ಮನೆ ರಾಜಕೀಯ/ರಾಜ್ಯ ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸಿಗಲಿದೆ ಸಚಿವ ಸ್ಥಾನ

ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸಿಗಲಿದೆ ಸಚಿವ ಸ್ಥಾನ

0

ನವದೆಹಲಿ ; ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರ. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾತುರದಿಂದ  ಕಾಯುತ್ತಿದೆ. ಈಗಾಗಲೇ ವಿಶ್ವದ ಬೇರೆ ಬೇರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗೋದಕ್ಕೆ ನವದೆಹಲಿಗೆ ಆಗಮಿಸಿದ್ದಾರೆ. ಮತ್ತೊಂದೆಡೆ ಈ ಬಾರಿ ಮೋದಿ ಸಂಪುಟ ಸೇರುವವರು ಯಾರೆಲ್ಲಾ ಅನ್ನೋ ಚರ್ಚೆ ಕೂಡ ಜೋರಾಗಿದೆ.

 

ಇದರ ಮಧ್ಯೆ ಕರ್ನಾಟಕಕ್ಕೆ ಶುಭ ಸುದ್ದಿಯೊಂದು ಸಿಕ್ಕಿದೆ. ಕರ್ನಾಟಕದ ಐವರು ಸಂಸದರು ಇಂದು ನರೇಂದ್ರ ಮೋದಿ ಅವರೊಂದಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೋದಿ ಸಂಪುಟ ಸೇರಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮೂವರಿಗೆ ಕ್ಯಾಬಿನೆಟ್ ದರ್ಜೆ ಹಾಗೂ ಇಬ್ಬರಿಗೆ ರಾಜ್ಯ ದರ್ಜೆ ಖಾತೆ ಸಿಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್, ಧಾರವಾಡ ಸಂಸದ ಪ್ರಹ್ಲಾದ್ ಜೋಷಿ, ಮಂಡ್ಯ ಸಂಸದ ಹೆಚ್.ಡಿ. ಕುಮಾರಸ್ವಾಮಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ, ಹಾಗೂ ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ ಮತ್ತು ತುಮಕೂರು ಸಂಸದ ವಿ. ಸೋಮಣ್ಣ ರಾಜ್ಯ ದರ್ಜೆ ಸಚಿವರಾಗಿ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.

ಇನ್ನು ಕರ್ನಾಟಕ ಹೊರತು ಪಡಿಸಿ ಕೇರಳದ ತ್ರಿಶೂರ್ ಸಂಸದ, ನಟ ಸುರೇಶ್ ಗೋಪಿ, ಜಿತಿನ್ ಪ್ರಸಾದ್, ಶಿವರಾಜ್ ಸಿಂಗ್ ಮತ್ತು ಮನೋಹರ್ ಲಾಲ್  ಖಟ್ಟರ್ , ರಕ್ಷಾ ಖಾಡ್ಸೆ, , ಮುರಳೀಧರ್, ಜೈಶಂಕರ್, ಮನ್ಸುಖ್ ಮಾಂಡವಿಯಾ, ಪಿಯೂಷ್ ಗೋಯಲ್, ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ್ ಸೋನೊವಾಲ್, ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್, ಭೂಪೇಂದ್ರ ಯಾದವ್, ಕಿರಣ್ ರಿಜಿಜು, ಎಲ್ ಮುರುಗನ್, ಹರ್ದೀಪ್ ಪುರಿ, ನಿತ್ಯಾನಂದ್ ರಾಯ್, ವೀರೇಂದ್ರ ಕುಮಾರ್, ಮುಂತಾದವರು ಇಂದು ಮೋದಿ ಸಂಪುಟ ಸೇರಲಿದ್ದಾರೆ ಎನ್ನಲಾಗಿದೆ

ಈಗಾಗಲೇ ಇಂದಿನ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗೋದಕ್ಕೆ ಆಹ್ವಾನ ದೊರೆಕಿರುವ ಅನೇಕರು ಗಣ್ಯರು  ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಲು ದೆಹಲಿಯತ್ತ ಮುಖ ಮಾಡಿದ್ದಾರೆ. ಹೀಗಿರುವಾಗಲೇ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಅವರು ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಶುಭಾಶಯಗಳನ್ನು ತಿಳಿಸಿರುವ ಅವರು ಅನಾರೋಗ್ಯ ಕಾರಣದಿಂದಾಗಿ ನನಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.