ಮನೆ Latest News ಮೂವರಿಗೆ ಜಾಮೀನು ಸಿಕ್ಕಿದ ಬೆನ್ನಲ್ಲೇ ದರ್ಶನ್ ಅವರನ್ನು ಭೇಟಿಯಾಗಿ ಚರ್ಚಿಸಿದ ವಕೀಲರು

ಮೂವರಿಗೆ ಜಾಮೀನು ಸಿಕ್ಕಿದ ಬೆನ್ನಲ್ಲೇ ದರ್ಶನ್ ಅವರನ್ನು ಭೇಟಿಯಾಗಿ ಚರ್ಚಿಸಿದ ವಕೀಲರು

0

ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತುಮಕೂರು ಜೈಲಿನಲ್ಲಿ ಇದ್ದ ಮೂವರು ಆರೋಪಿಗೆ ಜಾಮೀನು ದೊರೆತಿದೆ. ಎ 15 ಕಾರ್ತಿಕ್ , ಎ16 ನಿಖಿಲ್ ನಾಯಕ್ ಹಾಗೂ ಎ 17 ಕೇಶವ ಮೂರ್ತಿಗೆ ಜಾಮೀನು ದೊರೆತಿದೆ.  ಎ 15 ಕಾರ್ತಿಕ್ , ಎ16 ನಿಖಿಲ್ ನಾಯಕ್ ಗೆ 57ನೇ ಸಿ ಸಿ ಹೆಚ್ ಕೋರ್ಟ್ ಜಾಮೀನು ನೀಡಿದರೆ ಎ 17 ಕೇಶವ ಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ. ಇನ್ನು ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕ ಬೆನ್ನಲ್ಲೇ ದರ್ಶನ್ ಪರವಾದ ವಕೀಲರು ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ದರ್ಶನ್ ಅವರ ಪರವಾದ ವಕೀಲ ಸುನೀಲ್  ಅವರು ಸೆ.27ಕ್ಕೆ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಹಿನ್ನಲೆ‌ ಕಾನೂನು ಸಮರ ಸಂಬಂಧಿಸಿದಂತೆ ನಾವು ಅವರಿಗೆ ಚರ್ಚೆ ನಡೆಸಿದೆವು ಎಂದು ತಿಳಿಸಿದ್ದಾರೆ. ಸೆಷನ್ಸ್  ಕೋರ್ಟ್ ಗೆ ಬೆಲ್ ಅರ್ಜಿ ಸಲ್ಲಿಸಲಾಗಿದೆ .302 ಕೇಸ್ ಆಗಿರುವುದರಿಂದ ಸೆಷನ್ಸ್  ಕೋರ್ಟ್ ನಲ್ಲಿ ಬೇಲ್ ಸಿಕ್ಕಿಲ್ಲ ಅಂದ್ರೆ  ಮುಂದಿನ ದಿನಗಳಲ್ಲಿ ಹೆಚ್ಚುವರಿ ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದರು.

ದರ್ಶನ್ ಅವರಿಗೆ ಮೂಲಭೂತ ಸೌಲಭ್ಯಗಳನ್ನು ನೀಡುವಂತೆ ಜೈಲು ಸಿಬ್ಬಂದಿಗೆ ಮನವಿ ಮಾಡಿದ್ದೇವೆ. ಆರೋಪಿಗೆ ಬೆಡ್, ತಲೆ ದಿಂಬು, ಚಾಪೆ ಸೇರಿದಂತೆ ಮೂಲಭೂತ ಸೌಲಭ್ಯ ನೀಡುವಂತೆ ತಿಳಿಸಿದ್ದೇವೆ. ಜೈಲಿನ ನಿಯಮದ ಪ್ರಕಾರ ಯಾವುದೇ ಆರೋಪಿಗೆ  ಮೂಲಭೂತ ಸೌಕರ್ಯ ನೀಡಬೇಕು. ಆರೋಗ್ಯ ಸಮಸ್ಯೆಯ ಹಿನ್ನೆಲೆ‌ ಮೆಡಿಕಲ್ ಬೆಡ್ ನೀಡುವಂತೆ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದಾರೆ.ವೈದ್ಯಕೀಯ ತಪಾಸಣೆ ವರದಿಯನ್ನು ಜೈಲು ಅಧಿಕಾರಿಗಳಿಗೆ ನೀಡಲಾಗಿದೆ.ಈ ಕುರಿತು ವೈದ್ಯರ ಮಾಹಿತಿ ಪಡೆದು ನಿರ್ಧರಿಸಲಾಗುವುದು ಎಂದು ಜೈಲು ಸಿಬ್ಬಂದಿ ಭರವಸೆ ನೀಡಿದ್ದಾರೆ ಎಂದು ಲಾಯರ್ ತಿಳಿಸಿದ್ದಾರೆ.

ಇನ್ನು ಮೇಲಾಧಿಕಾರಿಗಳ ಜೊತೆ ಚರ್ಚಿಸಿ, ಕಾನೂನು ಚೌಕಟ್ಟು ಪರಿಶೀಲಿಸಿ ಮೂಲ ಸೌಕರ್ಯ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತೆ. ಈ ಕುರಿತು ಜೈಲು ಸೂಪಿರಿಡೆಂಟ್  ಆರ್.ಲತಾ ಅವರು ಭರವಸೆ ಕೊಟ್ಟಿದ್ದಾರೆ.ಒಂದು ವೇಳೆ ನೀಡದೇ ಇದ್ದರೆ  ಮಾನಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ದರ್ಶನ್ ಪರವಾದ ವಕೀಲ ಸುನೀಲ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಬೆನ್ನಲ್ಲೇ ಆರೋಪಿಗಳು ಒಬ್ಬೊಬ್ಬರಾಗಿಯೇ ಬೆಲ್ ಗೆ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಇನ್ನು ಪ್ರಕರಣದ ಪ್ರಮುಖ ಆರೋಪಿ ಪವಿತ್ರ ಗೌಡ ಅವರು ಪೊಲೀಸರು ಚಾರ್ಚ್ ಶೀಟ್ ಸಲ್ಲಿಕೆಗೂ ಮುನ್ನವೇ ಪವಿತ್ರ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದರು. ಪವಿತ್ರಗೌಡ ಒಬ್ಬರೇ ಈ ಪ್ರಕರಣದಲ್ಲಿ ಮಹಿಳೆ. ಅಲ್ಲದೇ ಆಕೆಗೆ ಆರೋಗ್ಯ ಸಮಸ್ಯೆಯಿದೆ. ಹಾಗಾಗಿ ಜಾಮೀನು ನೀಡಿ ಎಂದು ಆಕೆಯ ಪರವಾಗಿ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ಸೆಪ್ಟಂಬರ್ 25ಕ್ಕೆ ಮುಂದೂಡಿಕೆಯಾಗಿದೆ.

ಇದರ ಬೆನ್ನಲ್ಲೇ ಈ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಎ15 ಆರೋಪಿ ಕಾರ್ತಿಕ್, ಎ16 ಕೇಶವ ಮೂರ್ತಿ. ಎ 17 ನಿಖಿಲ್ ನಾಯಕ್ ಗೆ ಕೋರ್ಟ್ ಜಾಮೀನು ನೀಡಿದೆ. ಕಾರ್ತಿಕ್ ಹಾಗೂ ನಿಖಿಲ್ ನಾಯಕ್ ಗೆ 57ನೇ ಸಿಸಿಹೆಚ್ ಕೋರ್ಟ್  ಜಾಮೀನು ಮಂಜೂರು ಮಾಡಿದ್ದರೆ, ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ. ಕೊಲೆ ಪ್ರಕರಣದಲ್ಲಿ ಈ ಮೂವರು ನೇರವಾಗಿ ಭಾಗಿಯಾಗದೇ ಇರೋದರಿಂದ ಇವರಿಗೆ ಜಾಮೀನು ದೊರೆತಿದೆ.