ಮನೆ Latest News ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ: ಸಿಎಂ ಸಿದ್ದರಾಮಯ್ಯ ಹೇಳಿಕೆ

ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ: ಸಿಎಂ ಸಿದ್ದರಾಮಯ್ಯ ಹೇಳಿಕೆ

0

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. : ಇಂದು ಕೆಪಿಸಿಸಿ ಕಚೇರಿಯಲ್ಲಿ ಮಹಾತ್ಮಾ ಗಾಂಧೀಜಿ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿಯವರು ದೇಶವನ್ನು ಹಿಂದೂಸ್ಥಾನ ಹಿಂದೂರಾಷ್ಟ್ರ ಮಾಡ್ತೀವಿ ಅಂತ ಹೊರಟಿದ್ದಾರೆ. ಏಕ ಭಾಷೆ ಏಕ ಸಂಹಿತೆ ಜಾರಿಗೆ ತರಲು ಹೊರಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಸಬೇಕು ಪ್ರಜಾಪ್ರಭುತ್ವ ರಕ್ಷಣೆ ಆಗಬೇಕು. ನಾವೆಲ್ಲರೂ ಕೂಡ ಎರಡನೇ ಹೋರಾಟವನ್ನು ಮಾಡಬೇಕು. ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ.ಇದು ಅತ್ಯಂತ ಅಗತ್ಯ ಮತ್ತು ಅನಿವಾರ್ಯತೆ ಎಂದಿದ್ದಾರೆ.

ಮಹಾತ್ಮ ಗಾಂಧಿಯನ್ನು ಗುಂಡಿಟ್ಟು ಕೊಂದಿರಬಹುದು. ಆದರೆ ಅವರ ಮೌಲ್ಯಗಳನ್ನು ಕೊಲ್ಲಲು ಸಾಧ್ಯವಿಲ್ಲ. ನಾವು ನಿಜವಾಗಿ ಅವರಿಗೆ ಗೌರವ ಸಲ್ಲಿಸುವುದು ಅಂದ್ರೆ ಯಾವ ಮೌಲ್ಯಗಳಿಗಾಗಿ ಅವರು ಹೋರಾಟ ಮಾಡಿದರೋ, ಆ ಮೌಲ್ಯಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶ ಸಮಾಜ ಕಟ್ಟುವ ಕೆಲಸ ಮಾಡಿದಾಗ ಮಾತ್ರ ಗಾಂಧೀಗೆ ಗೌರವ ಕೊಟ್ಟು ಅದಕ್ಕೊಂದು ಅರ್ಥ ಬರುತ್ತದೆ ಎಂದು ತಿಳಿಸಿದ್ರು.

ಗಾಂಧೀಜಿ ಬೇರೆ ಧರ್ಮ ಬೇರೆ ಭಾಷೆ ಗೌರವಿಸುತ್ತಿದ್ದರು.ಬೇರೆ ಧರ್ಮದ ಬಗ್ಗೆ ಅವರಿಗೆ ಸಹಿಷ್ಣುತೆ ಇತ್ತು.ಸಮಾನತೆ ಸಹಿಷ್ಣುತೆ ಇರುವ ದೇಶ ನಮ್ಮದು.ನಾವೆಲ್ಲರೂ ಕೂಡ ಬೇರೆ ಧರ್ಮ ಬೇರೆ ಭಾಷೆ ಬಗ್ಗೆ ಸಹಿಷ್ಣುತೆ ಇಟ್ಟುಕೊಳ್ಳಬೇಕು.ವೈವಿದ್ಯತೆಯಲ್ಲಿ ಏಕತೆಯನ್ನು ಕಾಣಬೇಕು ನಾವು.ಯಾವುದೇ ಧರ್ಮ ಮೇಲಲ್ಲ ಯಾವುದೇ ಧರ್ಮ ಕೀಳಲ್ಲ.ಯಾವುದೇ ಜಾತಿ ಮೇಲಲ್ಲ ಯಾವುದಃ ಜಾತಿ ಕೀಳಲ್ಲ. ಸಂವಿಧಾನ ರಕ್ಷಣೆ ಮಾಡಬೇಕಾಗಿದ್ದು ನಮ್ಮ ಕರ್ತವ್ಯ ಎಂದ ಅವರು ಕೆಲವು ಮತಾಂಧ ಶಕ್ತಿಗಳು ನಮ್ಮ ಸಂವಿಧಾನಕ್ಕೆ ಧಕ್ಕೆ ತರುವ ಪ್ರಯತ್ನ ಮಾಡ್ತಿದ್ದಾರೆ.ಸಂವಿಧಾನದ ರಕ್ಷಣೆ ಆದ್ರೆ ನಮ್ಮೆಲ್ಲರ ರಕ್ಷಣೆ ಆಗುತ್ತದೆ ಎಂದರು.

ಬಿಜೆಪಿ ಮತ್ತು ಆರ್ ಎಸ್ ಎಸ್ ನವರು ಗಾಂಧಿ ಕೊಂದವರನ್ನು ಆರಾಧಿಸುತ್ತಾರೆ.ಗೋಡ್ಸೆ ಒಬ್ಬ ಹಂತಕ ಮತಾಂಧ ಅವನನ್ನು ಪೂಜಿಸ್ತಾರೆ ಆರ್ ಎಸ್ ಎಸ್ ನವರು. ಗೋಳವಾಲ್ಕರ್. ಸಂವಿಧಾನದಲ್ಲಿ ಭಾರತೀಯತೆಯೇ ಇಲ್ಲ ಎಂದಿದ್ದರು ಸಂವಿಧಾನವನ್ನೇ ರೀರೈಟ್ ಮಾಡಿ ಮನುಸ್ಮೃತಿ ತರಲು ಹೊರಟಿದ್ದಾರೆ.ಸಂವಿಧಾನ ವಿರೋಧಿ ಗಳ ವಿರುದ್ದ ನಾವು ಹೋರಾಟ ಮಾಡಬೇಕಾಗುತ್ತದೆ ಎಂದ್ರು.