ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಪೊಲೀಸರಿ ಚಾರ್ಚ್ ಶೀಟ್ ಸಲ್ಲಿಸಿದ ಎರಡು ವಾರಗಳ ನಂತರ ಅಂದರೆ ಸೆಪ್ಟಂಬರ್ 21 ರಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಗೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಮೊನ್ನೆ ಅಂದರೆ ಸೆಪ್ಟಂಬರ್ 21 ರಂದು ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟಂಬರ್ 23 ಅಂದರೆ ಇಂದಿಗೆ ಮುಂದೂಡಿಕೆ ಮಾಡಿತ್ತು. ಅದರಂತೆ ಇಂದು ವಿಚಾರಣೆ ನಡೆಸಿದ ಕೋರ್ಟ್ ಮತ್ತೆ ವಿಚಾರಣೆಯನ್ನು ಸೆಪ್ಟಂಬರ್ 27ಕ್ಕೆ ಮುಂದೂಡಿಕೆ ಮಾಡಿದೆ.
ಇನ್ನು ಪ್ರಕರಣದ ಎ1 ಆರೋಪಿ ಪವಿತ್ರಗೌಡ ಅವರ ಜಾಮೀನು ಅರ್ಜಿವಿಚಾರಣೆಯನ್ನು ಕೂಡ ಕೋರ್ಟ್ ಸೆಪ್ಟಂಬರ್ 25ಕ್ಕೆ ಮುಂದೂಡಿಕೆ ಮಾಡಿದೆ. ಇದರ ಮಧ್ಯೆ ಪ್ರಕರಣ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣದ ಮೂವರು ಆರೋಪಿಗಳಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಹೌದು…ಪ್ರಕರಣದ ಎ15 ಆರೋಪಿ ಕಾರ್ತಿಕ್, ಎ16 ಕೇಶವ ಮೂರ್ತಿ. ಎ 17 ನಿಖಿಲ್ ನಾಯಕ್ ಗೆ ಕೋರ್ಟ್ ಜಾಮೀನು ನೀಡಿದೆ. ಕಾರ್ತಿಕ್ ಹಾಗೂ ನಿಖಿಲ್ ನಾಯಕ್ ಗೆ 57ನೇ ಸಿಸಿಹೆಚ್ ಕೋರ್ಟ್ ಜಾಮೀನು ಮಂಜೂರು ಮಾಡಿದ್ದರೆ, ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ. ಕೊಲೆ ಪ್ರಕರಣದಲ್ಲಿ ಈ ಮೂವರು ನೇರವಾಗಿ ಭಾಗಿಯಾಗದೇ ಇರೋದರಿಂದ ಇವರಿಗೆ ಜಾಮೀನು ದೊರೆತಿದೆ. ಇದು ದರ್ಶನ್ ಅವರ ಅಭಿಮಾನಿಗಳಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.
ಇದರ ಮಧ್ಯೆ ಇಂದು ವಿಜಯಲಕ್ಷ್ಮೀ ದರ್ಶನ್ ಅವರು ಡಿ ಬಾಸ್ ನ್ನು ಭೇಟಿಯಾಗಿದ್ದಾರೆ. ಮೂವರಿಗೆ ಜಾಮೀನು ಸಿಕ್ಕಿರೋದನ್ನು ದರ್ಶನ್ ಗೆ ಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೇ ನಿಮಗೂ ಸಿಗುತ್ತೆ ಧೈರ್ಯವಾಗಿರಿ ಎಂದು ವಿಜಯಲಕ್ಷ್ಮೀ ಹೇಳಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ದರ್ಶನ್ ಸೇರಿದಂತೆ 17 ಆರೋಪಿಗಳು ಕೊಲೆ ಮಾಡಿದ್ದರು. ರೇಣುಕಾ ಸ್ವಾಮಿ ಪವಿತ್ರಗೌಡಗೆ ಫೋಟೋ ಕಳುಹಿಸಿ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿಸಿದ್ದಾರೆ ದೆ. ದರ್ಶನ್ ಅವರ ಆಪ್ತ ವಿನಯ್ ಅವರ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಕಾರ್ ಶೆಡ್ ಗೆ ಕರೆಸಿ ಹಲ್ಲೆ ಮಾಡಲಾಗಿತ್ತು. ದರ್ಶನ್ ಕೂಡ ಹಲ್ಲೆ ಮಾಡಿದ್ದು ಗಂಭೀರ ಗಾಯಗೊಂಡ ರೇಣುಕಾಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ಮೃತದೇಹವನ್ನು ಸುಮನಹಳ್ಳಿ ಬ್ರಿಡ್ಜ್ ಬಳಿ ಎಸೆಯಲಾಗಿತ್ತು.
ಪ್ರಕರಣ ಆರೋಪಿಯಾಗಿರುವ ಚಲನಚಿತ್ರ ನಟ ದರ್ಶನ್ ತೂಗುದೀಪ ಅವರನ್ನು ಬೆಂಗಳೂರು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು ಮೈಸೂರಿನ ಕುವೆಂಪು ನಗರದ ಗೋಲ್ಡ್ ಜಿಮ್ ನಲ್ಲಿ ವರ್ಕೌಟ್ ಮುಗಿಸಿ ಹೊರ ಬಂದಿದ್ದ ದರ್ಶನ್ ರನ್ನು ನೇರವಾಗಿ ಪೊಲೀಸರು ಅರೆಸ್ಟ್ ಮಾಡಿದ್ದರು.ಅಂದು ಬೆಳಗ್ಗೆ 6.30 ಕ್ಕೆ ಜಿಮ್ಗೆ ತೆರಳಿದ್ದ ದರ್ಶನ್, 8.30ರ ವೇಳೆಗೆ ವರ್ಕೌಟ್ ಮುಗಿಸಿ ತಾವು ಉಳಿದುಕೊಂಡಿದ್ದ ಹೋಟೆಲ್ ಬಳಿ ಬರುತ್ತಿದ್ದಂತೆಯೇ ಪೊಲೀಸರು ಬಂಧಿಸಿದ್ದರು.
ಮೈಸೂರಿನ ಲಲಿತ್ ಮಹಲ್ ಹೋಟೆಲ್ ನಲ್ಲಿ ದರ್ಶನ್ ಅಭಿನಯದ ಡೇವಿಲ್ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರತಂಡದ ವತಿಯಿಂದಲೇ ದರ್ಶನ್ ಗೆ ರ್ಯಾಡಿಸನ್ ಬ್ಲ್ಯೂ ಹೋಟೆಲ್ ನಲ್ಲಿ ಕೊಠಡಿ ಕಾಯ್ದಿರಿಸಲಾಗಿತ್ತು. ಜೂನ್ 9 ರಿಂದಲೇ ದರ್ಶನ್ ಹೋಟೆಲ್ನಲ್ಲಿ ಉಳಿದುಕೊಂಡಿದ್ದರು.ತಮ್ಮ ಕೆಎ 01 ಎಂವೈ 7999 ನೋಂದಣಿ ಸಂಖ್ಯೆಯ ರೇಂಜ್ ರೋವರ್ ಡಿಫೆಂಡರ್ ಕಾರಿನಲ್ಲಿ ರ್ಯಾಡಿಸನ್ ಬ್ಲ್ಯೂ ಹೋಟೆಲ್ ಗೆ ದರ್ಶನ್ ಬಂದಿದ್ದು, ಕಾರು ಇನ್ನೂ ಹೋಟೆಲ್ ಪ್ರವೇಶದ್ವಾರದಲ್ಲಿಯೇ ನಿಲ್ಲಿಸಲ್ಪಟ್ಟಿತ್ತು. ಅರೆಸ್ಟ್ ಮಾಡಿದ ಬಳಿಕ ಪೊಲೀಸರು ತಮ್ಮ ಜೀಪ್ ನಲ್ಲೇ ದರ್ಶನ್ ರನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆದೊಯ್ದಿದ್ದರು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಹಾಗಾಗಿ ಜೂನ್ 22 ರಿಂದ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು..ಆದರೆ ಅಲ್ಲಿ ದರ್ಶನ್ ರಾಜಾತಿಥ್ಯ ನೀಡಲಾಗುತ್ತಿದೆ ಅನ್ನೋ ವಿಚಾರ ಬಯಲಾಗುತ್ತಿದ್ದಂತೆ ಅವರನ್ನು ಆಗಸ್ಟ್ 29 ರಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅದರಂತೆ ಡಿ ಬಾಸ್ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ಪೊಲೀಸರು 3991 ಪುಟಗಳ ಚಾರ್ಜ್ ಶೀಟ್ ನ್ನು ಕೋರ್ಟ್ ಗೆ ಸಲ್ಲಿಕೆ ಮಾಡಿದ್ದರು. ಚಾರ್ಜ್ ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ದರ್ಶನ್ ಅವರ ಪರವಾಗಿ ಅವರ ವಕೀಲರು ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಆದರೆ ಅರ್ಜಿಯ ವಿಚಾರಣೆ ಸೋಮವಾರ ಅಂದರೆ ಸೆಪ್ಟೆಂಬರ್ 23ಕ್ಕೆ ಮುಂದೂಡಿಕೆಯಾಗಿದೆ.