ಮನೆ Latest News ಜೆಡಿಎಸ್ ಪಕ್ಷದ ಜನರೊಂದಿಗೆ ಜನತಾದಳ ಅಭಿಯಾನಕ್ಕೆ ಚಾಲನೆ

ಜೆಡಿಎಸ್ ಪಕ್ಷದ ಜನರೊಂದಿಗೆ ಜನತಾದಳ ಅಭಿಯಾನಕ್ಕೆ ಚಾಲನೆ

0

ಬೆಂಗಳೂರು; ಜೆಡಿಎಸ್ ಪಕ್ಷದ ಜನರೊಂದಿಗೆ ಜನತಾದಳ ಅಭಿಯಾನಕ್ಕೆ ಇಂದು ಬೆಳಗ್ಗೆ 11ಗಂಟೆಗೆ ಬೆಂಗಳೂರಿನ ಜೆಡಿಎಸ್ ಕಛೇರಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೆಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು,  ಜನರೊಂದಿಗೆ ಜನತಾ ದಳ ಅಭಿಯಾನದ ಮೂಲಕ ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡಲಿದ್ದಾರೆ. 58 ದಿನಗಳ ಕಾಲ ರಾಜ್ಯ ಪ್ರವಾಸ ಮಾಡಲಿದ್ದಾರೆ. ಪಕ್ಷ ಬಲವರ್ಧನೆ ಹಿನ್ನೆಲೆ ಜನರೊಂದಿಗೆ ಜನತಾದಳ ಅಭಿಯಾನ ನಡೆಯಲಿದೆ.

ಇನ್ನು ರಾಜ್ಯಾದ್ಯಂತ ಪಕ್ಷ ಸಂಘಟನಾ ಸಮಾವೇಶಕ್ಕೂ ಮುನ್ನ ನಿಖಿಲ್ ಟೆಂಪಲ್ ರನ್ ಕೈಗೊಂಡಿದ್ದಾರೆ. ಆದಿಚುಂಚನಗಿರಿ ಮಠಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ದರ್ಶನ ಪಡೆದಿದ್ದಾರೆ. ಕಾಲಭೈರವೇಶ್ವರ್‌ನಿಗೆ ನಿಖಿಲ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ನಿಖಿಲ್ ಕುಮಾರಸ್ವಾಮಿ ನಿರ್ಮಲಾನಂದನಾಥ ಮಹಾಸ್ವಾಮೀಜಿಯ ಆಶೀರ್ವಾದ ಪಡೆದಿದ್ದಾರೆ.

ಸಮಾವೇಶ ಆರಂಭಕ್ಕೂ ಮುನ್ನ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಹಾಗೂ ಚಿನ್ನಸ್ವಾಮಿಯಲ್ಲಿ RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣದಲ್ಲಿ ಸಾವನ್ನಪ್ಪಿದವರಿಗೆ  ಜೆಡಿಎಸ್ ನಾಯಕರು ಜೆಡಿಎಸ್ ಕಛೇರಿಯಲ್ಲಿ ಸಂತಾಪ ಸೂಚಿಸಿದರು. ಸಮಾವೇಶ ಆರಂಭಕ್ಕೂ ಮೊದಲು ಜೆಡಿಎಸ್ ನಾಯಕರಿಂದ ಮೌನಾಚಾರಣೆ ನಡೆಯಿತು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಶಾಸಕ ಶರಣಗೌಡ ಕಂದಕೂರು ಸೇರಿದಂತೆ ಹಲವರು ಭಾಗಿಯಾಗಿದ್ದರು. ಬಳಿಕ ಜನರೊಂದಿಗೆ ಜನತಾದಳ ಅಭಿಯಾನಕ್ಕೆ ಮಾಜಿ ಪ್ರಧಾನಿ ದೇವೆಗೌಡ,ಕೇಂದ್ರ ಸಚಿವ ಕುಮಾರಸ್ವಾಮಿ ಚಾಲನೆ ನೀಡಿದ್ರು.

ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಚಿತ್ರರಂಗದಲ್ಲಿ ವಿಷ್ಣುವರ್ಧನ್ ಅವರಿಗೆ ಅಣ್ಣ ಅಂತಾ ಸ್ಥಾನ ಕೊಟ್ಟಿದ್ರು. ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗೆ ಜನರು ಸ್ಥಾನ‌ ನೀಡಿದ್ದಾರೆ. ಅಪ್ಪಂದಿರ ದಿನಾಚರಣೆ ಆಚರಿಸೋಕ್ಕೆ ನನಗೆ ಒಳ್ಳೆ ಅವಕಾಶ. ಈ ಕಾರ್ಯಕ್ರಮ ಆಕಸ್ಮಿಕವಾಗಿ ಅಯೋಜನೆ ಆಯಿತು. ತಂದೆ ಅಂದ್ರೆ ನಮ್ಮ‌ ಜೀವನದ ಬೆಳಕು. ನಾನು ನಮ್ಮ‌ ತಂದೆಯಿಂದ ಹಲವು ವಿಚಾರಗಳನ್ನು ಕಲಿತಿದ್ದೇನೆ. ದೇವೇಗೌಡ್ರ ರಾಜಕೀಯ ಕಾರ್ಯ ಕೆಲಸ. ರಾಷ್ಟ್ರೀಯ ಪಕ್ಷದಲ್ಲಿ ವಂಚಿತರಾಗಿದ್ದರು. ೧೯೬೨ರಲ್ಲಿ ಜನರೇ ಹೆಗಲ ಮೇಲೆ ಕೂರಿಸಿ ಸ್ವತಂತ್ರ ಅಭ್ಯರ್ಥಿಯಾಗಿ ಶಾಸಕರನ್ನಾಗಿ ವಿಧಾನಸೌಧ ಮೆಟ್ಟಿಲು ಹತ್ತುವಂತೆ ಮಾಡ್ತಾರೆ. ಒಬ್ಬ ರೈತನ ಮಗ ದೇಶದ ಉನ್ನತ ಹುದ್ದೆ ಅಲಂಕರಿಸಿದ. ದೇವೇಗೌಡರನ್ನ ಈಶ್ವರನ ಪುತ್ರ ಎಂದೇ ಹೇಳಬಹುದು.ರಾಜ್ಯದ ಬಗ್ಗೆ ಇದ್ದ ಬದ್ದತೆ ನೋಡಿದ್ರೆ ಹಲವು ಜನರಿಗೆ ಮಾರ್ಗದರ್ಶನ ಎಂದರು.

ನನಗೆ ಒಳಗೆ ಒಂದು‌ ಆತಂಕವಿದೆ. ಎಲ್ಲರೂ ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ.ನಾನು ಪಕ್ಷದ ಸಂಘಟನೆಗೆ ಮೊದಲು ಹಾಜರಾತಿ ಆಗ್ತೇನೆ.ಹೀಗಾಗಿ ಆದಿಚುಂಚನಗಿರಿ ಬುದ್ದಿಗಳ ಜೊತೆ ಕೂತಿದ್ದೆ.ಅವರು ಅನೇಕ ಪ್ರಸ್ತಾವಿಕ ನುಡಿ ಹೇಳುತ್ತಿದ್ರು. ಹೀಗಾಗಿ ಮಧ್ಯೆ ಎದ್ದು ಬರಲು ಆಗಲಿಲ್ಲ. ಎಲ್ಲರಿಗೂ ಕ್ಷಮೆ ಕೇಳುತ್ತೇನೆ ಮುಂದೆ ಈ ರೀತಿ ಆಗಲಿಲ್ಲ. ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ. ಪಕ್ಷಕ್ಕೆ ಹೊಸ ಯುಗ ಆರಂಭವಾಗಬೇಕು. ನಾಳೆಯಿಂದ ಬಹತೇಕ ರಾಜ್ಯ,ತಾಲೂಕುಗಳಿಗೆ ಭೇಟಿ ನೀಡುತ್ತೇನೆ. ಇವತ್ತು ಬಹಳ ಉತ್ಸಾಹದಿಂ ಪಕ್ಷ ಕಟ್ಕೋಕ್ಕೆ‌ ಬಂದಿದ್ದಾರೆ. ೫೮ ದಿನಗಳ ಕಾಲ ನಿಮ್ಮ ಜೊತೆ ನಿರಂತರವಾಗಿ ಹೆಜ್ಜೆ ಹಾಕ್ತೇನೆ. ನಾನು ನಿಮ್ಮ ಜೊತೆ ಇರಲು ಪ್ರಯತ್ನಿಸುತ್ತೇ‌ನೆ. ಒಂದು ಕಡೆ ಪಕ್ಷ ಸಂಘಟನೆ ಆದ್ರೆ. ಇನ್ನೊಂದು ಕಡೆ ಸರ್ಕಾರದ ವೈಫಲ್ಯ ತೆರದಿಡಲು ಬರುತ್ತಿದ್ದೇನೆ ಎಂದರು.