ಬೆಂಗಳೂರು; ಸಿಟಿ ರೌಂಡ್ಸ್ ಫೋಟೋ ಶೂಟ್ ಗೆ ಸೀಮಿತ ಎಂಬ ಬಿಜೆಪಿ ಆರೋಪಕ್ಕೆ ಡಿಸಿಎಂ ಡಿ ಕೆ ಶಿಕುಮಾರ್ ತಿರುಗೇಟು ಕೊಟ್ಟಿದ್ದಾರೆ.
ಬಿಜೆಪಿಯವರ ಆರೋಪಕ್ಕೆ ತಿರುಗೇಟು ಕೊಟ್ಟ ಡಿ ಕೆ ಶಿವಕುಮಾರ್ ನಿಜೆಪಿಯವರು ಇರೋದೆ ಟೀಕೆ ಮಾಡೋದಕ್ಕೆ. ಬಿಜೆಪಿಯವರಿಗೆ ಬೇರೆ ಏನು ಕೆಲಸ ಇದೆ?. ಹಿಂದೆ ಸಿಎಂ ಗಳು ಎಲ್ಲಾ ಸಿಟಿ ರೌಂಡ್ಸ್ ಮಾಡಿದ್ದು ಸುಮ್ಮನೆನಾ?.ಬೊಮ್ಮಾಯಿ, ಯಡಿಯೂರಪ್ಪ ಎಲ್ಲಾ ಮಾಡಿದ್ರಲ್ಲ. ಅಶೋಕ್ ಎಲ್ಲಾ ಬಸ್ಸಲ್ಲಿ ಹೋಗಿದ್ರಲ್ಲ ಏನಕ್ಕೆ ಹೋಗಿದ್ದರು? ಎಂದು ಪ್ರಶ್ನಿಸಿದ್ದಾರೆ.
ಇದು ದೊಡ್ಡ ಪ್ರಾಜೆಕ್ಟ್. ೧೫೦ ಕಿಮೀ ತಗೊಂಡಿದ್ದೇವೆ..ಅದಕ್ಕೆ ೧೭೦೦ ಕೋಟಿ ತಗೊಂಡಿದ್ದೇವೆ.ಕೆಲವೆಲ್ಲಾ ೬೦೦-೭೦೦ ಕೋಟಿದು ಹೊಸದಾಗಿ ರಸ್ತೆಗೆ ಭೂಮಿ ಪೂಜೆ ಮಾಡುತ್ತೇವೆ ಎಂದರು.
ಇನ್ನು ಸಚಿವ ರಾಜಣ್ಣ ಅವರ ಹೇಳಿಕೆ ಬಗ್ಗೆ ಮಾಧ್ಯಮವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈಗೇನು ನಾನು ಮಾತನಾಡಲ್ಲ. ಈಗ ಅದರ ಬಗ್ಗೆ ಚರ್ಚೆ ಬೇಡ. ಕೇರಳದಲ್ಲಿ ಕಾರ್ಯಕ್ರಮ ಇದೆ.ಅಲ್ಲಿ ಭಾಷಣ ಮುಗಿಸಿಕೊಂಡು ಬಂದು ಮಾತಾಡ್ತೀನಿ ಎಂದರು.
ಇದೇ ವೇಳೆ ಅನ್ನಭಾಗ್ಯದ ಹಣ ಹಾಕುತ್ತೇವೆ.ಗೃಹ ಲಕ್ಷ್ಮಿದು ೩ ತಿಂಗಳಿನ ಹಣ ಹಾಕಬೇಕು. .ಅನ್ನಭಾಗ್ಯ ಯೋಜನೆಯದ್ದು ಹಾಕುತ್ತೇವೆ. ನಮ್ಮ ಸರ್ಕಾರ ಏನು ಭರವಸೆ ಕೊಟ್ಟಿತ್ತು ಅದನ್ನ ಪೂರೈಸುತ್ತೇವೆ ಎಂದರು.
ಡಿ ಕೆ ಶಿವಕುಮಾರ್ ಅವರು ಎಐಸಿಸಿಯನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ; ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ
ಬೆಂಗಳೂರು; ಡಿ ಕೆ ಶಿವಕುಮಾರ್ ಐಸಿಸಿ ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಹೆಸರು ದುರುಪಯೋಗ ಎಂಬ ಡಿಸಿಎಂ ಹೇಳಿಕೆ ತಿರುಗೇಟು ನೀಡುತ್ತಾ ಡಿಕೆಶಿ ಸಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅನ್ನೋದು ಹೇಳಿಕೆ ಅಷ್ಟೆ, ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ .ಎಚ್ಚರಿಕೆ ಎಲ್ಲಾ ಯಾರು ಕೇಳ್ತಾರೆ..?. ಪೂರ್ಣಾವಧಿ, ಅಲ್ಪಾವದಿ ಏನೇ ಇದ್ದರು ಎಲ್ಲಾ ಹೈಕಮಾಂಡ್ ತೀರ್ಮಾನ.ಸಿಎಲ್ ಪಿ ಸಭೆಯಲ್ಲೇ ಸಿದ್ದರಾಮಯ್ಯ ಹೇಳಿದ್ದಾರೆ. ಅವರೇ ಹೇಳಿದ ಮೇಲೆ ನಮ್ಮದೇನು .ಅವರು ಒಪ್ಪಿದ ಮೇಲೆ ಆಯ್ತಲ್ಲ. ಅವರು ಎಐಸಿಸಿ ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಸಚಿವ ರಾಜಣ್ಣ ಗರಂ ಆಗಿಯೇ ತಿರುಗೇಟು ಕೊಟ್ಟಿದ್ದಾರೆ.
ಇನ್ನು ಸಿಎಂ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ರಾಜಣ್ಣ ಹೈಕಮಾಂಡ್ ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಲೇಬೇಕು. ಏಕ ಪ್ರಕಾರವಾಗಿ ನಿರ್ಧಾರ ಏನು ಮಾಡಲ್ಲ. ನಾವು ತಪ್ಪು ಮಾಡಿದ್ರೆ ಮಾತ್ರ ಎಚ್ಚರಿಕೆ ಕೊಡಬೇಕು .ನಾವೇನು ತಪ್ಪು ಮಾಡಿಲ್ಲ. ಹೈಕಮಾಂಡ್ ಎದುರು ನಾವು ಹೋಗುತ್ತಿಲ್ಲ. ಯಾರು ಕೂಡ ಹೈಕಮಾಂಡ್ ವಿರುದ್ಧ ನಾವಿಲ್ಲ. ಜಿಸಿ ಚಂದ್ರಶೇಖರ್ ಯಾರು, ಅವರ ಮಾತಿಗೆ ಇಷ್ಟು ಮನ್ನಣೆ. ಕೆಪಿಸಿಸಿ ಕಾರ್ಯಧ್ಯಕ್ಷ ಅಂದ್ರೆ ಎರಡು ಕೊಂಬು ಇದ್ದಾವ?. ಶಿಶುಪಾಲ ಅವರೆ, ನಾನು ಶ್ರೀಕೃಷ್ಣ ಎಂದ ರಾಜಣ್ಣ ಆಕ್ರೋಶ ಹೊರ ಹಾಕಿದ್ದಾರೆ.
ನಾವು ಯಾರ ಹೆಸರನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಅವರು ಎಐಸಿಸಿ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಎಲ್ಲದಕ್ಕೂ ಎಐಸಿಸಿ ಹೇಳಿದೆ ಅಂತ ಎಐಸಿಸಿ ಹೆಸರನ್ನ ಅವರು ದುರ್ಬಳಕೆ ಮಾಡಿಕೊಳ್ಳಬಾರದು. ಅವರು ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದು ಅದು ಆರೋಪ ಅಲ್ಲ ವಾಸ್ತವ. ನಾನು ಯಾರಿದಂಲೂ ಶಿಸ್ತಿನ ಪಾಠ ಮಾಡಿಸಿಕೊಳ್ಳಬೇಕಿಲ್ಲ . ೫೦ ವರ್ಷ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ನಾನು ಸತ್ಪರಿಣಾಮ ಬೀರುವ ಮಾತನಾಡುತ್ತೇನೆ ಹೊರತು ದುಷ್ಪರಿಣಾಮ ಬೀರುವ ಮಾತನಾಡಲ್ಲ ಎಂದರು.
ನನಗೂ ಡಿ.ಕೆ.ಶಿವಕುಮಾರ್ ಗೂ ವೈಯುಕ್ತಿಕವಾಗಿ ಏನೂ ಇಲ್ಲ. ವಿಚಾರ ಬೇಧ ಇರಬಹುದು ಅಷ್ಟೆ. ವಿಧಾನಸೌಧಕ್ಕೆ ನಾನು ಒಂದು ರಸ್ತೆಯಲ್ಲಿ ಹೋಗೋಣ ಅಂದರೆ ಅವರು ಒಂದು ರಸ್ತೆಯಲ್ಲಿ ಹೋಗೋಣ ಎನ್ನಬಹುದು. ನಾನು ಅವರು ಸಾಕಷ್ಟು ವರ್ಷದ ಸ್ನೇಹಿತರು. ಒಟ್ಟಿಗೆ ವಿದೇಶ ಪ್ರವಾಸ ಎಲ್ಲ ಮಾಡಿದ್ದೇವೆ. ವಿಚಾರ ಭೇದ ಅಷ್ಟೆ, ವೈಯುಕ್ತಿಕ ಏನು ಇಲ್ಲ.ಅವರನ್ನು ಮನೆಗೆ ಒಂದು ದಿನ ಊಟಕ್ಕೆ ಕರೆಯುತ್ತೇನೆ ಎಂದಿದ್ದಾರೆ.
ಅವರೆಲ್ಲಾ ಪಕ್ಷಕ್ಕೆ ಹೊಣೆಗಾರರು. ಅವರ ಶಕ್ತಿ ಏನಿದೆ..? ಶಕ್ತಿ ಮೀರಿ ಅಧಿಕಾರ ಅನುಭವಿಸ್ತಿದ್ದಾರೆ. ಎರಡು ಬಾರಿ ಎಂಪಿ, ಪಾರ್ಟಿಗೆ ಏನ್ ಶಕ್ತಿ ಕೊಟ್ಟಿದ್ದಾರೆ?. ಅವರು ಏನಿಲು ಎತ್ತ ಅಂತ ಆತ್ಮವಿಮರ್ಶೆ ಮಾಡಿಕೊಂಡು ಮಾತಾಡಬೇಕು. ಕಾರ್ಪೋರೇಷನ್ ಎಲೆಕ್ಷನ್ ನಲ್ಲಿ ಎಷ್ಟು ವೋಟು ತಗೊಂಡಿದ್ರು?. ತಪ್ಪು ಯಾರೇ ಮಾಡಲಿ ಕ್ರಮ ಆಗಲಿ. ಕಾರ್ಯಾಧ್ಯಕ್ಷರಾದ್ರೆ ಎರಡು ಕೊಂಬು ಇರುತ್ತಾ..? ಎಂದು ಪ್ರಶ್ನಿಸಿದ್ದಾರೆ.
ಪೂರ್ಣಾವಧಿ ಸಿಎಂ ವಿಚಾರದಲ್ಲಿ ನಾನೇನು ಹಟಕ್ಕೆ ಬಿದ್ದಿಲ್ಲ .ಅಂತಿಮ ನಿರ್ಧಾರ ಹೈಕಮಾಂಡ್ ಮಾಡುತ್ತೆ.ಹೈಕಮಾಂಡ್ ಹೇಳಿದಂತೆ ಲೋಕಸಭೆ ಚುನಾವಣೆವರೆಗೆ ಅಧ್ಯಕ್ಷ ಇರ್ತಾರೆ ಅನ್ನೋ ಕಾರಣಕ್ಕೆ ಕೇಳಿದ್ದೇವೆ.ಉಪ ಮುಖ್ಯಮಂತ್ರಿ ಸ್ಥಾನ ಹೆಚ್ಚುವರಿ ಕೊಟ್ಟಿದ್ದರೆ ಲೋಕಸಭೆ ಚುನಾವಣೆಯಲ್ಲಿ ಸಹಾಯ ಆಗುತ್ತಿತ್ತು ಈಗ ಕೇಳಲ್ಲ.ಡಿಸಿಎಂ ಸ್ಥಾನ ಅಂದರೆ ತಲೆ ಮೇಲೆ ಹೆಚ್ಚುವರಿ ಕಿರೀಟ ಇರಲ್ಲ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ.