ಮನೆ Latest News ರೇಣುಕಾಸ್ವಾಮಿ ಕೇಸ್ ನಲ್ಲಿ ಮೂವರು ಆರೋಪಿಗಳಿಗೆ ಜಾಮೀನು; ಬೇಲ್ ಸಿಕ್ರೂ ಇನ್ನೂ ಜೈಲಿನಲ್ಲಿದ್ದಾರೆ ಆರೋಪಿಗಳು

ರೇಣುಕಾಸ್ವಾಮಿ ಕೇಸ್ ನಲ್ಲಿ ಮೂವರು ಆರೋಪಿಗಳಿಗೆ ಜಾಮೀನು; ಬೇಲ್ ಸಿಕ್ರೂ ಇನ್ನೂ ಜೈಲಿನಲ್ಲಿದ್ದಾರೆ ಆರೋಪಿಗಳು

0

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಪು ಜೈಲು ಸೇರಿ ಬರೋಬ್ಬರಿ ಮೂರು ತಿಂಗಳಾಯಿತು. ಹೀಗುರುವಾಗಲೇ ಮೊನ್ನೆ ಪ್ರಕರಣದ ಮೂವರು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿತ್ತು. ಪ್ರಕರಣದ ಎ15, ಎ16, ಎ17 ಆರೋಪಿಗೆ ಜಾಮೀನು ಮಂಜೂರಾಗಿತ್ತು. ಆದರೆ ಜಾಮೀನು ಮಂಜೂರಾದ್ರೂ ಇನ್ನೂ ಈ ಮೂವರು ಆರೋಪಿಗಳು ಜೈಲಿನಲ್ಲೇ ಇರುವಂತಾಗಿದೆ.

ಹೌದು.. ಪ್ರಕರಣದ ಎ15 ನಿಖಿಲ್ ನಾಯಕ್, ಎ 17 ಕಾರ್ತಿಕ್ ಗೆ 57ನೇ ಸಿಸಿಹೆಚ್ ಕೋರ್ಟ್ ಮೊನ್ನೆ ಬೇಲ್ ಮಂಜೂರು ಮಾಡಿತ್ತು. ಎ 16 ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಬೇಲ್ ಸಿಕ್ಕಿ ಮೂರು ದಿನಗಳಾದ್ರೂ ಇನ್ನು ಕೂಡ ಆರೋಪಿಗಳು ಜೈಲಿನಲ್ಲೇ ಕಾಲ ಕಳೆಯುವಂತಾಗಿದೆ.  ಮೊನ್ನೆ ಜಾಮೀನು ಪಡೆದ ಈ ಮೂವರು ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ. ಆದರೆ ಜಾಮೀನು ನೀಡುವ ವೇಳೆ ಇವರಿಗೆ ಕೋರ್ಟ್ ಷ್ಯೂರಿಟಿ ಕೇಳಿದೆ. ಆದರೆ ಷ್ಯೂರಿಟಿ ನೀಡಲು ಸಾಧ್ಯವಾಗದೇ ಇರೋದರಿಂದ ಆರೋಪಿಗಳು ಸದ್ಯ ಜೈಲಿನಲ್ಲೇ ಇದ್ದಾರೆ.

ಯಾರಾದರು ಷ್ಯೂರಿಟಿ ನೀಡಿದ ಬಳಿಕ  ಕೋರ್ಟ್ ಆದೇಶ ಬಂದ ನಂತರವಷ್ಟೇ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಬೇಕಿದೆ. ಅಲ್ಲಿಯವರೆಗೂ ಜಾಮೀನು ಸಿಕ್ರೂ ಮೂವರಿಗೂ ಜೈಲೇ ಗತಿ ಎಂಬಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಬೆನ್ನಲ್ಲೇ ಆರೋಪಿಗಳು ಒಬ್ಬೊಬ್ಬರಾಗಿಯೇ ಬೆಲ್ ಗೆ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಇನ್ನು ಪ್ರಕರಣದ ಪ್ರಮುಖ ಆರೋಪಿ ಪವಿತ್ರ ಗೌಡ ಅವರು ಪೊಲೀಸರು ಚಾರ್ಚ್ ಶೀಟ್ ಸಲ್ಲಿಕೆಗೂ ಮುನ್ನವೇ ಪವಿತ್ರ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದರು. ಪವಿತ್ರಗೌಡ ಒಬ್ಬರೇ ಈ ಪ್ರಕರಣದಲ್ಲಿ ಮಹಿಳೆ. ಅಲ್ಲದೇ ಆಕೆಗೆ ಆರೋಗ್ಯ ಸಮಸ್ಯೆಯಿದೆ. ಹಾಗಾಗಿ ಜಾಮೀನು ನೀಡಿ ಎಂದು ಆಕೆಯ ಪರವಾಗಿ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ಸೆಪ್ಟಂಬರ್ 25ಕ್ಕೆ ಮುಂದೂಡಿಕೆಯಾಗಿದೆ.

ಇದರ ಬೆನ್ನಲ್ಲೇ ಈ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಎ15 ಆರೋಪಿ ಕಾರ್ತಿಕ್, ಎ16 ಕೇಶವ ಮೂರ್ತಿ. ಎ 17 ನಿಖಿಲ್ ನಾಯಕ್ ಗೆ ಕೋರ್ಟ್ ಜಾಮೀನು ನೀಡಿದೆ. ಕಾರ್ತಿಕ್ ಹಾಗೂ ನಿಖಿಲ್ ನಾಯಕ್ ಗೆ 57ನೇ ಸಿಸಿಹೆಚ್ ಕೋರ್ಟ್  ಜಾಮೀನು ಮಂಜೂರು ಮಾಡಿದ್ದರೆ, ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ. ಕೊಲೆ ಪ್ರಕರಣದಲ್ಲಿ ಈ ಮೂವರು ನೇರವಾಗಿ ಭಾಗಿಯಾಗದೇ ಇರೋದರಿಂದ ಇವರಿಗೆ ಜಾಮೀನು ದೊರೆತಿದೆ.