ಬೆಂಗಳೂರು: ಯಾವುದೇ ಕಾರಣಕ್ಕೂ ಮೀಸಲಾತಿ ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ಕುಮಾರ್ ಹೇಳಿದ್ದಾರೆ.ತಲತಲಾಂತರದಿಂದ ಮೀಸಲಾತಿ ಮೂಲಕ ಏಳಿಗೆ ಕಂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯವು ಮೀಸಲಾತಿಯ ರದ್ದು ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಯಿಂದ ಗಾಬರಿ ಆಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ಕುಮಾರ್ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೆ ಮೀಸಲಾತಿಯನ್ನು ರದ್ದು ಮಾಡಿಬಿಡುತ್ತಿತ್ತೇನೋ ಎಂಬಷ್ಟು ಆತಂಕ ನಿರ್ಮಾಣವಾಗಿದೆ. ಈ ಹೇಳಿಕೆಯನ್ನು ಖಂಡಿಸುತ್ತೇವೆ. ಮೀಸಲಾತಿಯನ್ನು ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೀಸಲಾತಿಗೆ ನಾವು ಇವತ್ತು ಕೂಡ ಬದ್ಧರಿದ್ದೇವೆ. ಅದು ಮುಂದುವರೆಯಲಿದೆ. ರಾಹುಲ್ ಗಾಂಧಿಯವರ ಹೇಳಿಕೆಯನ್ನು ಈ ದೇಶದ ಜನರು ಸಮರ್ಥಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ರಾಹುಲ್ ಅವರು ದೇಶದ ಕ್ಷಮೆ ಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಮೀಸಲಾತಿ ವಿರೋಧಿ ಎಂಬ ವಿಷಯವನ್ನು ಇಟ್ಟುಕೊಂಡು ನಾಳೆಯಿಂದ ಇಡೀ ರಾಜ್ಯಾದ್ಯಂತ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆಯನ್ನು ಮಾಡಲು ಕರೆ ಕೊಡಲಾಗಿದೆ ಎಂದು ಹೇಳಿದರು. ರಾಹುಲ್ ಗಾಂಧಿಯವರು ಅಮೆರಿಕದಿಂದ ವಾಪಸ್ ಬರುವುದರ ಒಳಗೆ ಕಾಂಗ್ರೆಸ್ ಇದಕ್ಕೆ ಪಶ್ಚಾತ್ತಾಪದ ಹೇಳಿಕೆ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ಮೀಸಲಾತಿಗೆ ಸಂಬಂಧಿಸಿ ಕೇವಲ ಮೊಸಳೆ ಕಣ್ಣೀರನ್ನು ಇಲ್ಲಿನವರೆಗೆ ಕಾಂಗ್ರೆಸ್ ಸುರಿಸಿದೆ. ಸಂವಿಧಾನದ ಕುರಿತು ಕಾಂಗ್ರೆಸ್ ಕೇವಲ ಭಾಷಣ ಮಾಡಿದೆ. ಕೈನಲ್ಲಿ ಸಂವಿಧಾನದ ಪುಸ್ತಕ ಮಾತ್ರ ಹಿಡಿದುಕೊಂಡಿದ್ದರು. ಆದರೆ, ಮನಸ್ಸಿನಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಯನ್ನೇ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ನಾಳೆ ಹಾಗೂ ನಾಡಿದ್ದು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ; ವಿಧಾನಪರಿಷತ್ ಸದಸ್ಯ ರವಿ ಕುಮಾರ್ ಹೇಳಿಕೆ
ಗಳೂರು; ನಾಳೆ ಹಾಗೂ ನಾಡಿದ್ದು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡಲಾಗುವುದು ಎಂದು ವಿಧಾನಪರಿಷತ್ ಸದಸ್ಯ ರವಿ ಕುಮಾರ್ ಹೇಳಿಕೆ ನೀಡಿದ್ದಾರೆ.ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಹೋರಾಟ ಮಾಡಲಾಗುತ್ತದೆ ಎಂದು ರವಿಕುಮಾರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಮೀಸಲಾತಿ ಬಂದ್ ಮಾಡುತ್ತೇವೆ ಎಂದು ವಿದೇಶದಲ್ಲಿ ನೀಡಿದ ಹೇಳಿಕೆಗೆ ಬಿಜೆಪಿ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ಮೀಸಲಾತಿ ಕಾಂಗ್ರೆಸ್ ಭಿಕ್ಷೆ ಅಲ್ಲ.ಮೀಸಲಾತಿ ದಲಿತರ ಬರ್ತ್ ರೈಟ್ಸ್ ಎಂದು ರವಿಕುಮಾರ್ ಅವರು ಹೇಳಿದ್ದಾರೆ.ಅಂಬೇಡ್ಕರ್ ಬದುಕಿದ್ದಾಗ ಅವರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್.ಈಗ ಅಂಬೇಡ್ಕರ್ ನೀಡಿದ ಸಂವಿಧಾನದಲ್ಲಿ ಅಂಶವನ್ನೇ ಇಲ್ಲವಾಗಿಸಲು ಹೊರಟಿದ್ದಾರೆ.ನಾವು ಮೀಸಲಾತಿ ರದ್ದು ಮಾಡಿ ಸಮಾನತೆ ತರ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.ಅದು ಸಾಧ್ಯವಿಲ್ಲ ಎಂದು ರವಿಕುಮಾರ್ ಹೇಳಿದ್ದಾರೆ.
ನಮ್ಮ ದೇಶದ ಪಾರ್ಲಿಮೆಂಟಿನ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಮೇರಿಕಾಗೆ ಹೋಗಿದ್ದಾರೆ.ಅಲ್ಲಿ ಭಾಷಣ ಮಾಡ್ತಾ ನಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ನಿಲ್ಲಿಸ್ತೇವೆ ಅಂತ ರಾಹುಲ್ ಗಾಂಧಿ ಹೇಳಿದ್ದಾರೆ.ರಿಸರ್ವೇಷನ್ ಬಗ್ಗೆ ಯಾವ ರೀತಿ ಆಕ್ರೋಶ ಇದೆ, ವಿರೋಧ ಇದೆ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.ಸಮಾನತೆ ಬರಬೇಕಾದರೆ ರಿಸರ್ವೇಷನ್ ನಿಲ್ಲಿಸೋದಾಗಿ ಹೇಳಿದ್ದಾರೆ.ರಾಹುಲ್ ಗಾಂಧಿ ಲೋಕಸಭಾ ಚುನಾವಣೆ ಸಂಧರ್ಭದಲ್ಲಿ ಸಂವಿಧಾನದ ಪುಸ್ತಕ ತೋರಿಸ್ತಾ ಓಡಾಡ್ತಿದ್ರು.ಅದೇ ಸಂವಿಧಾನದಲ್ಲಿ ಅಂಬೇಡ್ಕರ್ ದಲಿತರಿಗೆ ಮೀಸಲಾತಿ ಬಗ್ಗೆ ಹೇಳಿದ್ದಾರೆ.ರಾಹುಲ್ ಗಾಂಧಿಗೆ ನಾಚಿಕೆ ಆಗಬೇಕು.ಖರ್ಗೆ ಅವರಿಗೆ, ಸಿದ್ದರಾಮಯ್ಯ ಅವರಿಗೆ ಪ್ರಶ್ನೆ ಮಾಡ್ತೀನಿ.ಸಂವಿಧಾನ ರಕ್ಷಣೆ ಮಾಡ್ತೀನಿ, ಮೀಸಲಾತಿ ಉಳಿಸ್ತೀನಿ ಅಂದ್ರಲ್ಲಾ ಇದೇನಾ.?ಎಂದು ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನೆ ಮಾಡಿದ್ದಾರೆ.
SC, ST ಗಳನ್ನ ರಕ್ಷಣೆ ಮಾಡಬೇಕು, ಸಂವಿಧಾನ ಉಳಿಸಬೇಕು ಅಂತಿದ್ರಲ್ಲ.ರಾಹುಲ್ ಗಾಂಧಿ ರಿಸರ್ವೇಷನ್ ನಿಲ್ಲಿಸ್ತೀವಿ ಅಂತ ಹೇಳಿದ್ದಾರೆ.ನಾಳೆ ಮತ್ತು ನಾಡಿದ್ದು ರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡ್ತೀವಿ.ಅಂಬೇಡ್ಕರ್ ಸೋಲಿಸಿದ್ದು ಇದೇ ಕಾಂಗ್ರೆಸ್.ದಲಿತರ ಬದುಕಿನ ಮೀಸಲಾತಿಗೆ ಕೊಡಲಿ ಪೆಟ್ಟು ಹಾಕಲು ಹೊರಟಿದ್ದಾರೆ.ದೇಶದಲ್ಲಿ ರಿಸರ್ವೇಷನ್ ಅನ್ನೋದು SC, STಗಳು ಹುಟ್ಟುತ್ತಲೇ ಬಂದಿರೋ ಹಕ್ಕು.ದಲಿತರು ಮನುಷ್ಯರ ರೀತಿಯಲ್ಲಿ ಬದುಕಬೇಕು ಅಂತ ಸಂವಿಧಾನದಲ್ಲೇ ಬರೆದ್ರು.ನೆಹರು ಅವರು 1955ರಲ್ಲಿ ಕಾಕಾ ಕಾಲೇಕರ್ ವರದಿ ಮಂಡನೆ ಆದಾಗ ರಿಸರ್ವೇಷನ್ ವಿರೋಧಿಸಿದ್ರು.ಮಂಡಲ್ ಕಮೀಷನ್ ವರದಿಯನ್ನ ರಾಜೀವ್ ಗಾಂಧಿ ಅವರೂ ವಿರೋಧಿಸಿದ್ರು.ಸಂವಿಧಾನದಲ್ಲಿ ರಿಸರ್ವೇಷನ್ ಕೊಡೋದನ್ನ ಕಾಂಗ್ರೆಸ್ ಸಹಿಸುತ್ತಿಲ್ಲ.ಆರು ಅಮೇಂಡ್ಮೆಂಟ್ ತಂದಿದ್ದು ಕಾಂಗ್ರೆಸ್, ಆ ಮೂಲಕ ಅವಮಾನ ಮಾಡಿದ್ದಾರೆ.SC, ST ಗಳಿಗೆ ಗೌರವ ಕೊಡಬೇಕು, ಅವರ ಹಕ್ಕು ರಕ್ಷಣೆ ಮಾಡಬೇಕು ಎಂದಿದ್ದಾರೆ.
ಇನ್ನು ವಾಲ್ಮೀಕಿ ಹಗರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು SCPTSP ಹಣ ವರ್ಗಾವಣೆ ಮಾಡಿದ್ದಾರೆ.ವಾಲ್ಮೀಕಿ ನಿಗಮದ ಹಣ ಕೊಳ್ಳೆ ಹೊಡೆದಿದ್ದಾರೆ.ಇದು ಕಾಂಗ್ರೆಸ್ ನಾಯಕರ ಬ್ಲಡ್ಡಲ್ಲೇ ದಲಿತ ವಿರೋಧಿತನ ಇದೆ.ಇದನ್ನ ವಿರೋಧಿಸಿ, ನಾಳೆ ನಾಡಿದ್ದು ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡಲಿದ್ದೇವೆ ಎಂದಿದ್ದಾರೆ.