೆ ತಂದಲ್ಲಿಂದ ಆತನನ್ನು ಕೊಲೆ ಮಾಡಿ ಶವ ಬಿಸಾಕೋವರೆಗೂ ಪೊಲೀಸರಿಗೆ ಬರೋಬ್ಬರಿ 30 ಸಾಕ್ಷ್ಯಗಳು ಲಭ್ಯವಾಗಿದೆ ಎನ್ನಲಾಗಿದೆ.

ಅತ್ತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಲು ತಮ್ಮ ತಮ್ಮ ವಕೀಲರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಈಗಾಗಲೇ ದರ್ಶನ್ ಅವರ ಪರವಾಗಿ ವಾದ ಮಂಡಿಸಲು ವಿಜಯಲಕ್ಷ್ಮೀ ಖ್ಯಾತ ವಕೀಲ ಸಿ ವಿ ನಾಗೇಶ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ನಿನ್ನೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅಭಿಮಾನಿಗಳಿಗಾಗಿ ದರ್ಶನ್ ಪರವಾಗಿ ಭಾವುಕ ಪತ್ರವೊಂದು ಬರೆದಿದ್ದರು. ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.

ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ.ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ.ಸತ್ಯಮೇವ ಜಯತೆ! ಎಂದು  ಪತ್ರದಲ್ಲಿ ಭಾವುಕವಾಗಿ ತಿಳಿಸಿದ್ದರು.