ಮನೆ Latest News ಕೇರಳ ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದ ವಿಚಾರ;...

ಕೇರಳ ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದ ವಿಚಾರ; ಸಿಎಂ ಸಿದ್ದರಾಮಯ್ಯ ವಿರುದ್ದ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ

0

ಬೆಳಗಾವಿ: ಕೇರಳ ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಪಿಣರಾಯ್ ವಿಜಯನ್ ಗೆ ಪತ್ರ ಬರೆದಿರೊದಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ದ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯ ಸರ್ಕಾರ ‌ಅಲ್ಲಿ ಮನೆ ಕಟ್ಟಿಕೊಡುವ ಭರವಸೆ ನೀಡಿದ್ದಾರೆ. ಮಾನವೀಯ ನೆಲೆಯಲ್ಲಿ ಮಾಡೋದು ಸರಿ. ಆದರೆ ಸಿದ್ದರಾಮಯ್ಯ ಅವರ ನಡೆ ಮಾನವೀಯ ನೆಲೆಯಿಂದ ಕಾಣುತ್ತಿಲ್ಲ. ಇದು ಗುಲಾಮಗಿರಿ ಸಂಕೇತ ಎಂದಿದ್ದಾರೆ. ಹಿಂದೆ ರಾಹುಲ್, ಈಗ ಪ್ರಿಯಾಂಕ ಗಾಂಧಿ ಅಲ್ಲಿ ಸಂಸದರು. ಹಾಗಾಗಿ ಸಿಎಂ ಪತ್ರ ಬರೆದಿದ್ದಾರೆ.

ಇಲ್ಲಿ ಬಾಣಂತಿಯರ ಸಾವಾಗಿದೆ.,
ಎತ್ತಿನಹೊಳೆ ಯೋಜನೆ, ಅಧಿಕಾರಿ ಜೊತೆ ಜಗಳ ಮಾಡಿ ರೈತನೊಬ್ಬ ಹೊಳೆ ಹಾರಿ ಸತ್ತಿದ್ದಾನೆ.ಇದರ ಬಗ್ಗೆ ನಿಮಗೆ ಕಾಳಜಿ ಇಲ್ಲ. ನಿಮ್ಮ ವಯನಾಡು ಕಳಕಳಿ ಗುಲಾಮಗಿರಿ ಸಂಕೇತ. ಈ ಪ್ರಶ್ನೆಯನ್ನು ವಿಧಾನಸಭೆಯಲ್ಲೂ ಮಾಡ್ತೇವೆ. ಬಾಣಂತಿಯರ ಸಾವು ಹಸುಗೂಸುಗಳ ಸಾವು ಪ್ರಕರಣದಲ್ಲಿ ಎಸ್ ಐಟಿ ತನಿಖೆ ಮಾಡಬೇಕು.ಸಿದ್ದರಾಮಯ್ಯ ಮೇಲೆ ಬರ್ತಾ ಇರುವ ಭ್ರಷ್ಟಾಚಾರ ಆರೋಪಕ್ಕೆ ಉತ್ತರ ನೀಡುವಲ್ಲೆ ಬ್ಯುಸಿ ಇದ್ರಿ. ನಿಮ್ಮ ರಕ್ಷಣೆ ಮಾಡಿಕೊಳ್ಳುವಲ್ಲಿ ನೀವು ಬ್ಯುಸಿ ಆಗಿದ್ದೀರಾ. ಆದ್ರೆ ರಾಜ್ಯದ ವಿಷಯಗಳಿಗೆ ಗಮನ ನೀಡ್ತಿಲ್ಲ ಅಂದಿದ್ದಾರೆ

ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ ಹೊರ ಹಾಕಿರುವ ಆರ್ ಅಶೋಕ್ ಸಿಎಂ ಕೇರಳಕ್ಕೆ ಉಪಕಾರಿ, ಕರ್ನಾಟಕಕ್ಕೆ ಮಾರಿ ಎಂದಿದ್ದಾರೆ. ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯ ನವರ ಸರ್ಕಾರ,ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ. ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತತರಿಗೆ ಪರಿಹಾರ ಕೊಡಲು ಹಣವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಯಿಂದ ಸಾವನ್ನಪ್ಪಿರುವ ಬಾಣಂತಿ ಮಹಿಳೆಯರ ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ ಕೇರಳಕ್ಕೆ ಕೊಡಲು ಮುಂದಾಗಿದ್ದಾರೆ ಎಂದಿದ್ದಾರೆ.

ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ರಸ್ತೆಗುಂಡಿ ಮುಚ್ಚಲು ಹಣವಿಲ್ಲ. ಆದರೆ ಹೈಕಮಾಂಡ್ ನಾಯಕರನ್ನು ಓಲೈಸಲು ಕೇರಳದಲ್ಲಿ ಮನೆ ನಿರ್ಮಿಸಿಕೊಡಲು ಹೊರಟಿದೆ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಕೇರಳ ಸಿಎಂ ಪಿಣರಾಯ್ ವಿಜಯನ್ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳಳೂರು; ಕೇರಳ ಸಿಎಂ ಪಿಣರಾಯ್ ವಿಜಯನ್ ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೇರಳದಲ್ಲಿ 1೦೦ ಮನೆ ಕಟ್ಟಿ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಪಿಣರಾಯ್ ವಿಜಯನ್ ಗೆ ಪತ್ರ ಬರೆದಿದ್ದಾರೆ.

ಕೇರಳದ ವಯನಾಡಿನಲ್ಲಿ ಉಂಟಾದ ಭೀಕರ ಪ್ರವಾಹ ಸಂದರ್ಭದಲ್ಲಿ ಮನೆ ಕಟ್ಟಿಕೊಡುವ ಸಿಎಂ  ಸಿದ್ದರಾಮಯ್ಯ ಭರವಸೆ ನೀಡಿದ್ದರು. ಕರ್ನಾಟಕ ಸರ್ಕಾರದಿಂದ ಸುಮಾರು 100 ಮನೆ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈ ಸಂಬಂಧ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಆದ್ರೆ ಇದುವರೆಗೂ ಕೇರಳ ಸಿಎಸ್ ರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನಲೆ, ಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ನಮ್ಮ ಸರ್ಕಾರ ಮನೆ ನಿರ್ಮಾಣ ಮಾಡಲು ಸಕಲ ಕ್ರಮ ಕೈಗೊಂಡಿದೆ.  ಅದಕ್ಕಾಗಿ ಅಲ್ಲಿ ಭೂಮಿ ಖರೀದಿಗೂ ಸರ್ಕಾರ ಸಿದ್ದವಾಗಿದೆ. ಆದ್ರೆ ಇದಕ್ಕೆ ಸಂಬಂಧಿಸಿದಂತೆ ಕೇರಳ ಸಿಎಸ್ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಇದರ ಕುರಿತು ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.