ಮನೆ Latest News ಬಳ್ಳಾರಿ ಜೈಲಿನಲ್ಲಿ ನಿದ್ದೆಯಿಲ್ಲದೇ ರಾತ್ರಿ ಕಳೆದ ಡಿ ಬಾಸ್

ಬಳ್ಳಾರಿ ಜೈಲಿನಲ್ಲಿ ನಿದ್ದೆಯಿಲ್ಲದೇ ರಾತ್ರಿ ಕಳೆದ ಡಿ ಬಾಸ್

0

 

 

 

ಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿದ್ದಾರೆ ಎಂಬ ಆರೋಪ ಹಿನ್ನೆಲೆ ಕೋರ್ಟ್ ಅನುಮತಿ ಮೇರೆಗೆ ನಿನ್ನೆ  ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇನ್ನು ನಿನ್ನೆ ರಾತ್ರಿಯಿಡೀ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ನಿದ್ದೆ ಇಲ್ಲದೇ ಮೊದಲ ರಾತ್ರಿ ಕಳೆದಿದ್ದಾರೆ ಎನ್ನಲಾಗಿದೆ.

 

ರಾತ್ರಿ 1 ಗಂಟೆಯವರೆಗೆ ನಟ ದರ್ಶನ್ ಅವರು ನಿದ್ರೆ ಬಾರದೆ ಪರದಾಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಬೆಳಗ್ಗೆ ಜೈಲಿನಲ್ಲಿ ನೀಡುವ ಉಪ್ಪಿಟ್ಟನ್ನು ದರ್ಶನ್ ಸೇವಿಸಿದ್ದಾರೆ ಎನ್ನಲಾಗಿದೆ.ಬಳ್ಳಾರಿ ಜೈಲಿನಲ್ಲಿ ವಿಶೇಷ ಭದ್ರತಾ ಸೆಲ್ ನಲ್ಲಿ ನಟ ದರ್ಶನ್ ಅವರನ್ನು ಇರಿಸಲಾಗಿದೆ. ಅಲ್ಲದೇ ಅದಕ್ಕೆ ಮೂವರು ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಸಿಸಿ ಟಿವಿ ಕಣ್ಗಾವಲಿನಲ್ಲಿಯೇ ನಟ ದರ್ಶನ್ ಇರಲಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್; ದಾಸ ಈಗ ಕೈದಿ ಸಂಖ್ಯೆ 511

ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಫೋಟೋ ವೀಡಿಯೋ ವೈರಲ್ ಆದ ಬೆನ್ನಲ್ಲೇ ಕೋರ್ಟ್ ಅನುಮತಿ ಮೇರೆಗೆ ಅಧಿಕಾರಿಗಳು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಬೆಳಗ್ಗೆ 4 ಗಂಟೆಗೆ ವೇಳೆಗೆ ನಟ ದರ್ಶನ್ ಅವರನ್ನು ಕರೆದುಕೊಂಡು ಪೊಲೀಸರು ಹೊರಟಿದ್ದಾರೆ.

ನಸುಕಿನ ಜಾವ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ದರ್ಶನ್ ಅವರನ್ನು ಕರೆದುಕೊಂಡು ಹೊರಟ ಪೋಲಿಸರು ಆಂಧ್ರ ಮಾರ್ಗವಾಗಿ ಬಳ್ಳಾರಿಗೆ ಸೇರಿದ್ದಾರೆ. ಪರಪ್ಪನ ಅಗ್ರಹಾರದಿಂದ ಸಿಲ್ಕ್ ಬೋರ್ಡ್, ಹೆಬ್ಬಾಳ, ಯಲಹಂಕ, ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಪೆನಗೊಂಡ, ಅನಂತಪುರ ಮಾರ್ಗವಾಗಿ ಬಳ್ಳಾರಿ ಜೈಲಿಗೆ ನಟ ದರ್ಶನ್ ಅವರನ್ನು ಸೇರಿಸಿದ್ದಾರೆ. ಇನ್ನು ಬೆಂಗಳೂರು ಜೈಲಿನಿಂದ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಪೊಲೀಸರು ಸ್ಥಳಾಂತರ ಮಾಡಲು ಮುಂದಾದಾಗ ನಟ ದರ್ಶನ್ ಮಂಕಾಗಿದ್ದರು ಎನ್ನಲಾಗಿದೆ. ಅಧಿಕಾರಿಗಳ ಬಳಿ ನಾನು ಇಲ್ಲೇ ಇರುತ್ತೇನೆ ಎಂದು ನಟ ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ಕೊನೆಗೆ ಒಲ್ಲದ ಮನಸ್ಸಿನಿಂದ ಪೊಲೀಸ್ ವಾಹನ ಹತ್ತಿದ್ದಾರೆ ದರ್ಶನ್. ಇನ್ನು ಬಳ್ಳಾರಿ ಜೈಲು ಬಳಿ ಬರುತ್ತಿದ್ದಂತೆ ದರ್ಶನ್ ಬ್ಯಾಗ್ ನ್ನು ಸಿಬ್ಬಂದಿ ತಪಾಸಣೆ ಮಾಡಿದ್ದಾರೆ. ಅವರ ಹೆಸರು, ತಂದೆಯ ಹೆಸರನ್ನು ಡೈರಿಯಲ್ಲಿ ದಾಖಲಿಸಿಕೊಂಡಿದ್ದಾರೆ. ಇದೇ ವೇಳೆ ದರ್ಶನ್ ಕತ್ತಿನಲ್ಲಿದ್ದ ಸರ ಹಾಗೂ ಕೈಯಲ್ಲಿದ್ದ ಕಡಗವನ್ನು ಜೈಲಾಧಿಕಾರಿಗಳು ತೆಗೆಸಿದ್ದಾರೆ.

ಬಳ್ಳಾರಿ ಜೈಲು ರಾಜ್ಯದ ಹಳೆಯ ಜೈಲುಗಳಲ್ಲಿ ಒಂದಾಗಿದ್ದು ಬ್ರಿಟಿಷರ ಕಾಲದಲ್ಲಿ ಇದನ್ನು ನಿರ್ಮಿಸಲಾಗಿದೆ. ಹಿಂದೆ ಕಠೋರ ಶಿಕ್ಷೆಗಳಿಗಾಗಿ ಈ ಜೈಲು ಕುಖ್ಯಾತಿಯನ್ನು ಪಡೆದಿತ್ತು. 16 ಎಕರೆ ವಿಸ್ತೀರ್ಣದಲ್ಲಿರುವ ಈ ಜೈಲಿನಲ್ಲಿ 15 ವಿಶೇಷ ಭದ್ರತಾ ಸೆಲ್ ಗಳಲ್ಲಿದ್ದು ಈ 15 ವಿಶೇಷ ಭದ್ರತಾ ಸೆಲ್ ಗಳಲ್ಲಿ 15ನೇ ಸೆಲ್ ನಲ್ಲಿ ನಟ ದರ್ಶನ್ ಅವರು ಇರಿಸಲಾಗಿದೆ. ಅವರಿಗಾಗಿ ಮೂವರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೇ ಸಿಸಿಟಿವಿ ಕಣ್ಗಾವಲಿನಲ್ಲೇ ನಟ ದರ್ಶನ್ ಅವರು ಇರಲಿದ್ದಾರೆ.

ಇತ್ತ ದರ್ಶನ್ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಾರೆ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಸಾಕಷ್ಟು ಸಂಖ್ಯೆಯಲ್ಲಿ ದರ್ಶನ್ ಅವರ ಅಭಿಮಾನಿಗಳು ಜೈಲಿನ ಬಳಿ ಜಮಾಯಿಸಿದ್ದರು. ಅವರನ್ನು ನಿಯಂತ್ರಿಸೋದೇ ಪೊಲೀಸರಿಗೆ ಬಹು ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಜೈಲಿನ ಹೊರಗೂ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಸದ್ಯ ಬಳ್ಳಾರಿ ಜೈಲಿನಲ್ಲಿ 385 ಕೈದಿಗಳಲ್ಲಿದ್ದು ದರ್ಶನ್ ಅವರಿಗೆ ಕೈದಿ ಸಂಖ್ಯೆ 511 ನ್ನು ನೀಡಲಾಗಿದೆ.