ಮನೆ Latest News ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಹಿನ್ನೆಲೆ ;ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಂಭ್ರಮಾಚರಣೆ

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಹಿನ್ನೆಲೆ ;ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಂಭ್ರಮಾಚರಣೆ

0

ಬೆಂಗಳೂರು; ನವದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಹಿನ್ನೆಲೆ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಶಾಸಕರಾದ ಎಸ್.ಆರ್. ವಿಶ್ವನಾಥ್, ಕೆ. ಗೋಪಾಲಯ್ಯ, ಮುನಿರತ್ನ, ಸಿ.ಕೆ. ರಾಮಮೂರ್ತಿ ಭಾಗಿಯಾಗಿದ್ದರು.ಡೊಳ್ಳು ಬಾರಿಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು. ಈ ವೇಳೆ ವಿಜಯೇಂದ್ರ‌ ಮತ್ತು ಅಶೋಕ್ ಡೊಳ್ಳು ಬಾರಿಸಿದ್ದಾರೆ.ಶಾಸಕ ಮುನಿರತ್ನ ಪಟಾಕಿ ಹಚ್ಚಿದ್ರು.ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಎದುರು ಸಂಭ್ರಮಾಚರಣೆ. ಮಾಡಲಾಯಿತು.

ಬಿಜೆಪಿ ಸಂಭ್ರಮಾಚರಣೆ ವೇಳೆ ಶಾಸಕ ಎಸ್.ಆರ್. ವಿಶ್ವನಾಥ್ ಗೆ ಸಿಹಿ ತಿನ್ನಿಸಿ ಮುತ್ತಿಟ್ಟಿದ್ದಾರೆಮಾಜಿ ಸಚಿವ ರಾಜೂ ಗೌಡ. ಇನ್ನು  ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿಜೆಪಿಗೆ 27 ವರ್ಷಗಳ ನಂತರ ಅಭೂತಪೂರ್ವ ಗೆಲುವು ಸಿಕ್ಕಿದೆ.ಆಪ್ ಪಕ್ಷ ಭ್ರಷ್ಟಾಚಾರ ವಿರುದ್ಧ ಆಂದೋಲನ ಮಾಡಿ ಅಧಿಕಾರಕ್ಕೆ ಬಂದಿತ್ತು. ಕೇಜ್ರಿವಾಲ್, ಆಪ್ ಮುಖವಾಡ ಕಳಚಿ ಬಿದ್ದಿದೆ.ಕೇಜ್ರಿವಾಲ್, ಆತಿಶಿ, ಸಿಸೋಡಿಯಾ ಹಿನ್ನಡೆ ಅನುಭವಿಸುತ್ತಿದ್ದಾರೆ.ಆಪ್ ನಾಯಕರ ಬಣ್ಣ ಬಯಲಾಗಿದೆ.ದೆಹಲಿ ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ.ಅಲ್ಲಿನ ಜನ ಮೋದಿಯವರ ಕೈ ಬಲಪಡಿಸಿದ್ದಾರೆ ಎಂದ್ರು.