ಮನೆ Blog ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ದ...

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಸಚಿವರಿಂದ ಸುದ್ದಿಗೋಷ್ಟಿ

0

ಬೆಂಗಳೂರು; ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ದ ರಾಜ್ಯದ ಸಚಿವರು ಸುದ್ದಿಗೋಷ್ಟಿ ನಡೆಸಿದ್ರು.

ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ವೈ ಹಾಗೂ ಕೇಂದ್ರ ಸಚಿವ ಎಚ್ಡಿಕೆ  ವಿರುದ್ಧ ಡಿ ನೋಟಿಫಿಕೇಷನ್ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರೆಸ್ ಮೀಟ್ ನಡೆಯಿತು. ಈ ವೇಳೆ ಯಡಿಯೂರಪ್ಪ ಹಾಗೂ ಎಚ್ಡಿಕೆ ವಿರುದ್ದ ಅಕ್ರಮ ಡಿನೋಟಿಫಿಕೇಷನ್ ದಾಖಲೆ ಬಿಡುಗಡೆ ಮಾಡಿದರು.

ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ರಾಜ್ಯಪಾಲರು ಕೆಲವು ಪ್ರಕರಣಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ.ತಪ್ಪು ಮಾಡಿದವರಿಗೇ ರಾಜ್ಯಪಾಲರು ರಕ್ಷಣೆ ನೀಡುತ್ತಿದ್ದಾರೆ.ಇವರು ಮಾಡಿದ ಅಕ್ರಮ ಒಂದೆರಡಲ್ಲ, ಇವರ ಹಲವಾರು ಅಕ್ರಮಗಳಲ್ಲಿ ಮತ್ತೊಂದು ದಾಖಲೆ ಇದು.ಆಸ್ತಿ ಇರುವುದು  ಮಠದ ಹಳ್ಳಿ ಗಂಗೇನಹಳ್ಳಿ ಬಡಾವಣೆ 7/1ಬಿ, ಸಿ ಹಾಗೂ ಡಿ ಸರ್ವೆ ನಂಬರ್ ನಲ್ಲಿ.೧.೧೧ ಎಕರೆ ಜಮೀನು ಬಿಡಿಎಗೆ ಭೂಸ್ವಾಧೀನಗೊಂಡಿರುತ್ತದೆ.ಇದನ್ನು ಡಿನೋಟಿಫೈ ಮಾಡಬೇಕು ಅಂತ ಯಾರೋ ರಾಜಶೇಖರಯ್ಯ ಅನ್ನೋರು ಅರ್ಜಿ ಕೊಡ್ತಾರೆ.ದಾರಿಯಲ್ಲಿ ಹೋಗುವ ಯಾರೋ ದಾಸಯ್ಯ ಜಮೀನಿಗೆ ಸಂಬಂಧವೇ ಇಲ್ಲದ ರಾಜಶೇಖರಯ್ಯ ಅನ್ನುವವರ ಅರ್ಜಿ ಕೊಡ್ತಾರೆ.22.08.2007 ರಲ್ಲಿ ಅರ್ಜಿ ಬಂದ ಅದೇ ದಿನ ಸಿಎಂ ಆಗಿದ್ದ ಎಚ್ಡಿಕೆ ಡಿನೋಟಿಫೈ ಮಾಡಲು ಸೂಚಿಸುತ್ತಾರೆ.ಜಮೀನಿನ ಅಸಲಿ ಮಾಲೀಕರು ೨೧ ಜನರಿದ್ದಾರೆ.೩೦ ವರ್ಷಗಳ ಹಿಂದೆಯೇ ಈ ಜಮೀನೂ ಭೂಸ್ವಾಧೀನ ಆಗಿತ್ತು.ವುದು ಭೂ ಸ್ವಾಧೀನ ಆಗಿತ್ತೋ ಆ ಜಮೀನಿಗೆ ಕುಮಾರಸ್ವಾಮಿ ಅತ್ತೆ ಅನಿತಾ ಕುಮಾರಸ್ವಾಮಿ ತಾಯಿ ಜಿಪಿಎ ಮಾಡಿಕೊಳ್ಳುತ್ತಾರೆ.ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಡಿನೋಟಿಫೈ ಮಾಡಲು ಬರುವುದಿಲ್ಲ ಎಂದು ಫೈಲ್ ತಿರಸ್ಕಾರ ಮಾಡುತ್ತಾರೆ.ಆದರೂ ಅಂದಿನ ಸಿಎಂ ಕುಮಾರಸ್ವಾಮಿ ಡಿನೋಟಿಫೈ ಮಾಡುವಂತೆ ಸೂಚಿಸುತ್ತಾರೆ ಎಂದಿದ್ದಾರೆ.

ಸರ್ಕಾರ ಬದಲಾಗಿ ಯಡಿಯೂರಪ್ಪ ಸಿಎಂ ಆಗುತ್ತಾರೆ.ಆಗ ಮತ್ತೆ ಅದೇ ಫೈಲ್ ಸಿಎಂ ಯಡಿಯೂರಪ್ಪ ಕೈಗೆ ಬರುತ್ತದೆ.ಕಾನೂನು ಗಾಳಿಗೆ ತೂರಿ ಯಡಿಯೂರಪ್ಪ ೨೦೧೦ ಜೂನ್ ೫ ರಂದು ಭೂಸ್ವಾಧೀನದಿಂದ ಕೈ ಬಿಡುತ್ತಾರೆ.ಡಿ ನೋಟಿಫಿಕೇಷನ್ ಆದ ಒಂದೇ ತಿಂಗಳಿಗೆ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವವರಿಗೆ ಶುದ್ದ ಕ್ರಯಪತ್ರ ಆಗುತ್ತದೆ .ಹೀಗೆ ಅಕ್ರಮವಾಗಿ ಡಿನೋಟಿಫೈ ಆದ ಜಮೀನು ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದೆ.ಇದು ವ್ಯವಸ್ಥಿತ ವಂಚನೆ ಹೌದೋ ಅಲ್ವೋ? ಎಂದು ಪ್ರಶ್ನಿಸಿದ್ದಾರೆ.ಇದು ನೇರವಾಗಿ ಕುಮಾರಸ್ವಾಮಿ ಆದೇಶದಿಂದಲೇ ಆಗಿದೆ.ಕುಮಾರಸ್ವಾಮಿ ಪುಟಫ್ ಮಾಡಿದ ಫೈಲ್ ಗೆ ಯಡಿಯೂರಪ್ಪ ಸಹಿ ಮಾಡಿದ್ದಾರೆ.ಸಾರ್ವಜನಿಕ ಸ್ವತ್ತನ್ನು ತಂತ್ರಗಾರಿಕೆ ಮಾಡಿ ಲೂಟಿ ಮಾಡಿದ್ದೀರ ಕುಮಾರಸ್ವಾಮಿ ಯವರೇ ಎಂದು ವಾಗ್ದಾಳಿ ನಡೆಸಿದ್ದಾಕೆ.

ಲೋಕಾಯುಕ್ತದವರು ಈ ಪ್ರಕರಣ ತನಿಖೆ ನಡೆಸುತ್ತಿದ್ದಾರೆ.ಲೋಕಾಯುಕ್ತ ತಕ್ಷಣ ಪ್ರಕರಣದ ತನಿಖೆ ಶೀಘ್ರ ಮಾಡಬೇಕು. ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ವಿರುದ್ದ ಎಫ್ ಐ ಆರ್ ದಾಖಲಾಗಿ ಒಂಭತ್ತು ವರ್ಷಗಳಾಗಿದೆ.ಹೈ ಕೋರ್ಟ್ ತನಿಖೆಗೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನೇ ಇದೆ? ಎಂದು ಸಚಿವ ಕೃಷ್ಣ ಭೈರೇಗೌಡ ಪ್ರಶ್ನೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಸಚಿವ ದಿನೇಶ್ ಗುಂಡೂರಾವ್, ಸಂತೋಷ್ ಲಾಡ್ ಉಪಸ್ಥಿತರಿದ್ದರು.