ಬೆಂಗಳೂರು; ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಈ ಬಗ್ಗೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಇವತ್ತು ೨೦೨೮ ರ ಚುನಾವಣೆ ಯ ದಿಕ್ಸೂಚಿ ಗೆ ಜನತೆ ಸಂದೇಶ ಕೊಟ್ಟಿದ್ದಾರೆ. ನಿನ್ನೆ ಸಂಜೆಯೇ ನಾನು ಹೇಳಿದ್ದೆ. ನಿಮ್ಮ ಸಮೀಕ್ಷೆ ಸುಳ್ಳಾಗುತ್ತದೆ.ನಾವು ಮಾಡೋ ಸಮೀಕ್ಷೆಯೇ ಬೇರೆ ಅಂತ ಹೇಳಿದ್ದೆ ಎಂದಿದ್ದಾರೆ.
ಮೂರು ಕ್ಷೇತ್ರದ ಫಲಿತಾಂಶ ಬಂದಿದೆ. ಮೊದಲಿಗೆ ಚನ್ನಪಟ್ಟಣದಲ್ಲಿ ನಿಖಿಲ್ಸೋಲು ಎಂದು ಹೇಳೋಕೆ ತಯಾರಿಲ್ಲ.ಅವರ ತಂದೆ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಎಂಪಿ, ಎರಡು ಬಾರಿ ಸಿಎಂ ಆಗಿದ್ದರು. ಅವರು ಆ ಕ್ಷೇತ್ರದಲ್ಲಿ ಬಿಟ್ಟು ಹೋದ ಕುರುಹುಗಳಿಗೆ ಜನ ಉತ್ತರ ನೀಡಿದ್ದಾರೆ. ಶಿಗ್ಗಾಂವಿ ಯಲ್ಲೂ ಭರತ್ ಸೋಲು ಅನ್ನೋದು ಹೇಳಲ್ಲ. ಅಲ್ಲಿನ ಜನರ ಪ್ರೀತಿ ವಿಶ್ವಾಸ ನೋಡಿಕೊಂಡು ಅಲ್ಲಿ ಈ ಹಿಂದೆ ನಮ್ಮ ಅಭ್ಯರ್ಥಿ ಸೋತಿದ್ದರು. ಈಗ ಅಲ್ಲಿ ಯೂ ಗೆದ್ದಿದ್ದಾರೆ. ಈಗ ಸಂಡೂರಲ್ಲಿ ನಾವು ಗೆದ್ದಿದ್ದೇವೆ. ಈ ಮೂರು ಚುನಾವಣೆ ನಮ್ಮ ಗ್ಯಾರಂಟಿ ಮತ್ತು ಅಭಿವೃದ್ಧಿ ನಮಗೆ ಮುಖ್ಯ ಎಂದಿದ್ದಾರೆ.
ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು; ಸಿಎಂ ಸಿದ್ದರಾಮಯ್ಯಗೆ ಶುಭಾಶಯ ಹೇಳಿದ ಸಚಿವರು, ಶಾಸಕರ ನಿಯೋಗ
ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು ಸಾಧಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವರು ಹಾಗೂ ಶಾಸಕರ ನಿಯೋಗ ಭೇಟಿ ಮಾಡಿ ಧನ್ಯವಾದ ಹೇಳಿದ್ರು. ಕೈ ನಾಯಕರು ಸಿಹಿ ತಿನ್ನಿಸಿ ಶುಭಾಶಯ ಹೇಳಿದರು.
ಇನ್ನು ಕೇರಳದ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಗೆಲುವು ಹಿನ್ನೆಲೆ ಪ್ರಿಯಾಂಕಾ ಗಾಂಧಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಹೇಳಿದ್ದಾರೆ. ದೂರವಾಣಿ ಮೂಲಕ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ಸಿಎಂ ಮಾತುಕತೆ ನಡೆಸಿದ್ದಾರೆ.ಭಾರಿ ಬಹುಮತದ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿ ದ್ದಾರೆ. ಕರ್ನಾಟಕದಲ್ಲೂ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ಸಿಎಂ ಗೆ ಪ್ರಿಯಾಂಕಾ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ.
ಇನ್ನು ಸಚಿವ ಕಾಂಗ್ರೆಸ್ ಗೆಲುವಿನ ಬಗ್ಗೆ ಮಾತನಾಡಿದ ಎಂ.ಬಿ ಪಾಟೀಲ್ ರಾಜ್ಯದಲ್ಲಿ ಮೂರಕ್ಕೆ ಮೂರು ಕ್ಷೇತ್ರ ಗೆದ್ದಿದ್ದೇವೆ. ಬಿಜೆಪಿಯ ವಿರುದ್ಧ ಜನ ತಿರುಗಿದ್ದಾರೆ. ಝಾರ್ಖಾಂಡ್ ನಲ್ಲಿ 47 ಸೀಟು ಮುಂದೆ ಇದ್ದೀವಿ.ಅಲ್ಲಿಯೂ ನಾವು ಸರ್ಕಾರ ರಚನೆ ಮಾಡ್ತೀವಿ. ಇವಿಎಂ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಆ ಬಗ್ಗೆ ನಾನು ಮಾತಾಡುವುದಿಲ್ಲ. ಹೈಕಮಾಂಡ್ ಮಾತನಾಡುತ್ತಾರೆ. ಕಾಂಗ್ರೆಸ್ ಮತ, ಯೋಗೇಶ್ವರ್ ಮತ ಶಕ್ತಿಯಾಗಿ ಹೊರ ಬಂದಿದೆ.ಕುಟುಂಬ ರಾಜಕಾರಣ ನಮಗೆ ಪ್ಲಸ್ ಪಾಯಿಂಟ್ ಆಗಿದೆ.ಸರ್ಕಾರ ಕೊತ್ತೊಗಿಯಬೇಕೆಂಬ HDD ಹೇಳಿಕೆ ವಿಚಾರಕ್ಕೆ ರಿಯ್ಯಾಕ್ಟ್ ಮಾಡಿದ ಅವರು ಇದು ಜನರ ಕೈಯಲ್ಲಿದೆ, ಯಾರ ಬಳಿಯೂ ಇಲ್ಲ ಎಂದಿದ್ದಾರೆ.