ಬೆಂಗಳೂರು; ರಾಜ್ಯದಲ್ಲಿ ದಿನೇ ದಿನೇ ಡೆಂಘಿ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಡೆಂಘಿಗೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.ರಾಜ್ಯದಲ್ಲಿ ಹತೋಟಿಗೂ ಮೀರಿ ಡೆಂಘಿ ಹಬ್ಬುತ್ತಿದ್ದು ಅದಕ್ಕೆ ಅಂಕುಶ ಹಾಕಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇಂದು ಸಭೆ ನಡೆಯಿತು.
ಸಭೆಯಲ್ಲಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್,ಬಿಬಿಎಂಪಿ ವಿಶೇಷ ಆಯುಕ್ತ ವಿಕಾಸ್ ಸೂರಳ್ಕರ್, ಸೇರಿದಂತೆ ಹಲವು ಆರೋಗ್ಯಧಿಕಾರಿಗಳು ಭಾಗಿಯಾಗಿದ್ದರು.ಸಭೆಯಲ್ಲಿ ರಾಜ್ಯದಲ್ಲಿ ಯಾವ ಜಿಲ್ಲೆಯಲ್ಲಿ ಎಷ್ಟು ಸಕ್ರಿಯ ಡೆಂಘಿ ಪ್ರಕರಣಗಳಿವೆ. ಡೆಂಘಿ ತಡೆಗೆ ಯಾವ ರೀತಿ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಟೆಸ್ಟಿಂಗ್ ರೇಟ್ ಹೆಚ್ಚಳದ ಬಗ್ಗೆ ಚರ್ಚೆ ಮಾಡಲಾಯಿತು.
ಖಾಸಗಿ ಆಸ್ಪತ್ರೆಯಲ್ಲಿ ಡೆಂಘಿ ಕೇಸ್ನಲ್ಲಿ ಅಡ್ಮಿಟ್ ಆದವರ ವಿವರ, ಬಲಿಯಾದ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ,ಚಿಕ್ಕ ಮಕ್ಕಳು, ಗರ್ಭಿಣಿ- ಬಾಣಂತಿಯರ ಬಗ್ಗೆ ಹೆಚ್ಚಿನ ಗಮನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಇನ್ನು ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ,ಡೆಂಗ್ಯು ಹರಡುವಿಕೆ ಬಗ್ಗೆ ವಿವಿಧ ಇಲಾಖೆಗಳ ಜೊತೆ ಸಭೆ ಮಾಡಿದ್ದೇವೆ.ಡೆಂಗ್ಯು ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ.ಡೆಂಗ್ಯೂ ಪ್ರಕರಣಗಳು ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಿದೆ. ಇಲ್ಲಿಯವರೆಗೂ 6187 ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಡಬಲ್ ಆಗಿದೆ.ಸದಾ ಮಳೆ ಬರ್ತಿದ್ರೆ ಡೆಂಗ್ಯು ಸೊಳ್ಳೆ ಬರೋದಿಲ್ಲ.ಮಳೆ ಬಿಟ್ಟು ಬಿಟ್ಟು ಬರ್ತಿದೆ ಈ ಹಿನ್ನೆಲೆ ಡೆಂಗ್ಯೂ ಹರಡಲು ಅನುಕೂಲ ವಾತಾವರಣ ಇದೆ. ಹಾಗಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗ್ತಿವೆ ಎಂದರು.
ಇದೇ ವೇಳೆ ಮಾತನಾಡಿದ ಅವರು ಜನವರಿಯಿಂದ ಜುಲೈ 1 ರ ತನಕ ಒಟ್ಟು 6187 ಪಾಸಿಟಿವ್ ಕೇಸ್ ಗಳು ಇವೆ. ಕಳೆದ ವರ್ಷ 2903 ಪ್ರಕರಣಗಳು ದಾಖಲಾಗಿತ್ತು.47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ.ನಿಂತು ಬೀಳುವ ಮಳೆಯಿಂದಾಗಿ ಸೊಳ್ಳೆ ಹರಡುವಿಕೆ ಹೆಚ್ಚಾಗುತ್ತದೆ, ಇದು ಅನುಕೂಲ ಮಾಡಿಕೊಡುತ್ತದೆ.ಹವಾಮಾನ ಬದಲಾವಣೆಯಿಂದ ರೋಗ ಉಲ್ಬಣಗೊಳ್ಳುತ್ತಿದೆ. ಈ ವರ್ಷ ಹವಮಾನ ಬದಲಾವಣೆಯಿಂದ ಡೆಂಘಿ ಕೇಸ್ ಹೆಚ್ಚಾಗಿದೆ ಎಂದರು.
ಇನ್ನೂ ಡೆಂಘಿ ಕೇಸ್ ಹೆಚ್ಚಾಗುವ ಸಾಧ್ಯತೆ ಇದೆ.ಸಿಎಂ ಕೂಡ ಎಚ್ಚರಿಕೆ ವಹಿಸಲು ತಿಳಿಸಿದ್ದಾರೆ. ಈಗಾಗಲೇ NS1 ಕಿಟ್ ಗಳನ್ನು ಖರೀದಿಸಿದ್ದೇವೆ.ಡೆಂಘಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಪ್ಲೇಟ್ ಲೆಟ್ಸ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ.ಬ್ಲಡ್ ಯೂನಿಟ್ ಗಳ ಜತೆ ಮಾತುಕತೆ ಮಾಡಲಾಗಿದೆ.ಐವಿ ಫ್ಲೂವಿಡ್ ಗಳನ್ನು ಕೊಡಲಾಗುತ್ತದೆ. ಆರಂಭದಲ್ಲಿ ಪ್ಯಾರಸಿಟಮಲ್ ಕೊಟ್ಟರೆ ಸಾಕಾಗುತ್ತದೆ. ಖಾಸಗಿ ಆಸ್ಪತ್ರೆಗಳು ಡೆಂಘಿ ಕೇಸ್ ರಿಪೋರ್ಟ್ ಮಾಡ್ತಿಲ್ಲ ಎಂದರು.
ಅಲ್ಲದೇ ಕೆಪಿಎಂ ಆ್ಯಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಘಿ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ.ಇಷ್ಟೇ ಅಲ್ಲ ರಾಜ್ಯದಲ್ಲಿ ಮತ್ತಷ್ಟು ಡೆಂಘಿ ಕೇಸ್ ಇರಬಹುದು.ದಿನ ನಿತ್ಯ ಡೆಂಘಿ ಬುಲೆಟಿನ್ ಕೊಡಲಾಗುತ್ತದೆ.ಬೆಂಗಳೂರು ನಗರದಲ್ಲಿ ಬಿಬಿಎಂಪಿ ಎಲ್ಲಾ ಮನೆಗಳ ಸರ್ವೆ ಮಾಡುತ್ತಿತ್ತು.ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲ ಎಲ್ಲಾ ಮನೆಗಳ ಸರ್ವೆ ನಡೆಸಲು ನಾನು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ.ಮನೆ ಮನೆಗೆ ಭೇಟಿ ಕೊಡಲು ಸೂಚಿಸಿದ್ದೇನೆ.ರಾಜ್ಯಾದ್ಯಂತ ಡೆಂಘಿ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ.ಪ್ರತಿ ಶುಕ್ರವಾರ ಡೆಂಘಿ ವಿಚಾರದಲ್ಲಿ ಫೀಲ್ಡ್ ನಲ್ಲಿ ಇದ್ದು, ಮಾನಿಟರ್ ಮಾಡಲು ಸೂಚಿಸಿದ್ದೇನೆ.ಪ್ರತಿ ಶುಕ್ರವಾರ ಡೆಂಘಿ ವಿಚಾರದಲ್ಲಿ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.