ಮನೆ Latest News ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಭಾಗಿಯಾಗಿದೆ ಎಂದು ದಾಖಲೆ ತೋರಿಸಿದ ಹೆಚ್...

ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಭಾಗಿಯಾಗಿದೆ ಎಂದು ದಾಖಲೆ ತೋರಿಸಿದ ಹೆಚ್ ಡಿ ಕುಮಾರಸ್ವಾಮಿ

0

ಬೆಂಗಳೂರು: |ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಭಾಗಿಯಾಗಿದೆ ಎಂದು ದಾಖಲೆ ತೋರಿಸಿದ ಹೆಚ್ ಡಿ ಕುಮಾರಸ್ವಾಮಿ ದಾಖಲೆ ಸಮೇತ ಸಾಬೀತು ಮಾಡಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಹೆಚ್ಡಿಕೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವ ಮೂಡಾ ಪ್ರಸ್ತಾವನೆಯನ್ನು ನಿರಾಕರಿಸಿ ಬದಲಿ ಜಮೀನನ್ನೇ ನೀಡುವಂತೆ ಒತ್ತಾಯ ಮಾಡಿರುವ ದಾಖಲೆಯನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಯನ್ನು ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿದ್ದಾರೆ.

“50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ!!” ಹಾಗೂ “ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು  ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ.” ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಸೂಪರ್ ಸಿಎಂ ಅವರೇ ‘ಒತ್ತಾಯಿಸಿರುತ್ತಾರೆ!!!’ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಅಥವಾ ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಅವರು ಸಿಎಂಗೆ ತಿರುಗೇಟು ನೀಡಿದ್ದಾರೆ.

ಸಹಿ ನನ್ನದಲ್ಲ, ಯಾರೋ ಪೋರ್ಜರಿ ಮಾಡಿದ್ದಾರೆ ಎಂದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು; 550 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಿಯ್ಯಾಕ್ಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರು “ಸಹಿ ನನ್ನದಲ್ಲ, ಯಾರೋ ಪೋರ್ಜರಿ ಮಾಡಿದ್ದಾರೆ ಎಂದಿದ್ದರು. ಇದೀಗ ಕುಮಾರಸ್ವಾಮಿ ಅವರ  ಹೇಳಿಕೆ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ಕೊಟ್ಟಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ ಅವರು ನೋಂದಣಿಯೇ ಆಗದ ಕಂಪನಿಗೆ 550 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿ, ಈಗ “ಸಹಿ ನನ್ನದಲ್ಲ, ಯಾರೋ ಪೋರ್ಜರಿ ಮಾಡಿದ್ದಾರೆ” ಎಂದು ಕಣ್ಣೀರು ಸುರಿಸುತ್ತಿರುವ ಕೇಂದ್ರ ಸಚಿವ ಹೆಚ್ .ಡಿ.ಕುಮಾರಸ್ವಾಮಿಯವರೇ, ನಿಮ್ಮ ಬ್ರಹ್ಮಾಂಡ ಭ್ರಷ್ಟಾಚಾರದ ಪುರಾಣದ ಮೊದಲ ಅಧ್ಯಾಯ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಮುಂದೆ ಇನ್ನೇನೆಲ್ಲಾ ಬಹಿರಂಗವಾಗಲಿವೆಯೋ!!?? ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ನನ್ನ ಸಹಿ, ಟಿಪ್ಪಣಿ ಯಾವುದೂ ಇಲ್ಲ, ನನ್ನ ಅಧಿಕಾರವಧಿಯಲ್ಲಿ ನಡೆದದ್ದೇ ಅಲ್ಲ – ಹೀಗಿದ್ದರೂ ನನ್ನ ರಾಜೀನಾಮೆ ಕೇಳುತ್ತಿರುವ ಕುಮಾರಸ್ವಾಮಿಯವರೇ? ನಿಮ್ಮ ಊಟದೆಲೆಯಲ್ಲಿ ಆನೆ ಸತ್ತು ಬಿದ್ದಿದೆ ನೋಡಿ. ನ್ಯಾ.ಎನ್.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವುದೊಂದೇ ಬಾಕಿ. ಯಾರನ್ನು ಕಾಯುತ್ತಾ ಕೂತಿದ್ದೀರಿ? ನರೇಂದ್ರ ಮೋದಿಯವರು ಬಂದು ರಕ್ಷಿಸುತ್ತಾರೆಂದೇ? ಸ್ವಂತ ಪಕ್ಷದ ಮುಖ್ಯಮಂತ್ರಿಯನ್ನೇ ಜೈಲಿಗೆ ಕಳಿಸಿದ್ದ ಪಕ್ಷ ನಿಮ್ಮ ರಕ್ಷಣೆಗೆ ಬರುತ್ತಾರೆ ಎಂದು ಅಂದುಕೊಡಿದ್ದೀರಾ? ಯಾರೋ ಹೇಳಿದ ಕಾಗಕ್ಕ ಗುಬ್ಬಕ್ಕನ ಕಥೆ ಕೇಳಿ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರೇ, ನಿಮ್ಮ ಕೈಯಲ್ಲಿರುವ ಹೆಚ್.ಡಿ.ಕುಮಾರಸ್ವಾಮಿಯವರ ಗಣಿ ಹಗರಣದ ದಾಖಲೆ ಪತ್ರಗಳು ಈಗ ಸಾರ್ವಜನಿಕರ ಮುಂದೆ ಇದೆ. ಇವುಗಳ ಒಂದು ಪ್ರತಿಯನ್ನು ನಿಮ್ಮ ಒಡೆಯರಿಗೆ ಕಳಿಸಿಕೊಡಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದಂತೆ ಕೈಕಟ್ಟಿಹಾಕಿರುವ ಹಗ್ಗ ಬಿಚ್ಚಿಕೊಳ್ಳಬಹುದು. ಎಂದು ತಿರುಗೇಟು ಕೊಟ್ಟಿದ್ದಾರೆ.

ಅಗತ್ಯ ಬಿದ್ರೆ ಕುಮಾರಸ್ವಾಮಿ ಬಂಧನ ಮಾಡ್ತೀವಿ ಎಂದ ಸಿಎಂ ಹೇಳಿಕೆ;ಸಿಎಂಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ

ಅಗತ್ಯ ಬಿದ್ರೆ ಕುಮಾರಸ್ವಾಮಿ ಬಂಧನ ಮಾಡ್ತೀವಿ ಎಂದ ಸಿಎಂ ಹೇಳಿಕೆ ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ನನ್ನ ಬಂಧನ ಮಾಡೋಕೆ ನೂರು ಸಿದ್ದರಾಮಯ್ಯ ಬರಬೇಕು ಎಂದಿದ್ದಾರೆ. ಹೆಚ್ಡಿಕೆಕುಮಾರಸ್ವಾಮಿಗೆ ಭಯ ಶುರುವಾಗಿದೆ ಅನ್ನೋ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಕುಮಾರಸ್ವಾಮಿ ನನಗೆ ಭಯ ಶುರುವಾಗಿದೆಯಾ.ನನ್ನ ನೋಡಿದ್ರೆ ಹಾಗೆ ಅನಿಸುತ್ತಾ.ಅವರು ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ.ಜನ ನೋಡಿದ್ದಾರೆ ಇವರು ಏನು ಮಾಡಿದ್ರು ಅಂತ.ಮೈಸೂರಿನ ದಾಖಲೆ ಇದೆಯಲ್ಲ.ಮುಡಾ ಆಸ್ತಿಯನ್ನ ನನ್ನ ಆಸ್ತಿ ಅಂತ ಹೇಳ್ತಿದ್ದಾರೆ.ಇಂತ ಭಂಡತನದಲ್ಲಿ ಯಾವ ಸಿಎಂ ಕೂಡ ನಡೆದುಕೊಂಡಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪರಸ್ಪರ ಟೀಕೆಗಳು ಶುರುವಾಗಿವೆ.ಈಗ ನನ್ನ ಹೆಸರು ತರಲಾಗಿದೆ.ರಾಜ್ಯಪಾಲರಿಗೆ ನನ್ನ ಮೇಲೆ ಪ್ರಾಸಿಕ್ಯೂಷನ್ ಅನುಮತಿ ಕೊರಲಾಗಿದೆ.ಬೆಳಗ್ಗೆ ಒಂದು ಸ್ಟೋರಿ ನೊಡ್ದೆ ಹತ್ತು ಗಂಟೆ v/s ಹತ್ತು ವರ್ಷ ಅನ್ನೋ ಸ್ಟೋರಿ ಗಮನಿಸಿದೆ.ಕಾಂಗ್ರೆಸ್ ಸರ್ಕಾರ ಬಂದ ಮೊದಲ ದಿನದಿಂದ ವರ್ಗಾವಣೆ ದಂಧೆ ಬಗ್ಗೆ ನಾನು ವಾಗ್ದಾಳಿ ಮಾಡಿದೆ.ಇದು ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟಾಯಿತು.ಇದರಿಂದ ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಅನುಮತಿ ಕೊಡಿ ಎಂದು‌ ಹೋಗಿದ್ದಾರೆ ಎಂದಿದ್ದಾರೆ.

ಇದ ವೇಳೆ ಮಾತನಾಡಿದ ಅವರು ೨೦೦೮ ರಲ್ಲಿಸಿಎಂ ಆದ ಎರಡೆ ತಿಂಗಳಲ್ಲಿ ಗಣಿ‌ಮಾಲೀಕರಿಂದ ೧೫೦ ಕೊಟಿ ಹಣ ಸಂಗ್ರಹ ಮಾಡಿದ್ದೇನೆ.ಬೆಂಬಲ ಕೊಟ್ಟ ಮೊತ್ತೊಬ್ಬ ಶಾಸಕರು ಆರೋಪ ಮಾಡಿದ್ರು.ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ದೊಡ್ಡದು ಮಟ್ಟದಲ್ಲಿ ನನ್ನ ಸಿಲುಕಿಸಬೇಕಂತ ಹೊರಟಿದ್ರು.ಶಾಸಕರ ರಕ್ಷಣೆ ಪಡೆದು ನನ್ನ ಮೇಲೆ ಇದ್ದ ಅಪಾದನೆಯನ್ನ ಏಕಾಂಗಿಯಾಗಿ ಹೋರಾಟ ನಡೆಸಲು ಸಿದ್ದನಿದ್ದೇನೆ ಎಂದು ಹೇಳಿದ್ದೆ.ಚರ್ಚೆಯು ನಡೆಯಿತು ಅದಕ್ಕೆ ದೊಡ್ಡ ಇತಿಹಾಸ ಇದೆ.ನ್ಯಾಯಾಂಗ ತನಿಖೆಗೆ ಯಾರು ಅರ್ಜಿ ಹಾಕಲಿಲ್ಲ. ವಿರೋಧ ಪಕ್ಷದವರು ಹಾಕಲಿಲ್ಲಾ ನಮ್ಮ ಬೆಂಬಲಿತ ಶಾಸಕರು ಹಾಕಲಿಲ್ಲಾ.ಲೋಕಯುಕ್ತ ಎಲ್ಲಾ ರೀತಿಯ ತನಿಖೆ ಆದೇಶ ಆಯ್ತು.ಆದೇಶ ಮಾಡಿದ್ದು ನಾನೆ.ಗಣಿ ಅಕ್ರಮಗಳು ಪ್ರಕರಣ ಶುರುವಾಯ್ತು.೨೦೧೦/೧೨ ರಲ್ಲಿ ಸರ್ಕಾರಕ್ಕೆ ಎರಡು ಮೂರು ಟ್ರಂಕ್ ಗಳಲ್ಲಿ ತಂದು ವರದಿ ಕೊಟ್ರು.ಮೂರು ಜನ ಮಾಜಿ‌ಸಿಎಂ ಗಳ ಬಗ್ಗೆ ಕೆಲವು ವಿಷಯಗಳನ್ನ ಪ್ರಸ್ತಾಪ ಮಾಡಿದ್ದಾರೆ.ಎಸ್ ಎಂ ಕೃಷ್ಣ, ಧರ್ಮಸಿಂಗ್ ನನ್ನದು ಸೇರಿ ಚಾಪ್ಟರ್ ಗಳಿದ್ದೇವೆ.ಜಂತಕಲ್ ಮತ್ತು ಸಾಯಿ ವೆಂಕಟೇಶ್ವರ ಬಗ್ಗೆ ಯುವಿ ಸಿಂಗ್ ಕೊಟ್ಟಿರುವ ವರದಿ.ಎರಡು ಪ್ರಕರಣಗಳಲ್ಲಿ ಯಾವುದೇ ಆಕ್ಷನ್ ಗೆ ರೆಕೆಂಮಡ್ ಮಾಡೊಲ್ಲಾ ಮುಂದಿನದ್ದ ಸರ್ಕಾರಕ್ಕ ಬಿಟ್ಟಿದ್ದು ಅಂತಿದೆ.

ಅವತ್ತಿನ ಸರ್ಕಾರದ ಮೇಲೆ ದಾಖಲೆಗಳ ಸಮೇತ ಜನತೆ ಮುಂದೆ ಇಟ್ಟೆ ಜಂತಕಲ್ ಸಾಯಿ ಪ್ರಕರಣದ ತನಿಖೆ ಆಗಬೇಕಂತ ಮಾಡಿದ್ರು.ಅಬ್ರಾಹಂ ಅವರ ಬ್ಯಾಕ್ ಗ್ರೌಂಡ್ ಬಗ್ಗೆ ಅವರ ವಕೀಲರು ಪ್ರಶ್ನೆ ಮಾಡಿದ್ದಾರೆ.ಸಿದ್ದರಾಮಯ್ಯ ಅವರೇ ನೀವು ೨೦೧೩ ರಲ್ಲಿ ಸಿಎಂ ಆದಾಗ ಎಸ್ ಐ ಟಿ ಮೂಲಕ ಯಾವ ಮುಖಾಂತರ ಅರ್ಜಿ ಹಾಕಿದ್ರಿ.ಸುಪ್ರೀಂ ಕೋರ್ಟ್ ನಲ್ಲಿ ಅಬ್ರಾಹಂ ಅರ್ಜಿ ಹಾಕಿದ್ರು ಅದಕ್ಕೆ ನೀವು ತನಿಖೆಗೆ ಹೋಗಿದ್ದು ತಾನೆ. ಆಗ ನಿಮಗೆ ಹಿರೋ ಆಗಿದ್ರು.೨೦೧೧ ಕೊರ್ಟ್ ಗೆ ಹೋಗ್ತಾರೆ ಅಡಿಷನಲ್ ಸಿಟಿ ಸಿವಿಲ್ ಕೊರ್ಟ್ ನಲ್ಲಿ ಖಾಸಗಿ ದೂರು ಫೈಲ್ ಮಾಡ್ತಾರೆ ಎಂದಿದ್ದಾರೆ.

ಎಸ್ ಎಮ್ ಕೃಷ್ಣ ಧರ್ಮಸಿಂಗ್ ಹಾಗೂ ನನ್ನ ಮೇಲೆ ಲೋಕಾಯುಕ್ತ ಮುಂದೆನೆ ಅರ್ಜಿ ಹಾಕೊಳಿ ಅಂದ್ರು.೨೦೧೧ ಕ್ಕೆ ಪ್ರಿವೆಂಷನ್ ಆಫ್ ಕರ್ಪಷನ್ ಆಕ್ಟ್ ನಲ್ಲಿ ಮೂರು ಜನರು ಸೇರಿ ೧೧ ಜನರ ಮೇಲೆ ತನಿಖೆ ಆಗಬೇಕಂತ ಲೋಕಯುಕ್ತ ಕೊರ್ಟ್ ಗೆ ಹೋದ್ರು2011 ರಲ್ಲಿ ನಾನು ಹೈ ಕೊರ್ಟ್ ಗೆ ಹೋದೆ . ಜಂತಕಲ್ ರದ್ದು ಮಾಡಿ ಸಾಯಿ ವೆಂಕಟೇಶ್ವರ ತನಿಖೆ ಮುಂದುವರೆಸಿ ಅಂತ ಕೊರ್ಟ್ ಆದೇಶ ಆಯ್ತು.ಎಸ್ ಎಂ ಕೃಷ್ಣ ಧರ್ಮಸಿಂಗ್ ಅವರು ಸುಪ್ರೀಂ ಕೊರ್ಟ್ ಗೆ ಸ್ಕ್ವಾಷ್ ಗೆ ಹೋದ್ರು.ಎಸ್ ಎಮ್ ಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ರಿಲೀಫ್ ಕೊಟ್ಟಿದ್ದಾರೆ.ಸುಪ್ರೀಂ ಕೊರ್ಟ್ ಮುಂದೆ ನಾನು ೨೦೧೪ ಕ್ಕೆ ಸಾಯಿ ವೆಂಕಟೇಶ್ವರ ಪ್ರಕರಣಕ್ಕೆ  ಸುಪ್ರೀಂ ಕೊರ್ಟ್ ಗೆ ಹೋದೆ.ಗ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ರು.ಹೈ ಕೋರ್ಟ್ ಆದೇಶದ ಬಗ್ಗೆ ರಾಜ್ಯ ಸರ್ಕಾರ ಎಸ್ ಐಟಿ ತನಿಖೆ ಅವಕಾಶ ಕೊಡಿ ಅಂತ ಹೋದ್ರು.೨೦೧೭ಕ್ಕೆ  ಎಸ್ ಐ ಟಿ ಬಂತು.ಏನಾದ್ರು ಮಾಡಿ ಕುಮಾರಸ್ವಾಮಿ ನ ಜೈಲಿಗೆ ಕಳಿಸಲೇಬೆಕಂತಾ,ನನ್ನ ಮೇಲೆ ಎಸ್ ಐ ಟಿ ರಚನೆ ಮಾಡಿ ತನಿಖೆಗೆ ಆದೇಶ ಮಾಡಿದ್ರು ಎಂದಿದ್ದಾರೆ.