ಮನೆ Latest News ಕಾರು ಅಪಘಾತವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಗಾಯ; ಶೀಘ್ರ ಚೇತರಿಕೆಗೆ ಟ್ವೀಟ್ ಮೂಲಕ ಶುಭ...

ಕಾರು ಅಪಘಾತವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಗಾಯ; ಶೀಘ್ರ ಚೇತರಿಕೆಗೆ ಟ್ವೀಟ್ ಮೂಲಕ ಶುಭ ಹಾರೈಸಿದ ಸಿ ಟಿ ರವಿ

0

ಬೆಳಗಾವಿ: ಕಾರು ಅಪಘಾತವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿಯ ಸಮೀಪ ನಡೆದಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದಾಗ ಕಾರು ಅಪಘಾತವಾಗಿದೆ.ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ. ಇನ್ನುಅಪಘಾತದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಾರಿನಲ್ಲಿದ್ದರು ಎನ್ನಲಾಗಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.

ಕಾರು ಅಪಘಾತದಲ್ಲಿ ಗಾಯಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ  ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ. ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ. ಮೆದುಳು ಊದಿಕೊಂಡಿದೆ ಎಂದಿದ್ದಾರೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಟ್ವೀಟ್ ಮಾಡಿದ್ದು ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.