ಬೆಂಗಳೂರು; ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ತುರ್ತು ಸಭೆ ನಡೆಸಿದರು. ಈ ವೇಳೆ ಬೇಲೂರು ಭಾಗದಲ್ಲಿರುವ 3 ಆನೆ ಸೆರೆ ಕಾರ್ಯಾಚರಣೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ರು. ಅದರಂತೆ ಇಂದು ಮೊದಲ ದಿನವೇ ಪುಂಡಾನೆಯೊಂದು ಸೆರೆಯಾಗಿದೆ.
ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತು ಮಾಡಲಾಗಿತ್ತು. ಅದರಂತೆ ಆನೆಗಳನ್ನು ಸೆರೆ ಹಿಡಿದು, ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪನೆಗೆ ಸಚಿವರು ಸೂಚನೆ ನೀಡಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದರು. ಹಾಸನ ವಲಯಕ್ಕೆ 2 ಥರ್ಮಲ್ ಕ್ಯಾಮರಾ ಸಹಿತ ಡ್ರೋನ್ ಖರೀದಿಸಿ ರಾತ್ರಿಯ ವೇಳೆ ಕೂಡ ಆನೆಗಳ ಸಂಚಾರ ನಿಗಾ ಇಡಬೇಕು .ಸ್ಥಳೀಯರಿಗೆ ಸಕಾಲದಲ್ಲಿ ಮಾಹಿತಿ ನೀಡಬೇಕು ಎಂದಿದ್ದರು.ಅಲ್ಲದೇ ಆನೆಗಳ ಸಮಸ್ಯೆ ಹೆಚ್ಚಿರುವ ಪ್ರದೇಶದಲ್ಲಿ ತುರ್ತು ಸ್ಪಂದನೆಗಳಾಗಿ 2 ಹೆಚ್ಚುವರಿ ಜೀಪುಗಳು ಮತ್ತು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದಿದ್ದರು. ಆನೆಗಳ ಸಂಚಾರದ ಮಾಹಿತಿ ಬಂದ ಕೂಡಲೇ ಸ್ಪಂದಿಸುವಂತೆ ಈಶ್ವರ್ ಖಂಡ್ರೆ ಸೂಚನೆ ಕೊಟ್ಟಿದ್ದರು.
ಅದರಂತೆ ಇಂದು ಒಂದು ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಬಳಿಯ ಎಸ್ಟೇಟ್ ನಲ್ಲಿ 4 ಗಂಟೆಗಳ ಕಾರ್ಯಾಚರಣೆ ನಡೆಸಿ ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಬೇಲೂರು ತಾಲ್ಲೂಕಿನ ಬಿಟ್ಟೋಡು ಕ್ಯಾಂಪಿಗೆ ಮಾ.15ರಂದು ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಿಂದ ಏಳು ಸಾಕಾನೆಗಳು ಆಗಮಿಸಿದ್ದವು. ಈ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಭೀಮ, ಕಂಜನ್, ಪ್ರಶಾಂತ, ಹರ್ಷ, ಧನಂಜಯ, ಮಹೇಂದ್ರ ಮತ್ತು ಏಕಲವ್ಯ ಭಾಗವಹಿಸಿದ್ದವು. ಕಾರ್ಯಾಚರಣೆಗೂ ಮುನ್ನ, ಸ್ಥಳೀಯ ಶಾಸಕ ಎಚ್.ಕ. ಸುರೇಶ್, ತಹಸೀಲ್ದಾರ್ ಮಮತಾ, ಮತ್ತು ಅರಣ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ಪೂಜೆ ಸಲ್ಲಿಸಲಾಯಿತು.
ಅರಣ್ಯ ಇಲಾಖೆ ವಿಶೇಷ ಕಾರ್ಯತಂಡ ಪುಂಡಾನೆಗಳನ್ನು ಗುರುತಿಸಲು ಕಾಡಿಗೆ ತೆರಳಿದ್ದು, ಸತತ ನಾಲ್ಕು ಗಂಟೆಯ ನಂತರ ಕೊನೆಗೂ ಪುಂಡಾನೆಯೊಂದನ್ನು ಸೆರೆಯಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವರ್ಷದ ಮೊದಲ ವಾರವೇ ಒರ್ವನನ್ನು ಬಲಿಪಡೆದಿದ್ದ, ಕಾಡಾನೆ, ನಂತರ 2 ತಿಂಗಳ ಅವಧಿಯಲ್ಲಿ ಸಕಲೇಶಪುರ ಮತ್ತು ಬೇಲೂರು ಭಾಗದಲ್ಲಿ ನಾಲ್ವರು ಕಾಡಾನೆ ದಾಳಿಗೆ ಬಲಿಯಾದ ಹಿನ್ನಲೆಯಲ್ಲಿ, ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಮಾನವ ಮತ್ತು ಕಾಡಾನೆ ಸಂಘರ್ಷವನ್ನು ತಡೆಯಲು ಕ್ರಮಗಳನ್ನು ಕೈಗೊಂಡಿದ್ದು, ಇಂದಿನಿಂದ ಕಾಡಾನೆಯನ್ನು ಹಿಡಿಯಲು ಸರ್ಕಾರದ ಅನುಮತಿಯೊಂದಿಗೆ ಅರಣ್ಯ ಇಲಾಖೆ ಮುಂದಾಗಿತ್ತು. ಮೊದಲ ದಿನವೇ ಅರಣ್ಯ ಇಲಾಖೆಯ ಶ್ರಮಕ್ಕೆ ಫಲ ಸಿಕ್ಕಿದ್ದು, ಪುಂಡಾನೆಯೊಂದು ಸೆರೆಯಾಗಿರುವುದು ಸ್ಥಳೀಯರ ಆತಂಕವನ್ನು ಸ್ವಲ್ಪ ಕಡಿಮೆ ಮಾಡಿದೆ.
ತೋಟದ ಸಿಬ್ಬಂದಿಗೆ ಆನೆಗಳ ಸ್ವಭಾವದ ಕುರಿತು ಜಾಗೃತಿ ಮೂಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂರು; ತೋಟದ ಸಿಬ್ಬಂದಿಗೆ ಆನೆಗಳ ಸ್ವಭಾವದ ಕುರಿತು ಜಾಗೃತಿ ಮೂಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ತುರ್ತು ಸಭೆ ನಡೆಸಿದರು.
ಬೇಲೂರು ಭಾಗದ ಜನರಿಗೆ, ತೋಟದ ಕಾರ್ಮಿಕರಿಗೆ ಆನೆಗಳ ಸ್ವಭಾವದ ಕುರಿತು ಜಾಗೃತಿ ಮೂಡಿಸಲು ಸೂಚನೆ ನೀಡಿದರು. ಆನೆ ಬಂದಾಗ ಏನೆಲ್ಲಾ ಮುಂಜಾಗರುಕತಾ ಕ್ರಮ ವಹಿಸಬೇಕು. ಹೇಗೆ ನಡೆದುಕೊಳ್ಳಬೇಕು, ಸಂಜೆ ಮತ್ತು ಬೆಳಗಿನ ವೇಳೆ ಓಡಾಡುವಾಗ ಕೈಗೊಳ್ಳಬೇಕಾದ ಎಚ್ಚರಿಕೆ ಇತ್ಯಾದಿಗಳ ಬಗ್ಗೆ ಜಾಗೃತಿ ಮೂಡಿಸಬೇಕು. ತೋಟದ ಮಾಲೀಕರ ಸಹಕಾರ ಪಡೆದು ಜಾಗೃತಿ ಮೂಡಿಸಲು ಮತ್ತು ಗ್ರಾಮಮಟ್ಟದಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲು ಆದೇಶ ನೀಡಿದ್ದಾರೆ. ಇಟಿಎಫ್ ಸಿಬ್ಬಂದಿಗೆ ಅಗತ್ಯ ಸೌಲಭ್ಯ ಒದಗಿಸಲು ಸೂಚನೆ ನೀಡಿದ್ದಾರೆ.
ಆನೆ ಕಾರ್ಯಪಡೆ ಮತ್ತು ಎಡಿಸಿ ಹೊರಗುತ್ತಿಗೆ ಸಿಬ್ಬಂದಿಗೆ ತಿಂಗಳು ತಿಂಗಳು ವೇತನ, ಆನೆ ಕಾರ್ಯಪಡೆಯ ಸಿಬ್ಬಂದಿಗೆ ಆಹಾರಭತ್ಯೆ ನೀಡಬೇಕು. ಸಮವಸ್ತ್ರ, ಶೂ, ಜಾಕೆಟ್ ಹಾಗೂ ವಿಮಾ ಸೌಲಭ್ಯ ನೀಡುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳುವಂತೆ ಮತ್ತು ಮೊಬೈಲ್ ಸಿಗ್ನಲ್ ದೊರಕದ ಕಡೆಗಳಲ್ಲಿ ಆನೆ ಕಾರ್ಯಪಡೆ ಸಿಬ್ಬಂದಿಗೆ ವಾಕಿ ಟಾಕಿ ನೀಡುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಬೇಲೂರಿನಲ್ಲಿ ಆನೆ ದಾಳಿಗೆ ಮಹಿಳೆ ಸಾವು ಪ್ರಕರಣದ ಬಗ್ಗೆ ಮಾತನಾಡಿದ ಅವರು ದುಃಖಕರ ಸಂಗತಿ, 5 ಬಾರಿ ಹಾಸನ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಆನೆ ದಾಳಿ ತಡೆಯೋಕೆ ಅನೇಕ ಕ್ರಮ ತೆಗೆದುಕೊಂಡಿದ್ದೇವೆ. ಮಾನವ ಹಾನಿ ನೋವಿನ ಸಂಗತಿ, ಸಂತಾಪ ಸೂಚಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮಾನವ ಪ್ರಾಣಿ ಸಂಘರ್ಷ ಹಲವು ವರ್ಷಗಳಿಂದ ಇದೆ.ಆನೆ ಪಡೆ, ಚಿರತೆ ಪಡೆ ಮಾಡಿದ್ದೇನೆ. ಬೇಲೂರಿನಲ್ಲಿ ಹೆಚ್ಚಿನ ಸಮಸ್ಯೆ ಆಗ್ತಿದೆ. ಅರಣ್ಯದಿಂದ ಕೆಲವು ಆನೆಗಳು ಹೊರಗಡೆಯೇ ಇದೆ. ಆನೆಗಳಿಗೆ ಕಾಫೀ ತೋಟವೂ ಅರಣ್ಯದ ರೀತಿಯೇ ಇದೆ. ರಾಜ್ಯಮಟ್ಟದ ಸಮ್ಮೇಳನ ಮಾಡಿದ್ದೇವೆ. ಎಲ್ಲ ತಜ್ಞರನ್ನ ಒಳಗೊಂಡು ಸಮಿತಿ ರಚನೆ ಮಾಡಿದ್ದೇವೆ. ಫೆನ್ಸಿಂಗ್ ವ್ಯವಸ್ಥೆ ಮಾಡಿದ್ದೇವೆ ಮಾಡಿದ್ದೇನೆ.ಆನೆಯ ಚಲನಾವಲಗಳ ಬಗ್ಗೆ ನಿಗಾ ವಹಿಸಲು ಸೂಚನೆ ನೀಡಿದ್ದೇನೆ ಎಂದರು.