ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಅಲ್ಲಿ ಅಕ್ಟೋಬರ್ 14 ರಂದು ಕಿಚ್ಚ ಸುದೀಪ್ ಅವರ ಜಾಮೀನು ಅರ್ಜಿ ವಜಾಗೊಂಡಿತ್ತು.
ಅದರ ಬೆನ್ನಲ್ಲೇ ಅಕ್ಟೋಬರ್ 15 ರಂದು ದರ್ಶನ್ ಪರ ವಕೀಲರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇಂದು ಆ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಇದ್ದ ನ್ಯಾಯಪೀಠವು ತೆಗೆದುಕೊಂಡಿತು. ಬಳಿಕ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿತು. ಅಕ್ಟೋಬರ್ 28 ರಂದು ಏನಾಗುತ್ತೆ ಅಂತಾ ಡಿ ಬಾಸ್ ಇದೀಗ ಕಾಯುವಂತಾಗಿದೆ.
ಜಾಮೀನು ನಿರೀಕ್ಷೆಯಲ್ಲಿದ್ದ ಡಿ ಬಾಸ್ ಗೆ ಭಾರೀ ನಿರಾಸೆ; ದರ್ಶನ್ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್
ಬೆಂಗಳೂರು;ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ತೀರ್ಪು ಇಂದು ಹೊರ ಬಿದ್ದಿದೆ. ದರ್ಶನ್ ಅವರ ಜಾಮೀನು ಅರ್ಜಿಗೆ ಸಂಬಂಧಪಟ್ಟಂತೆ ಪರ ವಿರೋಧದ ವಾದ ಆಲಿಸಿದ ಕೋರ್ಟ್ ಇಂದು ತೀರ್ಪು ನೀಡಿದೆ. ದರ್ಶನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ತೀರ್ಪು ನೀಡಿದ್ದು, ಜಾಮೀನು ಸಿಕ್ಕೇ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಭಾರೀ ನಿರಾಸೆಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಸದ್ಯ ಬಳ್ಳಾರಿ ಜೈಲಿನಲ್ಲಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಟ್ಟಂತೆ ಸರ್ಕಾರದ ಪರವಾದ ವಕೀಲರಾಗಿ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರವಾಗಿ ಹಿರಿಯ ಕ್ರಿಮಿನಲ್ ಲಾಯರ್ ಸಿ.ನಾಗೇಶ್ ವಾದ ಮಂಡಿಸಿದ್ದರು. ಪದೇ ಪದೇ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿಕೆಯಾಗುತ್ತಲೇ ಇತ್ತು. ಅಲ್ಲದೇ ಕೋರ್ಟ್ ಇಂದಿಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದರಿಸಿತ್ತು. ಅದರಂತೆ ಇಂದು ತೀರ್ಪು ಹೊರ ಬಿದ್ದಿದೆ. ದರ್ಶನ್ ಅವರ ಜಾಮೀನು ಅರ್ಜಿ ವಜಾಗೊಂಡಿದೆ. ಹಾಗಾಗಿ ಇಂದು ಜಾಮು ಸಿಕ್ಕೇ ಸಿಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ಡಿ ಬಾಸ್ ಗೆ ನಿರಾಸೆಯಾಗಿದೆ. ಸದ್ಯಕ್ಕಂತೂ ಜೈಲೇ ಗತಿ ಅನ್ನೋ ಹಾಗಾಗಿದೆ.
ಏನಿದು ಪ್ರಕರಣ?
ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ದರ್ಶನ್ ಸೇರಿದಂತೆ 17 ಆರೋಪಿಗಳು ಕೊಲೆ ಮಾಡಿದ್ದರು. ರೇಣುಕಾ ಸ್ವಾಮಿ ಪವಿತ್ರಗೌಡಗೆ ಫೋಟೋ ಕಳುಹಿಸಿ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿಸಿದ್ದಾರೆ ದೆ. ದರ್ಶನ್ ಅವರ ಆಪ್ತ ವಿನಯ್ ಅವರ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಕಾರ್ ಶೆಡ್ ಗೆ ಕರೆಸಿ ಹಲ್ಲೆ ಮಾಡಲಾಗಿತ್ತು. ದರ್ಶನ್ ಕೂಡ ಹಲ್ಲೆ ಮಾಡಿದ್ದು ಗಂಭೀರ ಗಾಯಗೊಂಡ ರೇಣುಕಾಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ಮೃತದೇಹವನ್ನು ಸುಮನಹಳ್ಳಿ ಬ್ರಿಡ್ಜ್ ಬಳಿ ಎಸೆಯಲಾಗಿತ್ತು.
ಪ್ರಕರಣ ಆರೋಪಿಯಾಗಿರುವ ಚಲನಚಿತ್ರ ನಟ ದರ್ಶನ್ ತೂಗುದೀಪ ಅವರನ್ನು ಬೆಂಗಳೂರು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು ಮೈಸೂರಿನ ಕುವೆಂಪು ನಗರದ ಗೋಲ್ಡ್ ಜಿಮ್ ನಲ್ಲಿ ವರ್ಕೌಟ್ ಮುಗಿಸಿ ಹೊರ ಬಂದಿದ್ದ ದರ್ಶನ್ ರನ್ನು ನೇರವಾಗಿ ಪೊಲೀಸರು ಅರೆಸ್ಟ್ ಮಾಡಿದ್ದರು.ಅಂದು ಬೆಳಗ್ಗೆ 6.30 ಕ್ಕೆ ಜಿಮ್ಗೆ ತೆರಳಿದ್ದ ದರ್ಶನ್, 8.30ರ ವೇಳೆಗೆ ವರ್ಕೌಟ್ ಮುಗಿಸಿ ತಾವು ಉಳಿದುಕೊಂಡಿದ್ದ ಹೋಟೆಲ್ ಬಳಿ ಬರುತ್ತಿದ್ದಂತೆಯೇ ಪೊಲೀಸರು ಬಂಧಿಸಿದ್ದರು.
ಮೈಸೂರಿನ ಲಲಿತ್ ಮಹಲ್ ಹೋಟೆಲ್ ನಲ್ಲಿ ದರ್ಶನ್ ಅಭಿನಯದ ಡೇವಿಲ್ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರತಂಡದ ವತಿಯಿಂದಲೇ ದರ್ಶನ್ ಗೆ ರ್ಯಾಡಿಸನ್ ಬ್ಲ್ಯೂ ಹೋಟೆಲ್ ನಲ್ಲಿ ಕೊಠಡಿ ಕಾಯ್ದಿರಿಸಲಾಗಿತ್ತು. ಜೂನ್ 9 ರಿಂದಲೇ ದರ್ಶನ್ ಹೋಟೆಲ್ನಲ್ಲಿ ಉಳಿದುಕೊಂಡಿದ್ದರು.ತಮ್ಮ ಕೆಎ 01 ಎಂವೈ 7999 ನೋಂದಣಿ ಸಂಖ್ಯೆಯ ರೇಂಜ್ ರೋವರ್ ಡಿಫೆಂಡರ್ ಕಾರಿನಲ್ಲಿ ರ್ಯಾಡಿಸನ್ ಬ್ಲ್ಯೂ ಹೋಟೆಲ್ ಗೆ ದರ್ಶನ್ ಬಂದಿದ್ದು, ಕಾರು ಇನ್ನೂ ಹೋಟೆಲ್ ಪ್ರವೇಶದ್ವಾರದಲ್ಲಿಯೇ ನಿಲ್ಲಿಸಲ್ಪಟ್ಟಿತ್ತು. ಅರೆಸ್ಟ್ ಮಾಡಿದ ಬಳಿಕ ಪೊಲೀಸರು ತಮ್ಮ ಜೀಪ್ ನಲ್ಲೇ ದರ್ಶನ್ ರನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆದೊಯ್ದಿದ್ದರು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಹಾಗಾಗಿ ಜೂನ್ 22 ರಿಂದ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು..ಆದರೆ ಅಲ್ಲಿ ದರ್ಶನ್ ರಾಜಾತಿಥ್ಯ ನೀಡಲಾಗುತ್ತಿದೆ ಅನ್ನೋ ವಿಚಾರ ಬಯಲಾಗುತ್ತಿದ್ದಂತೆ ಅವರನ್ನು ಆಗಸ್ಟ್ 29 ರಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅದರಂತೆ ಡಿ ಬಾಸ್ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ಪೊಲೀಸರು 3991 ಪುಟಗಳ ಚಾರ್ಜ್ ಶೀಟ್ ನ್ನು ಕೋರ್ಟ್ ಗೆ ಸಲ್ಲಿಕೆ ಮಾಡಿದ್ದರು. ಚಾರ್ಜ್ ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ದರ್ಶನ್ ಅವರ ಪರವಾಗಿ ಅವರ ವಕೀಲರು ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಪದೇ ಪದೇ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿ ಇಂದಿಗೆ ತೀರ್ಪು ಕಾಯ್ದಿರಿಸಲಾಗಿತ್ತು. ಇಂದು ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ 57ನೇ ಸಿಸಿಹೆಚ್ ಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಸದ್ಯಕ್ಕೆ ದರ್ಶನ್ ಗೆ ಜೈಲೇ ಗತಿ ಎಂಬಂತಾಗಿದೆ.