ಮನೆ ಸಿನಿಮಾ ಎತ್ತಿನ ಹೊಳೆ ಯೋಜನೆಯಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ; ಬೆಂಗಳೂರಿನಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್...

ಎತ್ತಿನ ಹೊಳೆ ಯೋಜನೆಯಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ; ಬೆಂಗಳೂರಿನಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಹೇಳಿಕೆ

0

ಬೆಂಗಳೂರು; ಎತ್ತಿನಹೊಳೆ ಯೋಜನೆ ಮೊದಲ ಹಂತಕ್ಕೆ ಇಂದು ಚಾಲನೆ ನೀಡಲಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ  ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ 2014 ರಲ್ಲಿ ಎತ್ತಿನ ಹೊಳೆ ಯೋಜನೆಗೆ ಸಿದ್ದರಾಮಯ್ಯ ಅವರು ನನ್ನ ಅಧ್ಯಕ್ಷತೆಯಲ್ಲೇ ಶಂಕುಸ್ಥಾಪನೆ ಮಾಡಿದ್ದರು.ಇವತ್ತು ಯೋಜನೆಯ ಮೊದಲ ಹಂತದ ಜಾರಿ ಆಗುತ್ತಿದೆ.ಡಿ.ಕೆ. ಶಿವಕುಮಾರ್ ನನಗೆ ಈ ಕಾರ್ಯಕ್ರಮಕ್ಕೆ ವೈಯಕ್ತಿಕವಾಗಿ ಆಹ್ವಾನ ಕೊಟ್ಟಿದ್ದಾರೆ, ನಾನು ಅವರಿಗೆ ಆಭಾರಿ ಆಗಿರುತ್ತೇನೆ.ಈಗ ಎತ್ತಿನ ಹೊಳೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತ 24 ಸಾವಿರ ಕೋಟಿ ಆಗಿದೆ.ಕೋಲಾರ – ಚಿಕ್ಕಬಳ್ಳಾಪುರಕ್ಕೆ ಮೊದಲ ಹಂತದಲ್ಲಿ ನೀರು ತರುವುದು ಸಾಧ್ಯವಾಗಿಲ್ಲ.ಇದಕ್ಕೆ ಇನ್ನೂ ಜಲಾಶಯ ನಿರ್ಮಾಣ ಬಾಕಿ ಇದೆ, ಇನ್ನೂ ಭೂಸ್ವಾಧೀನ ಕೆಲಸ ಬಾಕಿ ಇದೆ.ಮುಂದುವರೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಪ್ರಾಶಸ್ತ್ಯ ರೂಪದಲ್ಲಿ ಕೈಗೊಳ್ಳಲಿ ಅಂತ ನಾನು ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡುತ್ತೇನೆ.ನಮ್ಮ ಜಿಲ್ಲೆಗಳಲ್ಲಿ ಎಸ್‌ಟಿಪಿ ನೀರು ಕುಡಿಯುತ್ತಿದ್ದೇವೆ, .ಎಸ್‌ಟಿಪಿ ನೀರು ಕುಡಿಯುವಂತಹ ಶಾಪಕ್ಕೆ ನಮ್ಮ ಅವಳಿ ಜಿಲ್ಲೆಗಳ ಜನ ಒಳಗಾಗಿದ್ದಾರೆ.ಈ ಶಾಪದಿಂದ ಈ ಸರ್ಕಾರ ನಮ್ಮನ್ನು ವಿಮುಕ್ತಿ ಮಾಡಲಿ.ಎತ್ತಿನ ಹೊಳೆ ಯೋಜನೆಯಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ಡಿ.ಕೆ. ಶಿವಕುಮಾರ್ ಅವರು ಎತ್ತಿನ ಹೊಳೆ ಯೋಜನೆಯ ಎರಡನೇ ಹಂತ ಪೂರ್ಣಗೊಳಿಸಲಿ.ಎರಡನೇ ಹಂತ ಪೂರ್ಣಗೊಳಿಸಿ ಚಿಕ್ಕಬಳ್ಳಾಪುರ-ಕೋಲಾರಕ್ಕೆ ನೀರು ಹರಿಸಲಿ.ಆಗ ನಾನೇ ಡಿ.ಕೆ. ಶಿವಕುಮಾರ್ ಅವರನ್ನು ಬಯಲು ಸೀಮೆ ಭಗೀರಥ ಅಂತ ಘೋಷಣೆ ಮಾಡುತ್ತೇನೆ ಎಂದರು.

ಇನ್ನು ಎತ್ತಿನ ಹೊಳೆ ಯೋಜನೆಯಲ್ಲಿ  ಭ್ರಷ್ಟಾಚಾರ ಆಗಿದೆ ಎಂಬ ಸಿ.ಟಿ. ರವಿ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಡಾ  ಕೆ ಸುಧಾಕರ್ ಎತ್ತಿನ‌ಹೊಳೆ ಯೋಜನೆಯಲ್ಲಿ 24 ಟಿಎಂಸಿ ನೀರು ಸಿಗಲ್ಲ ಎಂಬ ಚರ್ಚೆ ಹತ್ತು ವರ್ಷಗಳಿಂದಲೂ ಇದೆ.ಒಟ್ಟಾರೆ ನಮ್ಮ ಭಾಗದ ಜನಕ್ಕೆ ನೀರು ಸಿಕ್ಕಿದರೆ ಸಾಕು.ಸಿ.ಟಿ. ರವಿ ಅವರು ಮಾಡಿರುವ ಭ್ರಷ್ಟಾಚಾರ ಆರೋಪ ಬಗ್ಗೆ ನನಗೆ ಗೊತ್ತಿಲ್ಲ.ಯಾವುದೇ ಯೋಜನೆಯಲ್ಲಿ ಭ್ರಷ್ಟಾಚಾರ ಆಗಿದೆ ಅಂತ ಪ್ರಶ್ನೆ ಮಾಡಿದರೆ ಅಭಿವೃದ್ಧಿಯೇ ಆಗಲ್ಲ.ಸಿ.ಟಿ. ರವಿ ಅವರು ಹಾಗೆ ಹೇಳಲು ಅವರ ಬಳಿ ಏನಿದೆಯೋ ಮಾಹಿತಿ ಗೊತ್ತಿಲ್ಲ.ಆದರೆ ಡಿ.ಕೆ. ಶಿವಕುಮಾರ್ ಎತ್ತಿನ ಹೊಳೆ ಯೋಜನೆಯನ್ನು ತಾರ್ಕಿಕ ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ, ಅದಕ್ಕೆ ನಾನು ಅವರನ್ನು ಅಭಿನಂದಿಸುತ್ತೇನೆ.ಎಲ್ಲರೂ ಎತ್ತಿನ ಹೊಳೆ ಯೋಜನೆಗೆ ಶ್ರಮಿಸಿದ್ದಾರೆ.ಎಲ್ಲರಿಗೂ ಇದರ ಯಶಸ್ಸಿನ ಕೀರ್ತಿ ಸಿಗಬೇಕು.ಪ್ರಮಾಣ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು ಅಷ್ಟೇ ಎಂದಿದ್ದಾರೆ.

ಎತ್ತಿನಹೊಳೆ ಯೋಜನೆ ಆರಂಭ ಆದಾಗ 8.5 ಸಾವಿರ ಕೋಟಿ, ಈಗ 28 ಸಾವಿರ ಕೋಟಿ.ಅದರ ಮೂಲ ಉದ್ದೇಶ ಈಡೇರಲಿ.ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ.ಡಿ.ಕೆ. ಶಿವಕುಮಾರ್ ನಿನ್ನೆಯೇ ಹೋಗಿ ಹೋಮ‌ ಹವನ ಮಾಡಿದ್ದಾರೆ.ಸಿಎಂ ಕುರ್ಚಿ ಅಲ್ಲಾಡುತ್ತಿರುವ ಸಮಯದಲ್ಲಿ  ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ.ಡಿ.ಕೆ. ಶಿವಕುಮಾರ್ ಕೂಡಾ ಮುಂಚೂಣಿಯಲ್ಲಿ ಇದ್ದಾರೆ.ಕ್ರೆಡಿಟ್ ತೆಗೆದುಕೊಳ್ಳುವುದು ದೊಡ್ಡ ವಿಚಾರ ಅಲ್ಲ.ಆದರೆ ಎತ್ತಿನಹೊಳೆಯ ಯೋಜನೆ ಮೂಲ ಉದ್ದೇಶ ಆಗಬೇಕು.ಆ ಭಾಗದ ಜನಕ್ಕೆ ಅನುಕೂಲ ಆಗಬೇಕು ಎಂದಿದ್ದಾರೆ.