ಮನೆ ಪ್ರಸ್ತುತ ವಿದ್ಯಮಾನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

0

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಬಿಜೆಪಿ ನಿಯೋಗ ಭೇಟಿ ಮಾಡಿತು.  ಸಿಎಂ ಭೇಟಿಗೂ ಮುನ್ನ ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಬಿಜೆಪಿ ಶಾಸಕರ ಸಭೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಮತ್ತು ಬೆಂಗಳೂರಿನ ಬಿಜೆಪಿ ಶಾಸಕರ ಸಭೆ ನಡೆಯಿತು. ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಬಿಜೆಪಿ‌ ಶಾಸಕರು ಮತ್ತು‌ ಸಂಸದರ ನಿಯೋಗ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿತು.

ನಿಯೋಗದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿ ಸಂಸದರಾದ ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ಶಾಸಕರಾದ ಸಿ.ಕೆ. ರಾಮಮೂರ್ತಿ, ಭೈರತಿ ಬಸವರಾಜ, ಕೆ. ಗೋಪಾಲಯ್ಯ, ಎಂ.‌ ಕೃಷ್ಣಪ್ಪ, ಎಸ್.ಆರ್. ವಿಶ್ವನಾಥ್, ಮುನಿರತ್ನ, ಉದಯ ಗರುಡಾಚಾರ್, ಎಸ್. ಮುನಿರಾಜು, ಎಸ್. ರಘು, ರವಿಸುಬ್ರಮಣ್ಯ, ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ಕೇಶವಪ್ರಸಾದ್ ಮತ್ತು ಬೆಂಗಳೂರಿನ ಬಿಜೆಪಿ ಜಿಲ್ಲಾಧ್ಯಕ್ಷರು ಭಾಗಿಯಾಗಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ‌ ನೇತೃತ್ವದಲ್ಲಿ ಶಾಸಕರು ಸಿಎಂ ನಿವಾಸಕ್ಕೆ ತೆರಳಿದ ಬಳಿಕ ಪ್ರತ್ಯೇಕವಾಗಿ ಒಬ್ಬರೇ ಸಿಎಂ ನಿವಾಸಕ್ಕೆ ವಿಪಕ್ಷ ನಾಯಕ ಅಶೋಕ್ ಬಂದರು.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಸಿಎಂಗೆ ಮನವಿ ಸಲ್ಲಿಸಿತು. ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಿಎಂ ಭೇಟಿ ಮಾಡಿ ಬೆಂಗಳೂರಿನ ಅಭಿವೃದ್ಧಿಗೆ ಅನುದಾನ ನೀಡಿ ಎಂದು ಮನವಿ ಮಾಡಿದ್ದೇವೆ. ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಇದ್ದಾಗ 6-8 ಸಾವಿರ ಕೋಟಿ ರೂ. ಅನುದಾನ ನೀಡುತ್ತಿದ್ದರು. ಎರಡು ವರ್ಷದಿಂದ ಅನುದಾನ ನೀಡಿಲ್ಲ. ಈ ಬಜೆಟ್ ನಲ್ಲಿ 6-8 ಸಾವಿರ ಕೋಟಿ ರೂ. ನೀಡಬೇಕು. ಅಭಿವೃದ್ಧಿ ನಿಧಾನ ಗತಿಯಲ್ಲಿ ಸಾಗುತ್ತಿದೆ. ಮೆಟ್ರೋ ದರ ಇಳಿಸಬೇಕು ಎಂದು ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ. ಮೊದಲ ಬಾರಿ ಗೆದ್ದ ಶಾಸಕರ ಕ್ಷೇತ್ರಕ್ಕೂ ಹೆಚ್ಚು ಅನುದಾನ ನೀಡಬೇಕು. ಬಿಬಿಎಂಪಿ‌ ಚುನಾವಣೆ ಶೀಘ್ರದಲ್ಲಿ ನಡೆಸಬೇಕು ಎಂದು ಮನವಿ ಮಾಡಿದ್ದೇವೆ.ಸಿಎಂ ಅನುದಾನ ಕೊಡುವ ಬಗ್ಗೆ ಗಮನ ಹರಿಸುತ್ತೇವೆ ಎಂದಿದ್ದಾರೆ. ಮಹಾನಗರಕ್ಕೆ ಹಿಂದೆಂದೂ ಇಂತಹ ದುಸ್ಥಿತಿ ಬಂದಿರಲಿಲ್ಲ ಎಂದರು.

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ ಬೆಂಗಳೂರು ಅಭಿವೃದ್ಧಿ ಕುಂಠಿತ ಆಗಿದೆ.ಎರಡು ವರ್ಷ ನೋಡಿ ಸಾಕಾಗಿ ಸಿಎಂ ಭೇಟಿ ಮಾಡಿದ್ದೇವೆ. ಅನುದಾನ ಕೊಡಿ ಎಂದು ಕೇಳಿದ್ದೇವೆ. ರಾಜ್ಯದ ಎಲ್ಲಾ ಬಿಜೆಪಿ‌ ಶಾಸಕರು ಅನುದಾನ ಇಲ್ಲದೇ ಕಣ್ಣೀರು ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರ ಎಂದಿಗೂ ತಾರತಮ್ಯ ಮಾಡಿಲ್ಲ. ಈಗ ಸರ್ಕಾರ ತಾರತಮ್ಯ ಮಾಡುತ್ತಿದೆ. ಮೆಟ್ರೊ ದರ ಏರಿಕೆಗೆ ಜನರೇ ಪ್ರತಿಭಟನೆಗೆ ಮುಂದಾಗಿದ್ದಾರೆ. ವಿರೋಧ ಪಕ್ಷವಾಗಿ ಸರ್ಕಾರಕ್ಕೆ ತೊಂದರೆ ಕೊಡಲ್ಲ.ಅಭಿವೃದ್ಧಿಗೆ ಸರ್ಕಾರ ಸ್ಪಂದಿಸಬೇಕು ಎಂದರು.