ಮನೆ Blog ಕೇಂದ್ರ ಚುನಾವಣಾ ಆಯೋಗಕ್ಕೆ ವಾಲ್ಮೀಕಿ ಹಗರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಿಯೋಗದಿಂದ ದೂರು

ಕೇಂದ್ರ ಚುನಾವಣಾ ಆಯೋಗಕ್ಕೆ ವಾಲ್ಮೀಕಿ ಹಗರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಿಯೋಗದಿಂದ ದೂರು

0

ನವದೆಹಲಿ; ರಾಜ್ಯದಲ್ಲಿ ನಡೆದ ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಬಿಜೆಪಿ ನಾಯಕರ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ವಾಲ್ಮೀಕಿ ನಿಗಮ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ದೂರು ನೀಡಿತು. ಬಳ್ಳಾರಿ ರಾಯಚೂರು ಕ್ಷೇತ್ರಗಳ ಚುನಾವಣೆಯಲ್ಲಿ ದುರ್ಬಳಕೆ ಮಾಡಲಾಗಿದೆ.ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿ ನಿಯೋಗ ದೂರು ನೀಡಿತು.

ಇನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಲ್ಮೀಕಿ ನಿಗಮ ಮಂಡಳಿಯಲ್ಲಿ ಅಕ್ರಮ ನಡೆದಿದೆ. ಹಣ ದುರ್ಬಳಕೆ ಮಾಡಿಕೊಂಡು ಚುನಾವಣೆಗೆ ಬಳಸಿದೆ.ಇದನ್ನು ಇಡಿ ತನ್ನ ತನಿಖೆಯಲ್ಲೂ ಉಲ್ಲೇಖಿಸಿದೆ.ನಿಗಮ ಮಂಡಳಿಯನ್ನೇ ಬಳ್ಳಾರಿಯಲ್ಲಿ ಮತದಾರರಿಗೆ ನೀಡಿದೆ.ಹೀಗಾಗೀ ಅವರ ಸದಸ್ಯತ್ವವನ್ನು ರದ್ದು ಮಾಡಬೇಕು ಎಂದು ಮನವಿ ಮಾಡಿದ್ದೇವೆ ಎಂದರು,

ಇದೇ ವೇಳೆ ಮಾತನಾಡಿದ ವಿದಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವಾಲ್ಮೀಕಿ ನಿಗಮ ಮಂಡಳಿ ಹಣವನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆ ನಡೆಸಲಾಗಿದೆ. ಇಡಿ ತನಿಖೆಯಲ್ಲಿ ಇದನ್ನು ಉಲ್ಲೇಖಿಸಿದೆ.ಹೀಗಾಗಿ ಇ ತುಕಾರಂ ಸದಸ್ಯತ್ವ ರದ್ದು ಮಾಡಲು ಮನವಿ ಮಾಡಿದ್ದೇವೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ;ಜೈಲು ಸೇರಿದ್ದ ಮಾಜಿ ಸಚಿವ ಬಿ ನಾಗೇಂದ್ರ

 

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಬಿ ನಾಗೇಂದ್ರ ರಿಲೀಸ್ ಆಗಿದ್ದಾರೆ.

ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ನಿನ್ನೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಅದರ ಬೆನ್ನಲ್ಲೇ  ಇಂದು ಪರಪ್ಪನ ಅಗ್ರಹಾರ ರಿಲೀಸ್ ಆಗಿದ್ದಾರೆ.

ಇನ್ನು ಜೈಲಿನಿಂದ ರಿಲೀಸ್ ಆದ ಬೆನ್ನಲ್ಲೇ ನಾಗೇಂದ್ರ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿದರು. ಬಳಿಕ ಮಾತನಾಡಿದ  ಮಾಜಿ ಸಚಿವ ನಾಗೇಂದ್ರ ಮೂರು ತಿಂಗಳಿನಿಂದ ದುಷ್ಟ ರಾಜಕೀಯ ಮಾಡಿಕೊಂಡು  ಬಿಜೆಪಿಯವರು ಬರ್ತಿದ್ದಾರೆ. ಬಿಜೆಪಿ ಇಡಿಯನ್ನ ಕೈ ಗೊಂಬೆ ಮಾಡಿಕೊಂಡಿದೆ.ಕಾಂಗ್ರೆಸ್ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸುತ್ತಿದೆ.ವಾಲ್ಮೀಕಿ ಹಗರಣದಲ್ಲಿ ಸಿಎಂ,ಡಿಸಿಎಂ ಹೆಸರು ಹೇಳುವಂತೆ ನನ್ನ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ರು.ಬಿಜೆಪಿಯೇತರ ಸರ್ಕಾರವನ್ನ ಟಾರ್ಗೆಟ್ ಮಾಡಲಾಗ್ತಿದೆ.ಇವತ್ತು ಬಿಜೆಪಿಯಲ್ಲಿ 66 ಜನ ಶಾಸಕರಿದ್ದಾರೆ.ಮುಂದೆ ಅದು ಇನ್ನು ಕಡಿಮೆ ಆಗುತ್ತೆ ಎಂದರು.

ನ್ಯಾಯ ಇರುತ್ತೆ ಹಗರಣದಲ್ಲಿ ನಮ್ಮ ಪಾತ್ರ ಏನು ಇಲ್ಲ.ಮುಡಾದಲ್ಲೂ ಸಹ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಇಡಿ ಬಗ್ಗೆ ದೇಶದಲ್ಲಿ ನಂಬಿಕೆ ಇದೆ.ಮುಂದಿನ ದಿನಗಳಲ್ಲಿ ನೀವೆಲ್ಲರೂ ಸಾಕ್ಷಿ ಆಗ್ತೀರಾ.ಈ ಕೇಸ್ ಬಿದ್ದು ಹೋಗುತ್ತೆ ಎಂದರು.