ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಇದೇ ಜುಲೈ 22 ಕ್ಕೆ ಒಂದು ತಿಂಗಳಾಗುತ್ತೆ. ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದ ನಟ ದರ್ಶನ್ ಸರಿ ನಿದ್ದೆ ಮಾಡ್ತಿಲ್ಲ. ಊಟ ಮಾಡ್ತಿಲ್ಲ. ನಟ ದರ್ಶನ್ ಅವರು ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ.
ಜೈಲು ಸೇರಿದಾಗಿನಿಂದ ನಟ ದರ್ಶನ್ ಮೌನಕ್ಕೆ ಶರಣಾಗಿದ್ದಾರೆ.ಯಾರ ಜೊತೆಯೂ ಮಾತನಾಡದೇ ತಮ್ಮ ಪಾಡಿಗೆ ಸಮಯ ಕಳೆಯುತ್ತಿದ್ದಾರೆ.ಬೇಜಾರಾದರೆ ಹಿಂದಿ ಸಿನಿಮಾ, ಸ್ಫೋರ್ಟ್ಸ್ ಚಾನೆಲ್ ಗಳನ್ನು ನೋಡುತ್ತಾ ಸಮಯ ಕಳೆಯುತ್ತಿದ್ದಾರೆ. ಇದರ ನಡುವೆ ದರ್ಶನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಜೈಲಿನ ಊಟ ದರ್ಶನ್ ಅವರಿಗೆ ಸೇರುತ್ತಿಲ್ಲ. ಭೇದಿಯಿಂದ ಬಳಲುತ್ತಿದ್ದಾರೆ. ಅಲ್ಲದೇ ಮಲಗಲು ಹಾಸಿಗೆ ಇಲ್ಲದ ಕಾರಣ ನೆಲದಲ್ಲೇ ಮಲಗುತ್ತಿದ್ದು ನಿದ್ದೆಯಿಲ್ಲದೇ ಬಳಲಿದ್ದಾರೆ ಎನ್ನಲಾಗಿದೆ. ಹೀಗಾಗಿ ನಟ ದರ್ಶನ್ ಪರವಾಗಿ ಅವರ ವಕೀಲರು ದರ್ಶನ್ ಗೆ ಮನೆಯೂಟ, ಮಲಗಲು ಹಾಸಿಗೆ ಹಾಗೂ ಸಮಯ ಕಳೆಯಲು ಓದಲು ಪುಸ್ತಕ ಒದಗಿಸುವಂತೆ ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.
ಈ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಆರ್ ಕೃಷ್ಣಕಮಾರ್ ಪೀಠ ವಿಚಾರಣೆ ನಡೆಸಿತು.ಈ ಸಂದರ್ಭದಲ್ಲಿ ಇದೇ ವಾದ ಮಂಡಿಸಿದ ದರ್ಶನ್ ಪರ ವಕೀಲರು ಜೈಲು ನಿಯಮಾವಳಿಗಳಲ್ಲಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ದರ್ಶನ್ಗೆ ಮನೆ ಊಟದ ಅವಕಾಶ ನೀಡಿಲ್ಲ ಎಂದರು. ಆಗ ನ್ಯಾಯಾಧೀಶರು ಈ ಪ್ರಕರಣವನ್ನು ಕೂಡ ಇತರ ಪ್ರಕರಣಗಳಂತೆ ಪರಿಗಣಿಸಲಾಗುವುದು ಎಂದು ಹೇಳಿ ನಟ ದರ್ಶನ್ ಅವರ ರಿಟ್ ಅರ್ಜಿಯನ್ನು ಜುಲೈ 18 ಕ್ಕೆ ಮುಂದೂಡಿದ್ದರು.
ಅದರಂತೆ ನಾಳೆ ಡಿ ಬಾಸ್ ಅವರ ರಿಟ್ ಅರ್ಜಿಯ ವಿಚಾರಣೆ ನಡೆಯಲಿದೆ. ದರ್ಶನ್ ಅವರಿಗೆ ಮನೆಯೂಟಕ್ಕೆ ಕೋರ್ಟ್ ಅವಕಾಶ ಕೊಡುತ್ತಾ ಅನ್ನೋದನ್ನು ಕಾದು ನೋಡ್ಬೇಕು. ಇನ್ನು ಈಗಗಾಲೇ ಅವರ ಪತ್ನಿ ವಿಜಯಲಕ್ಷ್ಮೀ ನಾಲ್ಕು ಬಾರಿ ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದು ಪತ್ನಿ ಬಂದಾಗೆಲ್ಲಾ ದರ್ಶನ್ ಊಟ ಸೇರುತ್ತಿಲ್ಲ, ಆರೋಗ್ಯ ಕೈಗೊಡುತ್ತಿದೆ ಎಂದು ಅವರ ಮುಂದೆ ಭಾವುಕರಾಗಿದ್ದಾರೆ ಎನ್ನಲಾಗಿದೆ. ಹಾಗಾಗಿ ನಾಳೆ ಏನಾಗುತ್ತದೆ ಅನ್ನೋದು ಕುತೂಹಲ ಮೂಡಿಸಿದೆ.
ಇನ್ನು ನಾಳೆಗೆ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಲಿದೆ. ನಾಳೆ ಜೈಲಾಧಿಕಾರಿಗಳು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಜುಲೈ 4 ರಂದು ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದಾಗ ಅವರನ್ನು ವೀಡಿಯೋ ಕಾನ್ಫರೆನ್ಸ್ ಮೂಲರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಇನ್ನು ನಾಳೆಯೂ ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಲ್ಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ ಎಲ್ಲಾ 17 ಆರೋಪಿಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರುಪಡಿಸಲಿದ್ದಾರೆ.
ಇದರ ಮಧ್ಯೆ ಪೊಲೀಸರು ಡಿ ಗ್ಯಾಂಗ್ ಆರೋಪಿಗಳಿಗೆ ಯಾಕೆ ಜಾಮೀನು ನೀಡಬಾರದು ಎಂಬುವುದಕ್ಕೆ ಒಂದಷ್ಟು ಕಾರಣಗಳ ಪಟ್ಟಿಯನ್ನು ರೆಡಿ ಮಾಡಿದ್ದಾರೆ ಎನ್ನಲಾಗಿದೆ. ಅದರಂತೆ ನಾಳೆ ನ್ಯಾಯಾಲಯಕ್ಕ ಪೊಲೀಸರು ರಿಮಾಂಡ್ ಅರ್ಜಿ ಸಲ್ಲಿಸಲಿದ್ದಾರೆ.
ಪೊಲೀಸರು ರೆಡಿ ಮಾಡಿರುವ ಕಾರಣಗಳು ಇಂತಿವೆ
ತಾವು ಮಾಡುತ್ತಿರೋದು ಬಹು ದೊಡ್ಡ ಅಪರಾಧ ಅಂತಾ ಗೊತ್ತಿದ್ರಬ ಆರೋಪಿಗಳು ಕೊಲೆ ಮಾಡಿದ್ದಾರೆ.
ಕೊಲೆ ಬಳಿಕ ಅರೋಪಿಗಳು ಸಾಕ್ಷ್ಯ ಮಾಡಲು ಮುಂದಾಗಿದ್ದರು.
ಇನ್ನು ಆರೋಪಿಗಳು ಸಾಕ್ಷ್ಯ ನಾಶ ಮಾಡಿರುವ ಬಗ್ಗೆ FSL ರಿಪೋರ್ಟ್ ಬಂದಿಲ್ಲ.
ಒಂದೇ ವೇಳೆ ಈಗಲೇ ಅವರಿಗೆ ಜಾಮೀನು ನೀಡಿದ್ರೆ ಅವರು ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರ್ತಾರೆ
ಜಾಮೀನು ಪಡೆದ್ರೆ ಕೋರ್ಟ್ ಮುಂದೆ ವಿಚಾರಣೆಗೆ ಬಾರದೇ ತಪ್ಪಿಸಿಕೊಳ್ಳಬಹುದು
A2 (ದರ್ಶನ್) ಆರೋಪಿಗೆ ಹಣ ಮತ್ತು ಅಭಿಮಾನಿ ಬಳಗ ಇರೋದರಿಂದ ಅವರ ಮೂಲಕ ಸಾಕ್ಷಿಗಳನ್ನು ನಾಶಪಡಿಸಬಹುದು
ಜಾಮೀನು ಪಡೆದು ಆರೋಪಿಗಳು ವಿದೇಶಕ್ಕೆ ಪರಾರಿಯಾಗಬಹುದು
ಇನ್ನು ತನಿಖೆ ನಡೆಯುತ್ತಿರೋದರಿಂದ ಈಗಲೇ ಬೇಲ್ ಸಿಕ್ರೆ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಿ ತನಿಖೆಗೆ ತೊಡಕಾಗಬಹುದು.
ಈ ರೀತಿ ಒಂದಷ್ಟು ಕಾರಣಗಳನ್ನು ಪೊಲೀಸರು ಸಿದ್ಧಪಡಿಸಿಕೊಂಡಿದ್ದು, ಆರೋಪಿಗಳಿಗೆ ಸದ್ಯಕ್ಕೆ ಜಾಮೀನು ನೀಡಬಾರದು ಎಂದು ಕೋರ್ಟ್ ಗೆ ಮನವಿ ಸಲ್ಲಿಸಲಿದ್ದಾರೆ. ಮತ್ತೊಂದು ಕಡೆ ಇನ್ನೂ ಕೂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸದೇ ಇರೋದರಿಂದ ಆರೋಪಿಗಳಿಗೆ ಸದ್ಯಕ್ಕೆ ಜಾಮೀನು ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಪೊಲೀಸರು ಯಾವಾಗ ಚಾರ್ಜ್ ಶೀಟ್ ಸಲ್ಲಿಸುತ್ತಾರೆ ಎಂದು ಆರೋಪಿಗಳ ಪರವಾದ ವಕೀಲರು ಕಾದು ಕುಳಿತಿದ್ದಾರೆ.