ಮನೆ Latest News ಕೊಳ್ಳೆಗಾಲದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ; ಕಾಡಿನಂಚಿನಲ್ಲಿ ಕಚ್ಚಾಬಾಂಬ್ ನಿಂದ ವನ್ಯಜೀವಿ ಹಾನಿ ಆಗದಂತೆ...

ಕೊಳ್ಳೆಗಾಲದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ; ಕಾಡಿನಂಚಿನಲ್ಲಿ ಕಚ್ಚಾಬಾಂಬ್ ನಿಂದ ವನ್ಯಜೀವಿ ಹಾನಿ ಆಗದಂತೆ ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

0

ಚಾಮರಾಜನಗರ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೊಳ್ಳೆಗಾಲದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ್ರು.

ಈ ವೇಳೆ ಕಾಡು ಹಂದಿ ಬೇಟೆಗಾಗಿ ಕಾಡಿನಂಚಿನ ಗ್ರಾಮಗಳಲ್ಲಿ ಕಡಿಮೆ ತೀವ್ರತೆಯ ಕಚ್ಚಾ ಬಾಂಬ್ ಇಡಲಾಗುತ್ತಿದೆ. ಇದನ್ನು ಸೇವಿಸಿ ಜಾನುವಾರು ಮತ್ತು ವನ್ಯಜೀವಿಗಳು ಮೃತಪಡುತ್ತಿರುವ ದೂರುಗಳಿವೆ. ಹಾಗಾಗಿ ಈ ಬಗ್ಗೆ ಸೂಕ್ತ ನಿಗಾ ಇಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ರು.

ಕೊಳ್ಳೆಗಾಲದ ಕೀರ್ತಿಚಕ್ರ ಪಿ ಶ್ರೀನಿವಾಸ್ ಅತಿಥಿಗೃಹದಲ್ಲಿಂದು ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಖಂಡ್ರೆ ಕಚ್ಚಾ ಬಾಂಬ್ ತಿಂದು ಹಲವು ಆನೆಯ ಮರಿಗಳೂ ತಿಂದು ಅದು ಬಾಯಿಯಲ್ಲೇ ಸ್ಫೋಟವಾಗಿ, ದವಡೆ ಛಿದ್ರವಾಗಿ, ಹಸಿವಿನಿಂದ ಬಳಲಿ ಸಾಯುತ್ತಿವೆ ಎಂದು ವರದಿಯಾಗಿದೆ . ಆ ರೀತಿ ಬಾಂಬ್ ಇಡುವವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಿ ಎಂದು ನಿರ್ದೇಶನ ನೀಡಿದ್ದಾರೆ.

ಆನೆ ಕಾಡಲ್ಲಿ ಬಿದಿರು ಬೆಳೆಸಲು ಸೂಚನೆ ನೀಡಿದ್ದಾರೆ. ಕಾವೇರಿ ವನ್ಯಜೀವಿ ವಿಭಾಗದಲ್ಲಿ ಸಮೃದ್ಧವಾಗಿ ಬಿದಿರು ಬೆಳೆಸಲಾಗಿದೆ.ಬಿದಿರು ಸ್ವಾಭಾವಿಕ ಮತ್ತು ಜೈವಿಕ ಬ್ಯಾರಿಕೇಡ್ ನಂತೆ ಕಾರ್ಯ ನಿರ್ವಹಿಸುತ್ತದೆ. ಇದು ಆನೆಗಳಿಗೆ ಆಹಾರವೂ ಆಗುತ್ತದೆ.  ಜೊತೆಗೆ ಆನೆಗಳು ನಾಡಿಗೆ ಬಾರದಂತೆ ತಡೆಯುತ್ತದೆ. ಇದನ್ನು ಬೇರೆ ವಲಯದಲ್ಲಿ ಬೆಳೆಸಲು ಕ್ರಮ ಕೈಗೊಳ್ಳಿ ಎಂದು ಸೂಚನೆ ಕೊಟ್ಟಿದ್ದಾರೆ.

ಅಲ್ಲದೇ ಅರಣ್ಯದೊಳಗಿನ ಹೋಂಸ್ಟೇ, ರೆಸಾರ್ಟ್ ತೆರವಿಗೆ ಸೂಚನೆ ಕೊಟ್ಟಿದ್ದಾರೆ. ಅರಣ್ಯದೊಳಗೆ ಮತ್ತು ಸೂಕ್ಷ್ಮ ಪರಿಸರ ವಲಯದಲ್ಲಿ ಹೋಂ ಸ್ಟೇ ಹೆಸರಲ್ಲಿ ಶಾಶ್ವತ ರೆಸಾರ್ಟ್ ಕಟ್ಟಡ ತಲೆ ಎತ್ತುತ್ತಿದೆ ಎಂದು ದೂರುಗಳು ಬಂದಿವೆ. ಇವುಗಳ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಕೊಟ್ಟಿದ್ದಾರೆ. ಶ್ರೀಗಂಧದ ಮರಗಳಿಗೆ ಜಿಯೋ ಟ್ಯಾಗ್ ಮಾಡಿ ಸಂರಕ್ಷಿಸುವಂತೆಯೂ ನಿರ್ದೇಶನ  ಕೊಟ್ಟಿದ್ದಾರೆ. ಸಭೆಯಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಎಪಿಸಿಸಿಎಫ್ ಕುಮಾರ್ ಪುಷ್ಕರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಮೊದಲಾದವರು ಭಾಗಿಯಾಗಿದ್ದರು.

ಪಹಲ್ಗಾಮ್ ಭಯೋತ್ಪಾದಕರ ದಾಳಿ ಭದ್ರತಾ ವೈಫಲ್ಯ ದಿಂದ ಆಗಿದೆ; ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿಕೆ

ಚಾಮರಾಜನಗರ; ಪಹಲ್ಗಾಮ್ ಭಯೋತ್ಪಾದಕರ ದಾಳಿ ಭದ್ರತಾ ವೈಫಲ್ಯ ದಿಂದ ಆಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವರು ಪಹಲ್ಗಾಮ್ ಭಯೋತ್ಪಾದಕರ ದಾಳಿ ಭದ್ರತಾ ವೈಫಲ್ಯ ದಿಂದ ಆಗಿದೆ. ಅಲ್ಲಿನ ವಿಶಾಲವಾದ ಪ್ರದೇಶದಲ್ಲಿ ಭದ್ರತೆ ಇರಬೇಕಿತ್ತು. ಅದೇನೇ ಇದ್ದರೂ ನಾವು ಈಗ ಭಯೋತ್ಪಾದಕರನ್ನು ಒಟ್ಟಾಗಿ ಸೇರಿ ಮಟ್ಟ ಹಾಕಬೇಕು ಎಂದಿದ್ದಾರೆ.

ಇನ್ನು ಸಂಪುಟ ಸಭೆ ಚಾಮರಾಜನಗರದಲ್ಲಿ ನಡೆದಿರುವ ಬಗ್ಗೆ ಮಾತನಾಡಿದ ಅವರು ಕ್ಯಾಬಿನೆಟ್ ಸಭೆಗಳು ಬೇರೆ ಬೇರೆ ಸಂದರ್ಭದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ ನಡೆದಿವೆ. ಹಿಂದೆ ಜೆ ಎಚ್ ಪಟೇಲರ ಕಾಲದಲ್ಲಿ ಹುಬ್ಬಳ್ಳಿಯಲ್ಲಿ ನಡೆದಿತ್ತು. ನಾವು ಎರಡು ತಿಂಗಳ ಹಿಂದೆ ಕಲ್ಬುರ್ಗಿ ಯಲ್ಲಿ ಮಾಡಿದ್ವಿ. ನಾವು ವೆಂಕಟೇಶ್ ನಮ್ಮೆಲ್ಲ ಜಿಲ್ಲೆಯ ಶಾಸಕರು ಕ್ಯಾಬಿನೆಟ್ ನಡೆಸಬೇಕೆಂದು ಸಿಎಂಗೆ ಕೇಳಿದ್ವಿ. ಹಿಂದೆ ಎಸ್ ಎಂ ಕೃಷ್ಣ ಇದ್ದಾಗ ಬಿ ಆರ್ ಹಿಲ್ಸ್ ನಲ್ಲಿ ಕ್ಯಾಬಿನೆಟ್ ಸಬ್ ಕಮಿಟಿ ನಡೆದಿತ್ತು.ಕ್ಯಾಬಿನೆಟ್ ನಡೆಯೋದು ರಾಜ್ಯದ ಎಲ್ಲಾ ಸಮಸ್ಯೆ ಗಳ ಬಗ್ಗೆ ತೀರ್ಮಾನ ಮಾಡೋದು. ಜನರ ಸಮಸ್ಯೆಗಳೇನಿದೆ ಅದೆಲ್ಲವೂ ಗಮನದಲ್ಲಿಟ್ಟುಕೊಂಡು ಕ್ಯಾಬಿನೆಟ್ ನಲ್ಲಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.