ಮನೆ Latest News ರಾಜ್ಯದಲ್ಲಿ ಪೊಲೀಸ್ ಠಾಣೆಗಳೆಲ್ಲ ಕಾಂಗ್ರೆಸ್ ಕಚೇರಿಗಳಾಗಿವೆ; ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಹೇಳಿಕೆ

ರಾಜ್ಯದಲ್ಲಿ ಪೊಲೀಸ್ ಠಾಣೆಗಳೆಲ್ಲ ಕಾಂಗ್ರೆಸ್ ಕಚೇರಿಗಳಾಗಿವೆ; ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಹೇಳಿಕೆ

0

ಬೆಂಗಳೂರು; ರಾಜ್ಯದಲ್ಲಿ ಪೊಲೀಸ್​ ಠಾಣೆಗಳೆಲ್ಲ ಕಾಂಗ್ರೆಸ್​ ಕಚೇರಿಗಳಾಗಿವೆ ಎಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಹೇಳಿದ್ದಾರೆ.

: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿ ಪೊಲೀಸ್​ ಠಾಣೆಗಳೆಲ್ಲ ಕಾಂಗ್ರೆಸ್​ ಕಚೇರಿಗಳಾಗಿವೆ.ಪೊಲೀಸರು ನ್ಯಾಯಯುತವಾಗಿ ಕೆಲಸ ಮಾಡಲು ಅವಕಾಶ ಇಲ್ಲ ಎಂಬಂತಾಗಿದೆ ಎಂದ್ರು.ವಿನಯ್​ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಕೊಡಗು ಎಸ್​​ಪಿ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಹೇಳಿದ್ದಾರೆ.

ಕಾಂಗ್ರೆಸ್ ಕಿರುಕುಳದಿಂದಲೇ ವಿನಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಸಕರಾದ ಪೊನ್ನಣ್ಣ, ಮಂತರ್ ಗೌಡ, ತೆನ್ನೀರಾ ವಿರುದ್ಧ ಕ್ರಮ ಕೈಗೊಳ್ಳಬೇಕು. ಮೂವರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು-ಎಂದ ಅವರು ಅಭಿವೃದ್ಧಿ ಕೆಲಸದ ಬಗ್ಗೆ ಯಾರೋ ಹಾಕಿದ್ದನ್ನ ಫಾರ್ವರ್ಡ್ ಮಾಡಿದ್ರು. ಇದಕ್ಕೆ ಶಾಸಕ ಧಮ್ಕಿ ಹಾಕಿರೋದನ್ನ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ರು. ಬೆಂಗಳೂರು ಮನೆಗೆ ಬಂದ್ರು ಪೊಲೀಸರು ಕಿರುಕುಳ ಕೊಟ್ರು. ರಾಜಕೀಯ ದ್ವೇಷ ತೀರಿಸಿಕೊಳ್ಳಲು ಬಳಸಿಕೊಳ್ತಿದ್ದಾರೆ ಎಂದಿದ್ದಾರೆ.

ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಸಾವಿನ ಬಗ್ಗೆ ಸಮಗ್ರ ತನಿಖೆಯಾಗ್ಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ನಾಯಕರು ಆಗ್ರಹ

ಬೆಂಗಳೂರು; ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಸಾವಿನ ಬಗ್ಗೆ ಸಮಗ್ರ ತನಿಖೆಯಾಗ್ಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಈ ಬಗ್ಗೆ ಎಕ್ಸ್  ನಲ್ಲಿ ಪೋಸ್ಟ್ ಮಾಡಿದ್ದು ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ. ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿದೆ .ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ  ಪಾರದರ್ಶಕವಾಗಿ ನಡೆಯಬೇಕೆಂದು ಬಿಜೆಪಿ  ಆಗ್ರಹಪಡಿಸುತ್ತದೆ ಎಂದಿದ್ದಾರೆ.

ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಒತ್ತಡ ಉಂಟಾಗಲು ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು  ಒತ್ತಾಯಿಸುವೆ ಎಂದಿದ್ದಾರೆ.

ಮಾಜಿ ಸಚಿವ ಮತ್ತು ಶಾಸಕ ಸುರೇಶ್ ಕುಮಾರ್ ಫೇಸ್ ಬುಕ್ ಪೋಸ್ಟ್ ಹಾಕಿದ್ದು ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಹಾಗೂ ಶಾಸಕ  ಮಂಥರ್ ಗೌಡ ರವರ ಒತ್ತಡದ ಮೇರೆಗೆ ತನ್ನ ಮೇಲೆ ಪೊಲೀಸರು ದೂರು ದಾಖಲಿಸಿ ಕೊಂಡು ಎಫ್ ಐಆರ್ ದಾಖಲಿಸಿದ್ದರಿಂದ ನೊಂದಿದ್ದ ವಿನಯ್ ಸೋಮಯ್ಯ ಈ ಕ್ರಮಕ್ಕೆ ಶರಣಾಗಿದ್ದಾರೆ.ಕೊಡಗು ಜಿಲ್ಲೆಯ ವಿವಿಧ ಸಮಸ್ಯೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಈ ಕಾರ್ಯಕರ್ತ ಬೆಳಕಿಗೆ ತರುತ್ತಿದ್ದ ಕ್ರಮ, ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ಅಪರಾಧವಾಗಿ ಪರಿಗಣಿಸಲ್ಪಟ್ಟಿದೆ. ಅನ್ಯಾಯದ ವಿರುದ್ಧ ಸದಾ ದನಿ ಎತ್ತಿ ಹೋರಾಡುತ್ತಿದ್ದ ದಿ. ಎ.ಕೆ. ಸುಬ್ಬಯ್ಯನವರ ಆತ್ಮ,  ತನ್ನ ಮಗನ ರಾಜಕೀಯ ಒತ್ತಡದ ಈ ಘನಂದಾರಿ ಶೌರ್ಯ  ಕಂಡು ಇವತ್ತು ವಿಲಿ ವಿಲಿ ಒದ್ದಾಡಿರಬೇಕು.ಮಾಜಿ ಸಚಿವ ಈಶ್ವರಪ್ಪನವರ ಕಣ್ಣಿಗೆ ಸುಣ್ಣ, ಕಾನೂನು ಸಲಹೆಗಾರರ ಕಣ್ಣಿಗೆ ಬೆಣ್ಣೆ,  ಇದು ಕಾಂಗ್ರೆಸ್ ನೀತಿ ಎಂದಿದ್ದಾರೆ.