ಮನೆ Latest News ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

0

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ್ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಧಿತ ಆರೋಪಿಗಳು.

ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಮಾಹಿತಿ ನೀಡಿದ್ದು ಮುಂಬೈ ಮೂಲದ ಗ್ಯಾಂಗ್ ನಿಂದ ದರೋಡೆ ನಡೆದಿದೆ.  ಬಂಧಿತರಿಂದ ಕಳ್ಳತನಕ್ಕೆ ಬಳಸಿದ್ದ ಫಿಯೆಟ್ ಕಾರು, ಹಣ, ಚಿನ್ನ ತುಂಬಿಕೊಂಡು ಹೋಗಿದ್ದ ಎರಡು ಗೋಣಿ ಚೀಲಗಳು, ತಲ್ವಾರ್‌, 2 ಪಿಸ್ತೂಲ್‌ ಜಪ್ತಿ ಮಾಡಿದ್ದೇವೆ ಎಂದಿದ್ದಾರೆ.

ಬ್ಯಾಂಕ್ ದರೋಡೆ ಮಾಡಿದ ಬಳಿಕ  ದರೋಡೆಕೋರರು ತಮಿಳುನಾಡಿನ ತಿರುನಲ್ವೇಲಿಗೆ ಪರಾರಿಯಾಗಿದ್ದರು.ಬಂಧಿತ ಆರೋಪಿಗಳು ತಿರುನಲ್ವೇಲಿ ಮೂಲದವರು ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಮಾಹಿತಿ ನೀಡಿದ್ದಾರೆ. ಉಳ್ಳಾಲ ತಾಲೂಕಿನ ಕೆ.ಸಿ. ರೋಡ್ ಶಾಖೆಯಲ್ಲಿ ಜನವರಿ 17 ರಂದು ದರೋಡೆ ನಡೆದಿತ್ತು. ಆರೋಪಿಗಳ ಪತ್ತೆಗೆ ಒಟ್ಟು ಎಂಟು ತನಿಖಾ ತಂಡಗಳನ್ನು ರಚಿಸಲಾಗಿತ್ತು‌. ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮಂಗಳೂರಿನ ಕೋಟೆಕಾರು ಸಹಕಾರಿ ಬ್ಯಾಂಕಲ್ಲಿ ದರೋಡೆ: ಸಿಎಂ ದಕ್ಷಿಣಕನ್ನಡ ಜಿಲ್ಲೆಯಲ್ಲಿರುವಾಗಲೇ ನಡೆದು ಹೋಯ್ತು ರಾಬರಿ

ಮಂಗಳೂರಿನ ಕೋಟೆಕಾರಿನ ಕೆಸಿ ರೋಡನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಲ್ಲಿ ದರೋಡೆ ನಡೆದಿದೆ. ಹಾಡಹಗಲೇ ಐದು ಮಂದಿಯ ತಂಡ ಕೃತ್ಯವೆಸಗಿದೆ. ಸುಮಾರು 25-35 ವರ್ಷ ವಯಸ್ಸಿನ 5-6 ಜನರ ತಂಡವೊಂದು ಹಾಡಹಗಲೇ ಬ್ಯಾಂಕ್ ಗೆ ನುಗ್ಗಿ ಕೃತ್ಯವೆಸಗಿದೆ.ಮಾಸ್ಕ್ ಧರಿಸಿ ಪಿಸ್ತೂಲ್, ತಲ್ವಾರ್ ಮತ್ತು ಚಾಕು ಸೇರಿದಂತೆ ಶಸ್ತ್ರಾಸ್ತ್ರಗಳೊಂದಿಗೆ ಬ್ಯಾಂಕ್ ಗೆ ನುಗ್ಗಿದ ತಂಡ ಆರಾಮಾವಾಗಿ ತಮ್ಮ ಕೆಲಸ ಮುಗಿಸಿ ಎಸ್ಕೇಪ್ ಆಗಿದೆ.

ಇನ್ನು ದರೋಡೆ ಕೋರರು ಬ್ಯಾಂಕ್ ಗೆ ನುಗ್ಗುವ ವೇಳೆ ಬ್ಯಾಂಕಲ್ಲಿ 4-5 ಸಿಬ್ಬಂದಿ ಇದ್ದರು ಎನ್ನಲಾಗಿದೆ. ಡಕಾಯಿತರು ಹಿಂದಿಯಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಬ್ಯಾಂಕ್ ಗೆ ನುಗ್ಗಿದ ತಂಡ ಸಿಬ್ಬಂದಿಗೆ ಬೆದರಿಕೆ ಹಾಕಿ ಹಾಡಹಗಲೇ ದರೋಡೆ ಮಾಡಿ ಪರಾರಿಯಾಗಿದೆ. ಚಿನ್ನಾಭರಣ ಮತ್ತು ಇತರ ಬೆಲೆಬಾಳುವ ವಸ್ತುಗಳು ಬ್ಯಾಂಕ್ ನಲ್ಲಿದ್ದವು. ಅದೆಲ್ಲವನ್ನು ತಂಡ ದೋಚಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ ಕದ್ದ ವಸ್ತುಗಳ ಮೌಲ್ಯ ಸುಮಾರು 10-12 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಆರೋಪಿಗಳು ಕದ್ದಿದ್ದಾರೆ ಎನ್ನಲಾಗಿದೆ. ಆರೋಪಿಗಳು ಕಪ್ಪು ಬಣ್ಣದ ಫಿಯೆಟ್ ಕಾರಿನಲ್ಲಿ ಬಂದು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಪ್ರಕರಣದ ತನಿಖೆ ನಡೆಸಲು ಮತ್ತು ಆರೋಪಿಗಳನ್ನು ಬಂಧಿಸಲು ಪೊಲೀಸ್ ತಂಡ ರಚನೆ ಮಾಡಲಾಗಿದೆ.  ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ದರೋಡೆ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮಂಗಳೂರಿನಲ್ಲೇ ಇದ್ದರು. ವಿಚಾರ ಗೊತ್ತಾಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಆರೋಪಿಗಳು. ತಪ್ಪಿಸಿಕೊಂಡಿದ್ದಕ್ಕೆ ಸಿಎಂ ಗರಂ ಆಗಿದ್ದಾರೆ.ಎಲ್ಲಾ ಟೋಲ್ ಗಳಲ್ಲಿ ತಪಾಸಣೆ ಮಾಡಿ ಕೇರಳ ಗಡಿಯಲ್ಲಿನ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ.ನಿನ್ನೆ ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಸಿಎಂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ ಮಾಡಿದ್ದಾರೆ. ಸಭೆಯಲ್ಲಿ ಘಟನೆಯ ಕುರಿತಂತೆ ಮುಖ್ಯಮಂತ್ರಿ ಸಮಗ್ರ ಮಾಹಿತಿ ಪಡೆದಿದ್ದಾರೆ. ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? .ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? .ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ?.ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಸಿಎಂ ಗರಂ ಆಗಿದ್ದಾರೆ. ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಈ ವೇಳೆ ಪೊಲೀಸರು ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ಗೊತ್ತಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ಕೊಟ್ಟಿದ್ದಾರೆ. ಈ ವೇಳೆ ಸಿಎಂ ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದುಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.