ಮನೆ Latest News ಅಂಕೋಲಾದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡಕುಸಿತ ಪ್ರಕರಣ; ಮೂರನೇ ಹಂತದ ಕಾರ್ಯಾಚರಣೆ ಆರಂಭ

ಅಂಕೋಲಾದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡಕುಸಿತ ಪ್ರಕರಣ; ಮೂರನೇ ಹಂತದ ಕಾರ್ಯಾಚರಣೆ ಆರಂಭ

0

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಹಂತದ ಕಾರ್ಯಾಚರಣೆ ಇಂದಿನಿಂದ ಆರಂಭವಾಗಿದೆ.ಡ್ರೆಜ್ಜರ್ ಹಾಗೂ ಬಾರ್ಜ್ ಯಂತ್ರವನ್ನು ಬಳಸಿಕೊಂಡು ಮೂರನೇ ಹಂತದ ಕಾರ್ಯಾಚರಣೆ ಆರಂಭಿಸಲಾಗಿದೆ.

ಗಂಗಾವಳಿ ನದಿಯಲ್ಲಿನ ಮಣ್ಣು ಗುಡ್ಡೆ ತೆರವು ಮಾಡುವ ಕಾರ್ಯ ಆರಂಭವಾಗಿದ್ದು, ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ, ಎಸ್ ಪಿ ಎಂ.ನಾರಾಯಣ ದಿಂದ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ. ಬಾರ್ಜ್ ಗೆ ವಿಶೇಷ ಪೂಜೆ ಸಲ್ಲಿಸಿ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ. ಇಂದಿನಿಂದ ಆರಂಭಗೊಂಡಿರುವ ಈ ಕಾರ್ಯಾಚರಣೆ ಹತ್ತು ದಿನಗಳ ಕಾಲ ನಡೆಯಲಿದೆ.

ಶಿರೂರು ಗುಡ್ಡಕುಸಿತ ದುರಂತದಲ್ಲಿ 11 ಮಂದಿ ಕಣ್ಮರೆಯಾಗಿದ್ದರು. ಅವರಲ್ಲಿ ಇದುವರೆಗೆ 8 ಮಂದಿ ಮೃತದೇಹ ಮಾತ್ರ ಪತ್ತೆಯಾಗಿದೆ.  ಇನ್ನುಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರಿದೆ. ಜಗನ್ನಾಥ ನಾಯ್ಕ, ಲೋಕೇಶ್, ಕೇರಳದ ಅರ್ಜುನ್‌ಗಾಗಿ ಇಂದಿನಿಂದ ಮೂರನೇ ಹಂತದ ಶೋಧ ಕಾರ್ಯಾಚರಣೆ ಆರಂಭವಾಗಿದೆ. ಇಂದಿನಿಂದ 10 ದಿನಗಳ ಕಾಲ ಗಂಗಾವಳಿ ನದಿಯಲ್ಲಿ ಡ್ರೆಜ್ಜರ್ ಕಾರ್ಯಾಚರಣೆ ನಡೆಸಲಿದೆ. ಕಾರ್ಯಾಚರಣೆ ಹಿನ್ನಲೆ ಎನ್‌ಡಿಆರ್‌ಎಫ್, ಪೊಲೀಸ್, ತಾಲೂಕು ಆಡಳಿತದ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ಉತ್ತರ ಕನ್ನಡ; ಶಿರೂರು ಗುಡ್ಡ ಕುಸಿತ ಪ್ರಕರಣ; ಮುಳುಗು ತಜ್ಞ ಈಶ್ವರ ಮಲ್ಪೆ ಶೋಧ ಕಾರ್ಯಾಚರಣೆಯಲ್ಲಿ ಲಾರಿಯ ಜಾಕ್ ಪತ್ತೆ

ಉತ್ತರ ಕನ್ನಡ; ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎರಡನೇ ಹಂತದ ಕಾರ್ಯಾಚರಣೆ ಆರಂಭ ಆಗಿದೆ. ಶಾಸಕ ಸತೀಶ್ ಸೈಲ್ ಅವರ ಅನುಮತಿಯ ಮೇರೆಗೆ ಮುಳುಗು ತಜ್ಞ ಈಶ್ವರ ಮಲ್ಪೆ ಇಂದಿನಿಂದ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಜಿಲ್ಲಾಡಳಿತದಿಂದ ಅನುಮತಿ ದೊರೆಯದ ಕಾರಣ ಶಾಸಕ ಸತೀಶ್ ಸೈಲ್ ನೇತೃತ್ವದಲ್ಲಿ ಗಂಗಾವಳಿ ನದಿಗೆ ಇಳಿದು ಈಶ್ವರ ಮಲ್ಪೆ ಶೋಧ ಕಾರ್ಯಾಚರಣೆ ನಡೆಸಿದ್ರು. ಸೇನಾ ತಂಡ ಈ ಹಿಂದೆ ಗುರುತಿಸಿದ ಜಾಗದಲ್ಲಿ ಮತ್ತೊಮ್ಮೆ ಈಶ್ವರ ಮಲ್ಪೆ ಮುಳುಗಿದ್ರು. ಕೇರಳ ರಾಜ್ಯದ ಶಾಸಕ ಆಶ್ರಫ್ ಕೂಡ ಸ್ಥಳದಲ್ಲಿ ಉಪಸ್ಥಿತರಿದ್ದಾರೆ.

ಇನ್ನು  ಶೋಧ ಕಾರ್ಯಾಚರಣೆ ವೇಳೆ ಲಾರಿಯ ಜಾಕ್ ಪತ್ತೆಯಾಗಿದೆ.ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಪತ್ತೆಯಾಗಿದೆ.ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್  ಕಾರ್ಯಾಚರಣೆ ವೇಳೆ ಲಾರಿಯ ಜಾಕ್ ಪತ್ತೆಯಾಗಿದೆ.ಇನ್ನು ಇದು ಅರ್ಜುನ್  ಓಡಿಸುತ್ತಿದ್ದ ಲಾರಿಯ ಜಾಕ್ ಎಂದು ಲಾರಿ ಮಾಲಿಕ ಮುಫಿನ್ ಖಚಿತ ಪಡಿಸಿದ್ದಾರೆ.

ಘಟನೆ ನಡೆದು 29 ನೇ ದಿನ ಗಂಗಾವಳಿ ನದಿಯಲ್ಲಿ ಈಜು ತಜ್ಞ ಈಶ್ವರ ಮಲ್ಪೆ ತಂಡದಿಂದ ಕಾರ್ಯಾಚರಣೆ ನಡೆದಿದೆ.ಲಾರಿಯ ಎರಡು ಬಿಡಿ ಭಾಗಗಳು ಗಂಗಾವಳಿ ನದಿಯಲ್ಲಿ  ಪತ್ತೆಯಾಗಿದೆ. ಒಂದು ಲಾರಿ ಬಾಗಿಲಿನ ಕೀಲು ಹಾಗೂ ಜಾಕ್ ಪತ್ತೆಯಾಗಿದೆ.ಬಾಗಿಲ ಕೀಲು ತನ್ನ ವಾಹನದಲ್ಲ  ಆದ್ರೆ ಜಾಕ್ ಮಾತ್ರ ತನ್ನ ವಾಹನದ್ದೆ ಎಂದು ನಾಪತ್ತೆ ಆದ ಬೆಂಜ್ ಲಾರಿಯ ಮಾಲೀಕ ಮುಫಿನ್  ಸ್ಪಷ್ಟಪಡಿಸಿದ್ದಾರೆ.

ಇನ್ನು ಸಂಜೆ ಆದ ಹಿನ್ನೆಲೆ ಮುಳುಗು ತಜ್ಞ ಈಶ್ವರ ಮಲ್ಪೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ. ಗಂಗಾವಳಿ ನದಿಯಲ್ಲಿ ಎರಡು ಗಂಟೆಗಳ ಕಾಲ ಈಶ್ವರ ಮಲ್ಪೆ ಶೋಧ ಕಾರ್ಯಾಚರಣೆ ಮಾಡಿದ್ದಾರೆ.ಸಂಜೆ ಆದ ಹಿನ್ನೆಲೆ ಇಂದಿನ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ. ನಾಳೆ ಬೆಳಿಗ್ಗೆ 8:30ಕ್ಕೆ ಮತ್ತೆ ಕಾರ್ಯಾಚರಣೆ ಆರಂಭಿಸಲಿದ್ದಾರೆ. ಇದೇ ವೇಳೆ ಮಾತನಾಡಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಾಚರಣೆ ಆರಂಭ ಮಾಡಿದೆವು.ನಿರಂತರ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ಮಾಡಲಾಯ್ತು. ಈ ಶೋಧ ಕಾರ್ಯಾಚರಣೆ ವೇಳೆ ಬೆಂಜ್ ಲಾರಿಯ ಜಾಕ್ ಪತ್ತೆ ಆಗಿದೆ.ಜಾಕ್ ಪತ್ತೆ ಆಗಿದ್ದ ಬಳಿಯೇ ಕೆಳಗೆ ಲಾರಿ ಇರುವುದು ಕನ್ಫರ್ಮ್ ಆಗಿದೆ.ನಾಳೆ ಬೆಳಿಗ್ಗೆ 8:30 ಕ್ಕೆ ಮತ್ತೆ ಕಾರ್ಯಾಚರಣೆ ಆರಂಭ ಮಾಡುತ್ತೇವೆ.ಲಾರಿ ಇಂತಹದ್ದೆ ಸ್ಥಳದಲ್ಲಿ ಇದೆ ಎಂಬುವುದು ಖಚಿತ ಆಯ್ತ.ಆದ್ರೆ ಆ ಲಾರಿಯ ಮೇಲೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಬಿದ್ದಿದೆ.ಮಣ್ಣನ್ನು ತೆರವು ಮಾಡುವ ಕಾರ್ಯದ ಬಳಿಕ ಮೃತ ದೇಹಗಳು ಸಿಗುವ ಸಾಧ್ಯತೆ ಇದೆ ಎಂದು ಮುಳುಗು ತಜ್ಞ ಈಶ್ವರ ಮಲ್ಪೆ ಹೇಳಿದ್ದಾರೆ.