ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2024-25ನೇ ಸಾಲಿನ ವಿವಿಧ ಪ್ರಶಸ್ತಿಗಳ ಘೋಷಣೆಯಾಗಿದೆ. ಈ ಬಗ್ಗೆ ವಿಕಾಸಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸುದ್ದಿಗೋಷ್ಟಿ ನಡೆಸಿದ್ರು.ಸುದ್ದಿಗೋಷ್ಟಿಯಲ್ಲಿ 2024-25ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲ್ಪಡುವ ವಿವಿಧ ಪ್ರಶಸ್ತಿಗಳನ್ನು ಸಚಿವರು ಘೋಷಣೆ ಮಾಡಿದ್ರು.
ಪ್ರಶಸ್ತಿ ವಿಜೇತರ ವಿವರ ಈ ರೀತಿಯಿದೆ..
ಬಸವ ರಾಷ್ಟ್ರೀಯ ಪುರಸ್ಕಾರ- ಡಾ. ಎಸ್.ಆರ್. ಗುಂಜಾಳ, ಧಾರವಾಡ
ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ – ಪಂಡಿತರತ್ನ ಎ. ಶಾಂತಿರಾಜ ಶಾಸ್ತ್ರಿ ಟ್ರಸ್ಟ್, ಬೆಂಗಳೂರು
ಟಿ. ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ -ಬಸಪ್ಪ ಎಚ್. ಭಜಂತ್ರಿ, ಬಾಗಲಕೋಟೆ
ಗಾನಯೋಗಿ ಪಂಡಿತ್ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ- ಬೇಗಂ ಪರ್ವೀನ್ ಸುಲ್ತಾನಾ, ಮುಂಬೈ
ಸಂಗೊಳ್ಳಿ ರಾಯಣ್ಣ ಪ್ರಶಸ್ತಿ- ಕೆ. ರಾಜಕುಮಾರ್, ಕೋಲಾರ
ಅಕ್ಕಮಹಾದೇವಿ ಪ್ರಶಸ್ತಿ – ಡಾ. ಹೇಮಾ ಪಟ್ಟಣಶೆಟ್ಟಿ, ಧಾರವಾಡ
ಪಂಪ ಪ್ರಶಸ್ತಿ- ಡಾ. ಬಿ.ಎ. ವಿವೇಕ ರೈ, ದಕ್ಷಿಣ ಕನ್ನಡ
ಪ್ರೊ. ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ – ಸ. ರಘುನಾಥ, ಕೋಲಾರ
ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ- ಡಾ. ವೈ.ಸಿ. ಭಾನುಮತಿ, ಹಾಸನ
ಬಿ.ವಿ. ಕಾರಂತ ಪ್ರಶಸ್ತಿ- ಜೆ. ಲೋಕೇಶ್, ಬೆಂಗಳೂರು
ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ – ಕೆ. ನಾಗರತ್ನಮ್ಮ, ವಿಜಯನಗರ
ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ- ಡಾ. ಎಲ್. ಹನುಮಂತಯ್ಯ, ಬೆಂಗಳೂರು
ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ- ಎಂ.ಜೆ. ಕಮಲಾಕ್ಷಿ, ಬೆಂಗಳೂರು
ಜಕಣಾಚಾರಿ ಪ್ರಶಸ್ತಿ – ಎಂ. ರಾಮಮೂರ್ತಿ, ಬೆಂಗಳೂರು
ಜಾನಪದಶ್ರೀ ಪ್ರಶಸ್ತಿ – ನಿಂಗಪ್ಪ ಭಜಂತ್ರಿ, ಕಲ್ಬುರ್ಗಿ ಮತ್ತು ದೊಡ್ಡ ಗವಿಬಸಪ್ಪ, ಚಾಮರಾಜನಗರ
ನಿಜಗುಣ ಪುರಂದರ ಪ್ರಶಸ್ತಿ – ಅನಂತ ತೇರದಾಳ, ಬೆಳಗಾವಿ
ಕುಮಾರವ್ಯಾಸ ಪ್ರಶಸ್ತಿ – ಡಾ. ಎ.ವಿ. ಪ್ರಸನ್ನ, ಹಾಸನ
ಶಾಂತಲಾ ನಾಟ್ಯ ಪ್ರಶಸ್ತಿ – ಪದ್ಮಿನಿ ರವಿ, ಬೆಂಗಳೂರು
ಸಂತ ಶಿಶುನಾಳ ಷರೀಫ ಪ್ರಶಸ್ತಿ- ಪ್ರೊ. ಎಸ್. ಮಲ್ಲಣ್ಣ, ಚಾಮರಾಜನಗರ.
ಇನ್ನು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.ಮಾರ್ಚ್ 3 ರಂದು ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯನವರ ಸಮಯವನ್ನ ಕೇಳಿದ್ದೇವೆ.ಅಧಿಕೃತವಾಗಿ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಸಚಿವರು ಇದೇ ವೇಳೆ ಹೇಳಿದ್ದಾರೆ.